ಸಾಂದರ್ಭಿಕ ಚಿತ್ರ 
ದೇಶ

ಮಧ್ಯ ಪ್ರದೇಶ: ಕ್ರಿಕೆಟ್ ಪಂದ್ಯದ ವೇಳೆ ಹೃದಯಾಘಾತ; 22 ವರ್ಷದ ವ್ಯಕ್ತಿ ಸಾವು

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹಳ್ಳಿಯೊಂದರಲ್ಲಿ 22 ವರ್ಷದ ವ್ಯಕ್ತಿಯೊಬ್ಬರು ಕ್ರಿಕೆಟ್ ಆಡುತ್ತಿದ್ದಾಗ ಹೃದಯಾಘಾತಕ್ಕೆ ಒಳಗಾಗಿ ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ಖಾರ್ಗೋನ್: ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹಳ್ಳಿಯೊಂದರಲ್ಲಿ 22 ವರ್ಷದ ವ್ಯಕ್ತಿಯೊಬ್ಬರು ಕ್ರಿಕೆಟ್ ಆಡುತ್ತಿದ್ದಾಗ ಹೃದಯಾಘಾತಕ್ಕೆ ಒಳಗಾಗಿ ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ಖಾರ್ಗೋನ್ ಜಿಲ್ಲೆಯ ಬಲ್ವಾಡ ಪೊಲೀಸ್ ಠಾಣಾ ವ್ಯಾಪ್ತಿಯ ಕಟ್ಕೂಟ್ ಗ್ರಾಮದಲ್ಲಿ ಶನಿವಾರ ಸಂಜೆ ನಡೆದ ಪಂದ್ಯದಲ್ಲಿ ಬೌಲಿಂಗ್ ಮಾಡುವಾಗ ಇಂದಲ್ ಸಿಂಗ್ ಜಾಧವ್ ಬಂಜಾರಾ ಅವರು ಅಸ್ವಸ್ಥರಾಗಿದ್ದರು ಎಂದು ಅವರು ಹೇಳಿದರು.

ಬಂಜಾರಾ ಅವರನ್ನು ಕೂಡಲೇ ಆಸ್ಪತ್ರೆಗೆ ಕರೆತರಲಾಯಿತು ಎಂದು ಬದ್ವಾಹ್ ಸಿವಿಲ್ ಆಸ್ಪತ್ರೆಯ ಡಾ ವಿಕಾಸ್ ತಲ್ವೇರ್ ಹೇಳಿದ್ದಾರೆ.

ಅವರು ಹೃದಯಾಘಾತದಿಂದ ಮೃತಪಟ್ಟಿದ್ದು, ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ಅವರ ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ ಎಂದು ಅವರು ಹೇಳಿದರು.

ಬಂಜಾರಾ ಅವರನ್ನು ಆಸ್ಪತ್ರೆಗೆ ಕರೆತಂದ ಜನರು ಪಂದ್ಯದ ವೇಳೆ ಅವರಿಗೆ ಎದೆನೋವು ಕಾಣಿಸಿಕೊಂಡಿತು ಎಂದು ಹೇಳಿದ್ದಾಗಿ ಡಾ. ತಲ್ವೇರ್ ಹೇಳಿದ್ದಾರೆ.

ಜಾಧವ್ ಬಂಜಾರಾ ಅವರು ಬೌಲಿಂಗ್ ಮಾಡುವಾಗ ಎದೆನೋವು ಎಂದು ದೂರಿದರು ಮತ್ತು ಮರದ ಕೆಳಗೆ ಕುಳಿತರು. ತಂಡವು ಗೆದ್ದ ನಂತರ, ಬಂಜಾರಾ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ನಂತರ ಅಲ್ಲಿಂದ ಅವರನ್ನು ಬದ್ವಾಹ್ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಅವರು ಮಾರ್ಗಮಧ್ಯದಲ್ಲಿ ಮೃತಪಟ್ಟರು ಎಂದು ಗ್ರಾಮಸ್ಥರಾದ ಶಾಲಿಗ್ರಾಮ್ ಗುರ್ಜಾರ್ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಕ್ಕಳ ಸಾವಿಗೆ ಪ್ರತೀಕಾರ: ಇಸ್ರೇಲ್-ಅಮೆರಿಕ, ಗಲ್ಫ್ ದೇಶಗಳ ಮೇಲೆ ದಾಳಿ ನಿಲ್ಲಲ್ಲ; ಇರಾನ್ ಹೊಸ ಸರ್ವೋಚ್ಛ ನಾಯಕ ವಾರ್ನಿಂಗ್!

No shortage of fuel: ಹಾರ್ಮುಜ್ ಜಲಸಂಧಿ ತಲುಪಿಸಬಹುದಾದ ತೈಲಕ್ಕಿಂತ ಹೆಚ್ಚಿನದ್ದು ಬೇರೆಡೆಯಿಂದ ಭಾರತ ತಲುಪಿದೆ; ಪೆಟ್ರೋಲಿಯಂ ಸಚಿವ

ಮಧ್ಯಪ್ರಾಚ್ಯ ಯುದ್ಧಗ್ರಸ್ತ: ತೈಲ, ಅನಿಲ ಪೂರೈಕೆ ವ್ಯತ್ಯಯ ಸಂಕಷ್ಟ; ಆದರೂ ರಹಸ್ಯ'ಭೂಗತ ಗುಹೆ'ಗಳಿಂದ ಭಾರತಕ್ಕೆ No Tension!

ನಮ್ಮ ಶಕ್ತಿ ಇರಾನ್ ನಿರ್ನಾಮಕ್ಕೆ ಮೀಸಲು, ಹಾರ್ಮುಜ್ ಜಲಸಂಧಿಯಲ್ಲಿ ಟ್ಯಾಂಕರ್ ಗಳಿಗೆ ಬೆಂಗಾವಲು ನೀಡಲ್ಲ: ಅಮೆರಿಕ

ಮಾರ್ಚ್ 16 ರಂದು ರಾಜ್ಯದ ಎರಡು ಕ್ಷೇತ್ರಗಳ ಉಪ ಚುನಾವಣೆ ಸೇರಿದಂತೆ ಐದು ರಾಜ್ಯಗಳ ಚುನಾವಣೆ ಘೋಷಣೆ ಸಾಧ್ಯತೆ

SCROLL FOR NEXT