ಅರವಿಂದ್ ಪನಗಾರಿಯಾ 
ದೇಶ

16ನೇ ಕೇಂದ್ರ ಹಣಕಾಸು ಆಯೋಗದ ಅಧ್ಯಕ್ಷರಾಗಿ ಅರವಿಂದ್ ಪನಗಾರಿಯಾ ನೇಮಕ

ನೀತಿ ಆಯೋಗದ ಮಾಜಿ ಅಧ್ಯಕ್ಷ ಅರವಿಂದ್ ಪನಗಾರಿಯಾ ಅವರನ್ನು 16ನೇ ಕೇಂದ್ರ ಹಣಕಾಸು ಆಯೋಗದ ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ. 2015 ರಿಂದ 2017ರವರೆಗೆ ಪನಗಾರಿಯಾ ಅವರು ನೀತಿ ಆಯೋಗದ ಅಧ್ಯಕ್ಷರಾಗಿದ್ದರು.

ನವದೆಹಲಿ: ನೀತಿ ಆಯೋಗದ ಮಾಜಿ ಅಧ್ಯಕ್ಷ ಅರವಿಂದ್ ಪನಗಾರಿಯಾ ಅವರನ್ನು 16ನೇ ಕೇಂದ್ರ ಹಣಕಾಸು ಆಯೋಗದ ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ. 

ಹಣಕಾಸು ಸಚಿವಾಲಯದ ಜಂಟಿ ಕಾರ್ಯದರ್ಶಿ ರಿತ್ವಿಕ್ ರಂಜನಂ ಪಾಂಡೆ ಅವರು ಆಯೋಗದ 'ಮುಂಗಡ ಕೋಶ'ದ ವಿಶೇಷ ಕರ್ತವ್ಯಾಧಿಕಾರಿಯಾಗಿರುತ್ತಾರೆ ಎಂದು ಸರ್ಕಾರ ತನ್ನ ಅಧಿಸೂಚನೆಯಲ್ಲಿ ತಿಳಿಸಿದೆ. 

2015 ರಿಂದ 2017ರವರೆಗೆ ಪನಗಾರಿಯಾ ಅವರು ನೀತಿ ಆಯೋಗದ ಅಧ್ಯಕ್ಷರಾಗಿದ್ದರು. ಅರವಿಂದ್ ಪನಗಾರಿಯಾ ಅವರು ಭಾರತ-ಅಮೆರಿಕನ್ ಪ್ರಮುಖ ಆರ್ಥಿಕ ತಜ್ಞ ಎಂದು ಗುರುತಿಸಿಕೊಂಡಿದ್ದಾರೆ. 

ಮಾಧ್ಯಮ ವರದಿಗಳ ಪ್ರಕಾರ, ಪನಗಾರಿಯಾ ಅವರು ಈ ವರ್ಷದ ಆರಂಭದಲ್ಲಿ 2026ರ ವೇಳೆಗೆ ಭಾರತವು ಮೂರನೇ ಅತಿದೊಡ್ಡ ಆರ್ಥಿಕತೆಯಾಗುತ್ತದೆ ಎಂದು ಹೇಳಿದ್ದರು. 

'ಭಾರತದ ಜಿಡಿಪಿ 2026 ರಲ್ಲಿ 5 ಟ್ರಿಲಿಯನ್ ಡಾಲರ್ ಮತ್ತು 2027 ರಲ್ಲಿ 5.5 ಟ್ರಿಲಿಯನ್ ಡಾಲರ್ ತಲುಪುತ್ತದೆ. ಇದರರ್ಥ, 2026ರ ಅಂತ್ಯದ ವೇಳೆಗೆ ಭಾರತವು ವಿಶ್ವದ ಮೂರನೇ-ಅತಿದೊಡ್ಡ ಆರ್ಥಿಕತೆಯಾಗುವತ್ತ ಮುನ್ನುಗ್ಗುವ ಅನುಕೂಲಕರ ಸೂಚನೆಗಳಿವೆ. ಅಸ್ತಿತ್ವದಲ್ಲಿರುವ ಮುನ್ಸೂಚನೆಗಳು ನಿರೀಕ್ಷಿಸುವುದಕ್ಕಿಂತ ಮುಂಚಿತವಾಗಿಯೇ ಈ ಮೈಲಿಗಲ್ಲನ್ನು ಸಾಧಿಸುವ ಎಲ್ಲಾ ಸಾಧ್ಯತೆಯಿದೆ' ಎಂದು ಖ್ಯಾತ ಅರ್ಥಶಾಸ್ತ್ರಜ್ಞರನ್ನು ಉಲ್ಲೇಖಿಸಿ ಬಿಸಿನೆಸ್ ಟುಡೇ ವರದಿ ಮಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT