ರಾಹುಲ್ ಗಾಂಧಿ 
ದೇಶ

'ರಾಹುಲ್ ಗಾಂಧಿ ಓರ್ವ ಸಾಮಾನ್ಯ ಕಾಂಗ್ರೆಸ್ ಸಂಸದ, ಅವರನ್ನು ಹೆಚ್ಚು ಹೈಲೈಟ್ ಮಾಡಬೇಡಿ': ದಿಗ್ವಿಜಯ ಸಿಂಗ್ ಸೋದರ

ರಾಹುಲ್ ಗಾಂಧಿ ಒಬ್ಬ ಸಾಮಾನ್ಯ ಪಕ್ಷದ ಕಾರ್ಯಕರ್ತ ಮತ್ತು ಸಂಸದರಾಗಿದ್ದು, ಅವರನ್ನು ಅಷ್ಟೊಂದು ಹೈಲೈಟ್ ಮಾಡಬಾರದು ಎಂದು ಕಾಂಗ್ರೆಸ್ ಮಾಜಿ ಸಂಸದ ಲಕ್ಷ್ಮಣ್ ಸಿಂಗ್ ಹೇಳಿದ್ದಾರೆ.

ಭೋಪಾಲ್: ರಾಹುಲ್ ಗಾಂಧಿ ಒಬ್ಬ ಸಾಮಾನ್ಯ ಪಕ್ಷದ ಕಾರ್ಯಕರ್ತ ಮತ್ತು ಸಂಸದರಾಗಿದ್ದು, ಅವರನ್ನು ಅಷ್ಟೊಂದು ಹೈಲೈಟ್ ಮಾಡಬಾರದು ಎಂದು ಕಾಂಗ್ರೆಸ್ ಮಾಜಿ ಸಂಸದ ಲಕ್ಷ್ಮಣ್ ಸಿಂಗ್ ಹೇಳಿದ್ದಾರೆ.

ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ ಸಿಂಗ್ ಅವರ ಕಿರಿಯ ಸಹೋದರರಾದ ಲಕ್ಷ್ಮಣ್ ಸಿಂಗ್ ಅವರು ಮಧ್ಯ ಪ್ರದೇಶದ ಗುಣಾ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದರು.

ಲೋಕಸಭೆಯಲ್ಲಿ ಹೇಳಿಕೆ ನೀಡುವಾಗ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ಮುಖವನ್ನು ಟಿವಿಯಲ್ಲಿ ತೋರಿಸುವುದು ಕಡಿಮೆ ಎಂಬ ಸುದ್ದಿಗಾರ ಪ್ರಶ್ನೆಗೆ ಉತ್ತರಿಸಿದ ಅವರು, 'ರಾಹುಲ್ ಗಾಂಧಿ ಅವರು ಸಂಸದರಾಗಿದ್ದಾರೆ. ಅವರು (ಪಕ್ಷದ) ಅಧ್ಯಕ್ಷರಲ್ಲ ಮತ್ತು ಕಾಂಗ್ರೆಸ್ ಕಾರ್ಯಕರ್ತರಷ್ಟೆ. ಇದನ್ನೂ ಹೊರತುಪಡಿಸಿ ರಾಹುಲ್ ಗಾಂಧಿ ಏನೂ ಅಲ್ಲ' ಎಂದರು.

'ನೀವು (ಮಾಧ್ಯಮಗಳು) ರಾಹುಲ್ ಗಾಂಧಿಯನ್ನು ಇಷ್ಟು ಹೈಲೈಟ್ ಮಾಡಬಾರದು ಮತ್ತು ನಾವೂ ಕೂಡ ಅವರನ್ನು ಹೈಲೈಟ್ ಮಾಡಬಾರದು. ರಾಹುಲ್ ಗಾಂಧಿ ಕೇವಲ ಸಂಸದರಾಗಿದ್ದು, ಅವರು ಪಕ್ಷದ ಉಳಿದ ಸಂಸದರಂತೆಯೇ ಸಮಾನರು' ಎಂದು ಐದು ಬಾರಿ ಸಂಸದ ಹಾಗೂ ಮೂರು ಬಾರಿ ಶಾಸಕರಾಗಿರುವ ಲಕ್ಷ್ಮಣ್ ಸಿಂಗ್ ಹೇಳಿದ್ದಾರೆ.

'ಯಾವುದೇ ಒಬ್ಬ ವ್ಯಕ್ತಿಯು ಹುಟ್ಟಿನಿಂದ ದೊಡ್ಡವರು ಆಗುವುದಿಲ್ಲ. ರಾಹುಲ್ ಗಾಂಧಿಯನ್ನು ಅಂತಹ ದೊಡ್ಡ ನಾಯಕ ಎಂದು ಪರಿಗಣಿಸಬೇಡಿ. ನಾನು ಹಾಗೆ ಪರಿಗಣಿಸಿಲ್ಲ. ಅವರು ಸಾಮಾನ್ಯ ಸಂಸದ. ನೀವು ಅವರನ್ನು ಹೈಲೈಟ್ ಮಾಡುತ್ತೀರೋ ಇಲ್ಲವೋ ಎಂಬುದು ಮುಖ್ಯವಲ್ಲ' ಎಂದು ಲಕ್ಷ್ಮಣ್ ಸಿಂಗ್ ಹೇಳಿದರು.

ಕಳೆದ ತಿಂಗಳು ನಡೆದ ಮಧ್ಯಪ್ರದೇಶ ಚುನಾವಣೆಯಲ್ಲಿ ಬಿಜೆಪಿಯ ಪ್ರಿಯಾಂಕಾ ಪೆಂಚಿ ಗುನಾ ಜಿಲ್ಲೆಯ ಚಚೌರಾ ವಿಧಾನಸಭಾ ಕ್ಷೇತ್ರದಿಂದ ಲಕ್ಷ್ಮಣ್ ಸಿಂಗ್ ಅವರನ್ನು 61,000 ಕ್ಕೂ ಹೆಚ್ಚು ಮತಗಳಿಂದ ಸೋಲಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT