ಸಾಂದರ್ಭಿಕ ಚಿತ್ರ 
ದೇಶ

ದೇವಸ್ಥಾನದಿಂದ ಹಣ ಕದ್ದ ಶಂಕೆ; ಯುವಕನನ್ನು ಹತ್ಯೆಗೈದ ಗುಂಪು, ನಾಲ್ವರ ವಿರುದ್ಧ ಪ್ರಕರಣ ದಾಖಲು

ಪೋರಬಂದರ್ ನಗರದ ಬೋಖಿರಾ ಪ್ರದೇಶದಲ್ಲಿ ಗುರುವಾರ ರಾತ್ರಿ ದೇವಸ್ಥಾನದಿಂದ ಹಣವನ್ನು ಕದ್ದ ಆರೋಪದ ಮೇಲೆ ಯುವಕನೊಬ್ಬನನ್ನು ಗುಂಪೊಂದು ಹತ್ಯೆ ಮಾಡಿದ್ದು, ನಾಲ್ವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಪೋರಬಂದರ್: ಪೋರಬಂದರ್ ನಗರದ ಬೋಖಿರಾ ಪ್ರದೇಶದಲ್ಲಿ ಗುರುವಾರ ರಾತ್ರಿ ದೇವಸ್ಥಾನದಿಂದ ಹಣವನ್ನು ಕದ್ದ ಆರೋಪದ ಮೇಲೆ ಯುವಕನೊಬ್ಬನನ್ನು ಗುಂಪೊಂದು ಹತ್ಯೆ ಮಾಡಿದ್ದು, ನಾಲ್ವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಸಂತ್ರಸ್ತನ ತಂದೆ ಕಿಶೋರ್ ಬಥಿಯಾ ಮಾತನಾಡಿ, 'ನನ್ನ 26 ವರ್ಷದ ಮಗ ಶ್ಯಾಮ್ ಬೀದಿಬದಿ ವ್ಯಾಪಾರಿಯಾಗಿದ್ದು, ಸೈಕಲ್‌ನಲ್ಲಿ ಸಂಚರಿಸುವ ಮೂಲಕ ಆ್ಯಸಿಡ್ ಮತ್ತು ಫಿನೈಲ್ ಮಾರಾಟ ಮಾಡುತ್ತಿದ್ದನು. ಬುಧವಾರ ಬೋಖಿರಾ ಪ್ರದೇಶಕ್ಕೆ ಪ್ರಯಾಣಿಸುತ್ತಿದ್ದಾಗ ವಚಾರ್ಡಾ ದಾದಾ ದೇವಸ್ಥಾನದ ಟ್ರಸ್ಟಿಗಳಾದ ಎಭಾಲ್ ಕಡ್ಚಾ, ಲಾಖಾ ಭೋಗೇಶ್ರಾ, ರಾಜು ಬೋಖಿರಿಯಾ ಮತ್ತು ಇತರರು ಆತನನ್ನು ತಡೆದು ಥಳಿಸಿದ್ದಾರೆ. ನಂತರ ಆತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಆದರೆ, ಆತ ಸಂಜೆ ಪೊಲೀಸ್ ಕಸ್ಟಡಿಯಲ್ಲಿ ಮೃತಪಟ್ಟಿದ್ದಾನೆ' ಎಂದು ದೂರಿದ್ದಾರೆ.

ವಾಚರ್ಡಾ ದಾದಾ ದೇವಸ್ಥಾನದಲ್ಲಿ ಯಾರೋ ಹಣ ಕದ್ದಿದ್ದಾರೆ. ಇದರಿಂದ ದೇವಸ್ಥಾನದ ಟ್ರಸ್ಟಿಗಳು ಶ್ಯಾಮ್ ತಾನೇ ದೇವಸ್ಥಾನದಿಂದ ಹಣವನ್ನು ಕದ್ದಿರುವುದಾಗಿ ತಪ್ಪೊಪ್ಪಿಕೊಳ್ಳುವಂತೆ ಹೇಳಲು ಥಳಿಸಿದ್ದಾರೆ. ತಾನು ಮಾಡದ ಅಪರಾಧವನ್ನು ಒಪ್ಪಿಕೊಳ್ಳುವಂತೆ ಒತ್ತಾಯಿಸಿದ್ದಾರೆ ಎಂದು ದೂರುದಾರರು ತಿಳಿಸಿದ್ದಾರೆ.

ಶ್ಯಾಮ್ ಅನೇಕ ಆಂತರಿಕ ಗಾಯಗಳಿಂದ ಮೃತಪಟ್ಟಿದ್ದಾನೆ ಎಂದು ಮರಣೋತ್ತರ ಪರೀಕ್ಷೆಯ ವರದಿ ಬಹಿರಂಗಪಡಿಸಿದೆ ಎಂದು ಅವರು ಹೇಳಿದರು.

ಸ್ಥಳೀಯ ಅಪರಾಧ ವಿಭಾಗದ ಪೊಲೀಸ್ ಇನ್ಸ್‌ಪೆಕ್ಟರ್ ಎಚ್.ಕೆ. ಶ್ರೀಮಾಲಿ ಮಾತನಾಡಿ, 'ಆರೋಪಿಗಳು ಸಂತ್ರಸ್ತನನ್ನು ಥಳಿಸಿದ ಬಗ್ಗೆ ನಾವು ಪುರಾವೆಗಳನ್ನು ಸಂಗ್ರಹಿಸಿದ್ದೇವೆ ಮತ್ತು 4 ಆರೋಪಿಗಳು ಮತ್ತು ಗುಂಪು ಹತ್ಯೆಯಲ್ಲಿ ಭಾಗಿಯಾಗಿರುವ ಎಲ್ಲರನ್ನು ಹುಡುಕುತ್ತಿದ್ದೇವೆ' ಎಂದು ಸುದ್ದಿಸಂಸ್ಥೆ ಐಎಎನ್‌ಎಸ್‌ಗೆ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT