ಬಾಬಾ ರಾಮದೇವ್ 
ದೇಶ

ಭಯೋತ್ಪಾದನೆ ಮಾಡಿದ್ರೆ, ಹಿಂದೂ ಯುವತಿಯರನ್ನು ಅಪಹರಿಸಿ ನಮಾಜ್ ಮಾಡಿದ್ರೆ ಎಲ್ಲಾ ಸರಿಹೋಗುತ್ತಾ?: ಬಾಬಾ ರಾಮದೇವ್

ಯೋಗ ಗುರು ಬಾಬಾ ರಾಮ್‌ದೇವ್ ಅವರು ಗುರುವಾರ ರಾಜಸ್ಥಾನದ ಬಾರ್ಮರ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಇತರ ಧರ್ಮಗಳ ಬಗ್ಗೆ ಗೇಲಿ ಮಾಡುವ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಬಾರ್ಮೆರ್(ರಾಜಸ್ಥಾನ): ಯೋಗ ಗುರು ಬಾಬಾ ರಾಮ್‌ದೇವ್ ಅವರು ಗುರುವಾರ ರಾಜಸ್ಥಾನದ ಬಾರ್ಮರ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಇತರ ಧರ್ಮಗಳ ಬಗ್ಗೆ ಗೇಲಿ ಮಾಡುವ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಓರ್ವ ಮುಸಲ್ಮಾನ ಭಯೋತ್ಪಾದಕನಾಗಿದ್ದರೂ ಖಂಡಿತ ನಮಾಜ್ ಮಾಡುತ್ತಾನೆ. ನಮಾಜ್ ಮಾಡಿದ ನಂತರ ಅವರು ತಮಗೆ ಬೇಕಾದದ್ದನ್ನು ಮಾಡುತ್ತಾರೆ. ಹಿಂದೂ ಹೆಣ್ಣುಗಳನ್ನು ಅಪಹರಿಸುತ್ತೀರಾ. ಜಿಹಾದ್ ಹೆಸರಿನಲ್ಲಿ ಭಯೋತ್ಪಾದಕರಾಗುತ್ತೀರಾ. ಮತ್ತೊಬ್ಬರ ಜೀವವನ್ನು ತೆಗೆಯುತ್ತಾರೆ. ಆದರೆ ಹಿಂದೂ ಧರ್ಮ ಆಗಲ್ಲ. ಜಗಳ ಮತ್ತು ಪಾಪದಿಂದ ದೂರವಿರಬೇಕು ಎಂದು ಹಿಂದೂ ಧರ್ಮ ಕಲಿಸುತ್ತದೆ ಎಂದರು.

ನಮಾಜ್ ಮಾಡುವುದು ಅತೀ ಮುಖ್ಯ. ಆದರೆ ನಮಾಜ್ ಮಾಡಿದ ನಂತರ ಏನು ಮಾಡಿದರೂ ಅದು ಸಮರ್ಥನೀಯವಾಗಿದೆ. ಜಿಹಾದ್ ಹೆಸರಿನಲ್ಲಿ ಭಯೋತ್ಪಾದಕರಾಗಿ, ಹಿಂದೂ ಹುಡುಗಿಯರನ್ನು ಅಪಹರಿಸುವುದು ಅಥವಾ ನಿಮ್ಮ ಮನಸ್ಸಿಗೆ ಬಂದದ್ದನ್ನು ಮಾಡುವುದು. ಸನಾತನ ಧರ್ಮದ ಸಕಾರಾತ್ಮಕತೆ ಮತ್ತು ಇಸ್ಲಾಂ ಮತ್ತು ಕ್ರಿಶ್ಚಿಯನ್ ಧರ್ಮ ಸೇರಿದಂತೆ ಇತರ ಧರ್ಮಗಳ 'ಕೊರತೆ'ಗಳನ್ನು ಪಟ್ಟಿ ಮಾಡುವಾಗ ಯೋಗ ಗುರು ಈ ಹೇಳಿಕೆಯನ್ನು ನೀಡಿದ್ದಾರೆ. ಮುಸಲ್ಮಾನರ ಉಡುಪಿನ ಮೇಲೆ ಅವರಿಗೆ ಸ್ವರ್ಗ ಎಂದರೆ ಪಾದದ ಮೇಲೆ ಪೈಜಾಮ ಹಾಕುವುದು, ಮೀಸೆ ಕತ್ತರಿಸಿ ಟೋಪಿ ತೋರಿಸುವುದಾ ಎಂದಿದ್ದರು.

ತಾವು ಯಾವುದೇ ನಿರ್ದಿಷ್ಟ ಧರ್ಮವನ್ನು ಗುರಿಯಾಗಿಸಿಕೊಂಡಿಲ್ಲ ಅಥವಾ ಟೀಕಿಸುತ್ತಿಲ್ಲ ಎಂದು ಯೋಗಗುರು ಹೇಳಿದ್ದಾರೆ. ಆದರೆ ಸಮುದಾಯವು ಅನುಸರಿಸುತ್ತಿರುವ ತಪ್ಪು ಆಚರಣೆಗಳನ್ನು ಮಾತ್ರ ಹೇಳುತ್ತಿದ್ದೇನೆ. ಹೀಗಾಗಿ ಅವರ ಬಲೆಗೆ ಜನರು ಬೀಳಬಾರದು ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT