ಇಂಡಿಗೋ ವಿಮಾನ 
ದೇಶ

ಉದಯ್ ಪುರ ತಲುಪಬೇಕಿದ್ದ ಏರ್ ಇಂಡಿಗೋ ವಿಮಾನದ ಪ್ರಯಾಣಿಕ ಬಂದಿಳಿದಿದ್ದು ಪಾಟ್ನಾದಲ್ಲಿ!: ತನಿಖೆಗೆ ಆದೇಶ

ಇತ್ತೀಚಿನ ದಿನಗಳಲ್ಲಿ ಪ್ರಯಾಣಿಕ ವೈಮಾನಿಕ ಕ್ಷೇತ್ರದಲ್ಲಿ ವಿಚಿತ್ರ, ವಿಲಕ್ಷಣ ಎನ್ನುವಂತಹ ಘಟನೆಗಳು ನಡೆಯುತ್ತಿದೆ. 

ನವದೆಹಲಿ: ಇತ್ತೀಚಿನ ದಿನಗಳಲ್ಲಿ ಪ್ರಯಾಣಿಕ ವೈಮಾನಿಕ ಕ್ಷೇತ್ರದಲ್ಲಿ ವಿಚಿತ್ರ, ವಿಲಕ್ಷಣ ಎನ್ನುವಂತಹ ಘಟನೆಗಳು ನಡೆಯುತ್ತಿದೆ. 

ಪಾಟ್ನಾಗೆ ತೆರಳಬೇಕಿದ್ದ ಪ್ರಯಾಣಿಕನೋರ್ವ ಉದಯ್ ಪುರಕ್ಕೆ ತೆರಳುವ ವಿಮಾನವನ್ನು ಹತ್ತಿದ್ದು, ತಾನು ತಲುಪಬೇಕಿದ್ದ ಪ್ರದೇಶಕ್ಕಿಂತ 1,400 ಕಿ.ಮೀ ದೂರದ ಪ್ರದೇಶದಲ್ಲಿ ಬಂದಿಳಿದಿದ್ದಾನೆ. ಈ ಘಟನೆ ಬಗ್ಗೆ ಡಿಜಿಸಿಎ ತನಿಖೆಗೆ ಆಗ್ರಹಿಸಿದ್ದಾರೆ. 

ಈ ಘಟನೆ ಜ.30 ರಂದು ನಡೆದಿದ್ದು, ಮರುದಿನ ಆತನನ್ನು ಆತ ತಲುಪಬೇಕಿದ್ದ ಪ್ರದೇಶಕ್ಕೆ ಕಳಿಸಲಾಯಿತು. ಪ್ರಯಾಣಿಕ ಅಫ್ಸರ್ ಹುಸೇನ್, ಇಂಡಿಗೋ ವಿಮಾನ 6E-214 ದ ಮೂಲಕ ಟಿಕೆಟ್ ಬುಕ್ ಮಾಡಿದ್ದರು. ಜ.30 ರಂದು ದೆಹಲಿ ವಿಮಾನ ನಿಲ್ದಾಣ ತಲುಪಿ ನಿಗದಿಯಾಗಿದ್ದ ವಿಮಾನ ಏರಲು ಸಜ್ಜಾಗಿದ್ದರು. ಆದರೆ ಪ್ರಮಾದವಶಾತ್ ಉದಯ್ ಪುರಕ್ಕೆ ನಿಗದಿಯಾಗಿದ್ದ ವಿಮಾನ 6E-319 ಗೆ ಏರಿದ್ದರು.
 
ಉದಯ್ ಪುರ ವಿಮಾನ ನಿಲ್ದಾಣದಲ್ಲಿ ಬಂದಿಳಿದಾಗಲೇ ಆತನಿಗೆ ಆತನ ತಪ್ಪು ಅರಿವಾಗಿದೆ. ಈ ಬಳಿಕ ಏರ್ ಲೈನ್ ಗೆ ಆಗಿರುವ ಪ್ರಮಾದ ಬಗ್ಗೆ ವಿವರಿಸಿದ್ದಾರೆ. ಆತನನ್ನು ಇಂಡಿಗೋ ವಿಮಾನ ಪಾಟ್ನಾಗೆ ಜ.31 ರಂದು ತಲುಪಿಸಿತು.

ಇದನ್ನೂ ಓದಿ: ಬೆಂಗಳೂರು: ಏರ್‌ಪೋರ್ಟ್ ಶಟಲ್ ಬಸ್ ಬರಲು ವಿಳಂಬ, ತಾಸುಗಟ್ಟಲೆ ಆಕಾಶ ಏರ್ ವಿಮಾನದಲ್ಲೇ ಕುಳಿತ ಪ್ರಯಾಣಿಕರು!
 
ಈ ಘಟನೆಯ ಬಗ್ಗೆ ತನಿಖೆಗೆ ನಡೆಸಿ ಪ್ರಯಾಣಿಕರ ಬೋರ್ಡಿಂಗ್ ಪಾಸ್ ನ್ನು ಏಕೆ ಸ್ಕ್ಯಾನ್ ಮಾಡಲಿಲ್ಲ ಎಂಬುದರ ಬಗ್ಗೆ ತಿಳಿದುಕೊಳ್ಳಲಾಗುತ್ತದೆ. ಪ್ರಯಾಣಿಕರು ವಿಮಾನ ಏರುವ ಮುನ್ನ ಎರಡು ಕೇಂದ್ರಗಳಲ್ಲಿ ಅವರ ಬೋರ್ಡಿಂಗ್ ಪಾಸ್ ನ್ನು ಪರಿಶೀಲಿಸಲಾಗುತ್ತದೆ. ಆದರೂ ಈ ಘಟನೆ ಹೇಗೆ ನಡೆಯಿತು ಎಂಬ ಬಗ್ಗೆ ಡಿಜಿಸಿಎ ತನಿಖೆಗೆ ಆದೇಶಿಸಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT