ದೇಶ

ಲೋಕಸಭೆ ಚುನಾವಣೆಗೂ ಮುನ್ನ EVM ಸರಿಪಡಿಸದಿದ್ದರೆ ಬಿಜೆಪಿ 400ಕ್ಕೂ ಹೆಚ್ಚು ಸ್ಥಾನ ಗೆಲ್ಲಬಹುದು: ಸ್ಯಾಮ್ ಪಿತ್ರೋಡಾ

2024ರ ಲೋಕಸಭೆ ಚುನಾವಣೆಗೆ ಇನ್ನೂ 4 ತಿಂಗಳು ಬಾಕಿ ಇದ್ದು, ಬಿಜೆಪಿ ಸಿದ್ಧತೆಗಳನ್ನು ತೀವ್ರಗೊಳಿಸಿದೆ. ತಯಾರಿ ಮಾಡುವ ಬದಲು, ಕಾಂಗ್ರೆಸ್ ಈಗಾಗಲೇ ಇವಿಎಂಗಳ ಮೇಲೆ ಪ್ರಶ್ನೆಗಳನ್ನು ಎತ್ತುವುದರಲ್ಲಿ ನಿರತವಾಗಿದೆ.

ನವದೆಹಲಿ: 2024ರ ಲೋಕಸಭೆ ಚುನಾವಣೆಗೆ ಇನ್ನೂ 4 ತಿಂಗಳು ಬಾಕಿ ಇದ್ದು, ಬಿಜೆಪಿ ಸಿದ್ಧತೆಗಳನ್ನು ತೀವ್ರಗೊಳಿಸಿದೆ. ತಯಾರಿ ಮಾಡುವ ಬದಲು, ಕಾಂಗ್ರೆಸ್ ಈಗಾಗಲೇ ಇವಿಎಂಗಳ ಮೇಲೆ ಪ್ರಶ್ನೆಗಳನ್ನು ಎತ್ತುವುದರಲ್ಲಿ ನಿರತವಾಗಿದೆ. ಇವಿಎಂ ದೋಷಗಳನ್ನು ಸರಿಪಡಿಸದಿದ್ದರೆ ಬಿಜೆಪಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಬಹುದು. ಈ ಚುನಾವಣೆ ಭಾರತದ ಭವಿಷ್ಯವನ್ನು ನಿರ್ಧರಿಸಲಿದೆ ಎಂದು ಪಕ್ಷದ ನಾಯಕ ಸ್ಯಾಮ್ ಪಿತ್ರೋಡಾ ಹೇಳಿದ್ದಾರೆ. 

ಇಂತಹ ಆರೋಪಗಳನ್ನು ಚುನಾವಣಾ ಆಯೋಗ ನಿರಂತರವಾಗಿ ತಿರಸ್ಕರಿಸುತ್ತಲೇ ಬಂದಿದೆ. ಆದರೂ, ಕೆಲವು ವಿರೋಧ ಪಕ್ಷದ ನಾಯಕರು ಇವಿಎಂಗಳ ಬಗ್ಗೆ ಆಗಾಗ್ಗೆ ಪ್ರಶ್ನೆಗಳನ್ನು ಎತ್ತುತ್ತಿದ್ದಾರೆ.

ಇವಿಎಂಗಳ ಮೂಲಕ ಚಲಾವಣೆಯಾದ ಶೇಕಡಾ 100ರಷ್ಟು ಮತಗಳಿಗೆ ವಿವಿಪ್ಯಾಟ್ ವ್ಯವಸ್ಥೆ ಮಾಡಬೇಕು ಎಂದು ಕಾಂಗ್ರೆಸ್ ಮತ್ತು ಇತರ ಹಲವು ವಿರೋಧ ಪಕ್ಷಗಳ ನಾಯಕರು ಒತ್ತಾಯಿಸುತ್ತಿದ್ದಾರೆ. ಅಷ್ಟೇ ಅಲ್ಲ ಈ ವಿವಿಪ್ಯಾಟ್ ಚೀಟಿಗಳನ್ನು ಬಾಕ್ಸ್ ನಲ್ಲಿ ಇಡದೇ ಮತದಾರರಿಗೆ ನೀಡಬೇಕು. ಇನ್ನು ರಾಮ ಮಂದಿರದ ಬಗ್ಗೆ ತಮ್ಮ ಹೇಳಿಕೆಯನ್ನು ತಿರುಚಲಾಗಿದೆ ಎಂದು ಸ್ಯಾಮ್ ಪಿತ್ರೋಡಾ ಸಂದರ್ಶನದಲ್ಲಿ ಹೇಳಿದ್ದಾರೆ. ಆದರೆ ಧರ್ಮವು ವೈಯಕ್ತಿಕ ವಿಷಯವಾಗಿದ್ದು, ಅದನ್ನು ರಾಜಕೀಯದೊಂದಿಗೆ ಬೆರೆಸಬಾರದು ಎಂದು ಹೇಳಿದರು. ಇಡೀ ದೇಶದಲ್ಲಿ ರಾಮಮಂದಿರದ ಬಗ್ಗೆ ಮಾತ್ರ ಚರ್ಚೆಯಾಗುತ್ತಿರುವುದಕ್ಕೆ ಬೇಸರವಾಗಿದೆ ಎಂದರು.

ಮಣಿಪುರದಿಂದ ಮುಂಬೈಗೆ ರಾಹುಲ್ ಗಾಂಧಿ ಅವರ ಭಾರತ್ ನ್ಯಾಯ್ ಯಾತ್ರೆಗೆ ಸಂಬಂಧಿಸಿದಂತೆ, ಇದು ಬಹಳ ಮುಖ್ಯ ಎಂದು ಹೇಳಿದರು. ನಾವು ಯಾವ ರೀತಿಯ ದೇಶವನ್ನು ನಿರ್ಮಿಸಬೇಕೆಂದು ನಿರ್ಧರಿಸಬೇಕು. 2024ರ ಚುನಾವಣೆಗಳು ಭಾರತದ ಭವಿಷ್ಯವನ್ನು ನಿರ್ಧರಿಸಲಿವೆ. ಸ್ಯಾಮ್ ಪಿತ್ರೋಡಾ, 'ನೀವು ಎಲ್ಲಾ ಧರ್ಮಗಳನ್ನು ಗೌರವಿಸುವ ದೇಶವನ್ನು ರಚಿಸಲು ಬಯಸುತ್ತೀರಾ? ಎಲ್ಲಾ ಸಂಸ್ಥೆಗಳು ಸ್ವಾಯತ್ತವಾಗಿ ನಡೆಯಬೇಕೇ ಅಥವಾ ಒಂದು ಧರ್ಮದ ಜನರು ಪ್ರಾಬಲ್ಯ ಹೊಂದಿರುವ ರಾಷ್ಟ್ರವನ್ನು ನಾವು ಬಯಸುತ್ತೇವೆಯೇ? ಇವಿಎಂಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಿತ್ರೋಡಾ, ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶ ಮದನ್ ಬಿ. ಲೋಕೂರ್ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿತ್ತು. ಈ ಸಮಿತಿಯ ಪ್ರಮುಖ ಶಿಫಾರಸುಗಳಲ್ಲಿ ಒಂದಾದ ಮತದಾರರಿಗೆ ವಿವಿಪ್ಯಾಟ್ ಸ್ಲಿಪ್‌ಗಳನ್ನು ಒದಗಿಸಬೇಕು ಎಂಬುದಾಗಿತ್ತು ಎಂದರು.

ಮಾಜಿ ನ್ಯಾಯಮೂರ್ತಿಗಳ ವರದಿ ಜಾರಿಗೊಳಿಸಲು ಆಗ್ರಹ
ಇದರಿಂದ ಜನರು ಯಾರಿಗೆ ಮತ ಹಾಕಿದ್ದಾರೋ ಅವರಿಗೆ ಅದು ಸಿಕ್ಕಿದೆಯೇ ಅಥವಾ ಇಲ್ಲವೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಸಾಧ್ಯವಾಗುತ್ತದೆ. ಈ ಬಗ್ಗೆ ಚುನಾವಣಾ ಆಯೋಗ ಕ್ರಮ ಕೈಗೊಳ್ಳುತ್ತದೆ ಎಂದು ಕಾಯುತ್ತಿದ್ದೆ ಆದರೆ ಆಗದೇ ಇದ್ದಾಗ ಮಾತನಾಡಬೇಕಾಯಿತು ಎಂದರು. 5 ರಾಜ್ಯಗಳಲ್ಲಿ ಚುನಾವಣೆ ನಡೆದಿದ್ದು, ಈಗ ಲೋಕಸಭೆ ಚುನಾವಣೆ ಬರಲಿದೆ ಎಂಬುದಷ್ಟೇ ಇಲ್ಲಿನ ವಿಚಾರವಲ್ಲ ಎಂದರು. ಇದು ನಂಬಿಕೆಗೆ ಸಂಬಂಧಿಸಿದ ವಿಚಾರವಾಗಿದ್ದು, ಚುನಾವಣಾ ಆಯೋಗ ಎಚ್ಚೆತ್ತುಕೊಳ್ಳಬೇಕಿದೆ ಎಂದರು. ಇಂದು ಪ್ರಜಾಪ್ರಭುತ್ವ ಒನ್ ಮ್ಯಾನ್ ಶೋ ಆಗಿ ಬದಲಾಗಿದೆ ಎಂದರು.

ಇವಿಎಂ ರಿಪೇರಿ ಮಾಡದಿದ್ದರೆ 400 ಎಂಬ ಬಿಜೆಪಿಯ ಹೇಳಿಕೆ ನಿಜವಾಗುತ್ತೆ!
400 ಸ್ಥಾನಗಳನ್ನು ಗೆಲ್ಲುವ ಬಿಜೆಪಿಯ ಹೇಳಿಕೆಯ ಕುರಿತು ಸ್ಯಾಮ್ ಪಿತ್ರೋಡಾ, 'ಅವರು ಹಾಗೆ ಭಾವಿಸಿದರೆ, ಅವರಿಗೆ ಶುಭವಾಗಲಿ. ಇದನ್ನು ದೇಶವೇ ನಿರ್ಧರಿಸಬೇಕು. ಆದರೆ ಸಾರ್ವತ್ರಿಕ ಚುನಾವಣೆಗೂ ಮುನ್ನವೇ ಇವಿಎಂಗಳ ಸಮಸ್ಯೆಯನ್ನು ಬಗೆಹರಿಸಬೇಕಾಗಿದೆ. ಇವಿಎಂಗಳನ್ನು ದುರಸ್ತಿ ಮಾಡದಿದ್ದರೆ 400ರ ವಿಚಾರ ನಿಜವಾಗಬಹುದು. ಈ ಸಮಸ್ಯೆಯನ್ನು ಪರಿಹರಿಸಿದರೆ ಅಂತಹ ಹಕ್ಕುಗಳು ತಪ್ಪು ಎಂದು ಸಾಬೀತಾಗುತ್ತದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT