ರಾಮಮಂದಿರ 
ದೇಶ

ರಾಮ ಜನ್ಮಭೂಮಿಯಿಂದ 84 ಕೋಸಿ ಪರಿಕ್ರಮ ಮಾರ್ಗದಲ್ಲಿ ಮದ್ಯ ಮಾರಾಟ ನಿಷೇಧ, ಅಂಗಡಿಗಳ ಸ್ಥಳಾಂತರ!

ಭಾರತೀಯರ ಶತಮಾನಗಳ ಕನಸು ಮುಂದಿನ ವರ್ಷ ನನಸಾಗಲಿದ್ದು ಜನವರಿ 22ಕ್ಕೆ ರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿವೆ. ಈ ಹಿನ್ನೆಲೆಯಲ್ಲಿ ರಾಮ ಜನ್ಮಭೂಮಿಯಿಂದ 84 ಕೋಸಿ ಪರಿಕ್ರಮ ಮಾರ್ಗದಲ್ಲಿ ಮದ್ಯ ಮಾರಾಟ ನಿಷೇಧಿಸಿ ಉತ್ತರ ಪ್ರದೇಶ ಸರ್ಕಾರ ಆದೇಶ ಹೊರಡಿಸಿದೆ.

ಅಯೋಧ್ಯೆ: ಭಾರತೀಯರ ಶತಮಾನಗಳ ಕನಸು ಮುಂದಿನ ವರ್ಷ ನನಸಾಗಲಿದ್ದು ಜನವರಿ 22ಕ್ಕೆ ರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿವೆ. ಈ ಹಿನ್ನೆಲೆಯಲ್ಲಿ ರಾಮ ಜನ್ಮಭೂಮಿಯಿಂದ 84 ಕೋಸಿ ಪರಿಕ್ರಮ ಮಾರ್ಗದಲ್ಲಿ ಮದ್ಯ ಮಾರಾಟ ನಿಷೇಧಿಸಿ ಉತ್ತರ ಪ್ರದೇಶ ಸರ್ಕಾರ ಆದೇಶ ಹೊರಡಿಸಿದೆ.

ಶ್ರೀರಾಮ ಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರನ್ನು ಭೇಟಿ ಮಾಡಿದ ನಂತರ ಯುಪಿ ಅಬಕಾರಿ ಸಚಿವ ನಿತಿನ್ ಅಗರ್ವಾಲ್ ಈ ಮಾಹಿತಿ ನೀಡಿದರು. ಅಯೋಧ್ಯೆಯ 84 ಕೋಸಿ ಪರಿಕ್ರಮ ಮಾರ್ಗವನ್ನು ಮದ್ಯ ನಿಷೇಧಿತ ಪ್ರದೇಶವೆಂದು ಘೋಷಿಸಲಾಗುವುದು. ಅಲ್ಲದೆ ಅದಾಗಲೇ ಇರುವ ಮದ್ಯದ ಅಂಗಡಿಗಳನ್ನು ತೆಗೆದುಹಾಕಲಾಗುವುದು ಎಂದರು.

ಅಯೋಧ್ಯೆಯೊಂದಿಗೆ ಫೈಜಾಬಾದ್, ಬಸ್ತಿ, ಅಂಬೇಡ್ಕರ್ ನಗರ, ಸುಲ್ತಾನ್‌ಪುರ ಪ್ರದೇಶಗಳನ್ನು ಶ್ರೀರಾಮ ಜನ್ಮಭೂಮಿಯ 84 ಕೋಸಿ ಪರಿಕ್ರಮ ಮಾರ್ಗದಲ್ಲಿ ಸೇರಿಸಲಾಗುವುದು. ಪರಿಕ್ರಮ ಮಾರ್ಗದಲ್ಲಿ ಮದ್ಯದಂಗಡಿ ಇರುವುದಿಲ್ಲ. ಈಗಾಗಲೇ ಇರುವ ಎಲ್ಲ ಅಂಗಡಿಗಳನ್ನು ತೆಗೆದುಹಾಕಲಾಗುವುದು. ಪರಿಕ್ರಮ ಪ್ರದೇಶದಲ್ಲಿ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗುವುದು ಎಂದು ಹೇಳಿದ್ದಾರೆ.

ವಾಸ್ತವವಾಗಿ, ಅಬಕಾರಿ ಸಚಿವ ನಿತಿನ್ ಅಗರ್ವಾಲ್ ಅವರು ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರನ್ನು ಭೇಟಿಯಾಗಲು ಬಂದಿದ್ದರು. ಸಭೆಯ ನಂತರ ಮಾತನಾಡಿದ ಅವರು, ಶ್ರೀರಾಮ ಮಂದಿರ ಕ್ಷೇತ್ರವನ್ನು ಈಗಾಗಲೇ ಮದ್ಯ ಮುಕ್ತ ಮಾಡಲಾಗಿದೆ. ಇದೀಗ 84 ಕೋಸ್ ಪರಿಕ್ರಮ ಮಾರ್ಗದಿಂದಲೂ ಮದ್ಯದಂಗಡಿಗಳನ್ನು ತೆಗೆಯಲಾಗುವುದು. ಇದಕ್ಕಾಗಿ ಅಬಕಾರಿ ಇಲಾಖೆಗೆ ಸೂಚನೆ ನೀಡಲಾಗಿದೆ.

ಇಡೀ ಅಯೋಧ್ಯೆ ಮೆಟ್ರೋಪಾಲಿಟನ್ ಪ್ರದೇಶದಲ್ಲಿ ಈ ನಿಷೇಧ ಅನ್ವಯಿಸುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ. 84 ಕೋಸಿ ಪರಿಕ್ರಮ ಮಾರ್ಗದಲ್ಲಿ ಮಾತ್ರ ಅನ್ವಯಿಸುತ್ತದೆ. ಈ ಭಾಗದಲ್ಲಿ 500ಕ್ಕೂ ಹೆಚ್ಚು ಮದ್ಯದಂಗಡಿಗಳಿವೆ ಎಂದು ಹೇಳಲಾಗುತ್ತಿದೆ. ಮದ್ಯ ನಿಷೇಧದ ಘೋಷಣೆಯ ನಂತರ ಈ ಎಲ್ಲಾ ಅಂಗಡಿಗಳನ್ನು ಮುಚ್ಚಲಾಗಿದೆ. ಈ ಕುರಿತು ಅಧಿಕಾರಿಗಳಿಗೆ ಆದೇಶ ಹೊರಡಿಸಲಾಗಿದೆ. ಅಂಗಡಿಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗುವುದು ಎಂದರು.

ಇಂದು ಅಯೋಧ್ಯೆಗೆ ಸಿಎಂ ಯೋಗಿ ಭೇಟಿ
ಜನವರಿ 22ರಂದು ರಾಮಮಂದಿರ ಉದ್ಘಾಟನೆಯಾಗಲಿದೆ. ಇಂತಹ ಪರಿಸ್ಥಿತಿಯಲ್ಲಿ ಇಂದು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅಯೋಧ್ಯೆ ಪ್ರವಾಸದಲ್ಲಿದ್ದಾರೆ. ಇಲ್ಲಿ ಅವರು ರಾಮಮಂದಿರ ಪ್ರಾಣ ಪ್ರತಿಷ್ಠಾ ಸಮಾರಂಭ ಮತ್ತು ಜನವರಿ 30ರಂದು ಪ್ರಧಾನಿ ಮೋದಿ ಆಗಮನದ ಸಿದ್ಧತೆಗಳನ್ನು ಪರಿಶೀಲಿಸಲಿದ್ದಾರೆ. ಇದಲ್ಲದೇ ಇನ್ನೂ ಹಲವು ಕಾರ್ಯಕ್ರಮಗಳನ್ನು ಪ್ರಸ್ತಾಪಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel