ದಟ್ಟ ಮಂಜು 
ದೇಶ

ವಾರಾಂತ್ಯದಲ್ಲಿ ಉತ್ತರ ಭಾರತವನ್ನು ಆವರಿಸಲಿರುವ ದಟ್ಟ ಮಂಜು: ಹವಾಮಾನ ಇಲಾಖೆ

ಮುಂದಿನ ಎರಡು ದಿನಗಳಲ್ಲಿ ಉತ್ತರ ಭಾರತವನ್ನು ದಟ್ಟ ಮಂಜು ಆವರಿಸಲಿದ್ದು, ಪೂರ್ವ ಭಾರತಕ್ಕೂ ಈ ವಾತಾವರಣ ವಿಸ್ತರಿಸಲಿದೆ ಎಂದು ಹವಾಮಾನ ಇಲಾಖೆ ರೆಡ್ ಅಲರ್ಟ್ ನೀಡಿದೆ. 

ನವದೆಹಲಿ: ಮುಂದಿನ ಎರಡು ದಿನಗಳಲ್ಲಿ ಉತ್ತರ ಭಾರತವನ್ನು ದಟ್ಟ ಮಂಜು ಆವರಿಸಲಿದ್ದು, ಪೂರ್ವ ಭಾರತಕ್ಕೂ ಈ ವಾತಾವರಣ ವಿಸ್ತರಿಸಲಿದೆ ಎಂದು ಹವಾಮಾನ ಇಲಾಖೆ ರೆಡ್ ಅಲರ್ಟ್ ನೀಡಿದೆ. 

ಶನಿವಾರ ಮತ್ತು ಭಾನುವಾರದಂದು ಪಂಜಾಬ್, ಹರಿಯಾಣ, ಉತ್ತರ ಪ್ರದೇಶ, ಮಧ್ಯಪ್ರದೇಶ ಮತ್ತು ಉತ್ತರ ರಾಜಸ್ಥಾನದ ಕೆಲವು ಭಾಗಗಳಲ್ಲಿ ಶೀತ ದಿನಗಳು ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಮುನ್ಸೂಚನೆ ಸಂಸ್ಥೆ ತಿಳಿಸಿದೆ.

ಪಂಜಾಬ್, ಪಶ್ಚಿಮ ಉತ್ತರ ಪ್ರದೇಶದ ಹಲವು ಪ್ರದೇಶಗಳಲ್ಲಿ ದಟ್ಟವಾದ ಮಂಜು ವಾತಾವರಣದಿಂದಾಗಿ ≤50 ಮೀ ವರೆಗೆ ಗೋಚರತೆ ಇರಲಿದೆ. ಈ ವಾತಾವರಣ ಜ.1 ವರೆಗೂ ಹರ್ಯಾಣ, ಚಂಡೀಗಢ, ದೆಹಲಿ, ಪೂರ್ವ ಉತ್ತರ ಪ್ರದೇಶಗಳಲ್ಲಿ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರಾಖಂಡ್, ಮಧ್ಯಪ್ರದೇಶ, ಉತ್ತರ ರಾಜಸ್ಥಾನ, ಜಾರ್ಖಂಡ್ ಗಳಲ್ಲಿ ಜ.04 ವರೆಗೆ ಬೆಳಗಿನ ಗೋಚರತೆ 50-200 ಮೀ ವರೆಗೆ ಇರಲಿದೆ ಎಂದು ತಿಳಿದುಬಂದಿದೆ. ಭಾನುವಾರ ಮತ್ತು ಜನವರಿ 2 ರಂದು ಗಂಗಾನದಿ ಪಶ್ಚಿಮ ಬಂಗಾಳ, ಒಡಿಶಾ, ಬಿಹಾರ, ಅಸ್ಸಾಂ, ಮೇಘಾಲಯ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಇದೇ ರೀತಿಯ ಪರಿಸ್ಥಿತಿ ಇರಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೌರಿಂಗ್ ಆಸ್ಪತ್ರೆ ದುರಂತ: ಕಾರ್ಯನಿರ್ವಾಹಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಸಾರ್ವಜನಿಕವಾಗಿ ನನ್ನನ್ನು ಬಂಧಿಸಿ ಅವಮಾನಿಸುವ ಅಗತ್ಯವಿಲ್ಲ: ಪವನ್ ಖೇರಾ, ತೀರ್ಪು ಕಾಯ್ದಿರಿಸಿದ ಸುಪ್ರೀಂ

ಪ. ಬಂಗಾಳದ 77 ಮತಗಟ್ಟೆಗಳಲ್ಲಿ ಮರು ಮತದಾನಕ್ಕೆ ದೂರು: ಚುನಾವಣಾ ಆಯೋಗದಿಂದ ಪರಿಶೀಲನೆ!

ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ: ಮಲ್ಲಿಕಾರ್ಜುನ ಖರ್ಗೆ; Video

ಎಲ್ಲಾ ಸರ್ಕಾರಿ ಆಸ್ಪತ್ರೆ ಕಟ್ಟಡಗಳ ಕ್ಷಮತೆ ಪರಿಶೀಲನೆಗೆ ನಿರ್ದೇಶನ; ಭಾರೀ ಮಳೆ ನಿರೀಕ್ಷೆ ಇರಲಿಲ್ಲ, ಇದ್ದಕ್ಕಿದ್ದಂತೆ ಜೋರಾಗಿ ಬಂತು: ಪರಮೇಶ್ವರ್

SCROLL FOR NEXT