ಡಿಎಂಕೆ ಶಾಸಕರು 
ದೇಶ

ಪುದುಚೇರಿ: ಶಾಲಾ ಸಮವಸ್ತ್ರದಲ್ಲಿ ಸದನಕ್ಕೆ ಬಂದ ಡಿಎಂಕೆ ಶಾಸಕರು, ಸರ್ಕಾರದ ವಿರುದ್ಧ ಪ್ರತಿಭಟನೆ

ಪುದುಚೇರಿಗೆ ರಾಜ್ಯದ ಸ್ಥಾನಮಾನ ನೀಡುವಂತೆ ಒತ್ತಾಯಿಸಿ ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿ ಅಂಗೀಕರಿಸಲು ಸರ್ಕಾರ ಹಿಂದೇಟು ಹಾಕುತ್ತಿರುವುದನ್ನು ಖಂಡಿಸಿ ಪ್ರತಿಪಕ್ಷ ಡಿಎಂಕೆ ಮತ್ತು ಕಾಂಗ್ರೆಸ್ ಸದಸ್ಯರು ಶುಕ್ರವಾರ ಪುದುಚೇರಿ...

ಪುದುಚೇರಿ: ಪುದುಚೇರಿಗೆ ರಾಜ್ಯದ ಸ್ಥಾನಮಾನ ನೀಡುವಂತೆ ಒತ್ತಾಯಿಸಿ ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿ ಅಂಗೀಕರಿಸಲು ಸರ್ಕಾರ ಹಿಂದೇಟು ಹಾಕುತ್ತಿರುವುದನ್ನು ಖಂಡಿಸಿ ಪ್ರತಿಪಕ್ಷ ಡಿಎಂಕೆ ಮತ್ತು ಕಾಂಗ್ರೆಸ್ ಸದಸ್ಯರು ಶುಕ್ರವಾರ ಪುದುಚೇರಿ ವಿಧಾನಸಭೆಯಲ್ಲಿ ಪ್ರತಿಭಟನೆ ನಡೆಸಿ ಸಭಾತ್ಯಾಗ ಮಾಡಿದರು.

ಇಂದು ವಿಧಾನಸಭೆ ಅಧಿವೇಶನಕ್ಕೆ ಶಾಲಾ ಸಮವಸ್ತ್ರದಲ್ಲಿ ಸೈಕಲ್‌ಗಳಲ್ಲಿ ಆಗಮಿಸಿದ ಡಿಎಂಕೆ ಸದಸ್ಯರು ಮತ್ತು ಕಾಂಗ್ರೆಸ್ ಸದಸ್ಯರು ರಾಜ್ಯದ ಸ್ಥಾನಮಾನ ಕುರಿತು ಸರ್ಕಾರ ನಿರ್ಣಯ ಅಂಗೀಕರಿಸಬೇಕು ಎಂದುಒತ್ತಾಯಿಸಿದರು.

ಬ್ರಿಟನ್ ರಾಣಿ ಎಲಿಜಬೆತ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ ನಂತರ ಮಾತನಾಡಿದ ಪ್ರತಿಪಕ್ಷದ ನಾಯಕ ಆರ್.ಶಿವ ಅವರು, ಪುದುಚೇರಿಗೆ ರಾಜ್ಯದ ಸ್ಥಾನಮಾನ ಕೋರಿ ನಿರ್ಣಯ ಮಂಡಿಸುವುದು ಅತ್ಯಂತ ಮುಖ್ಯವಾಗಿದೆ. ನಿರ್ಣಯದ ಕುರಿತು ಚರ್ಚಿಸಿ ಅಂಗೀಕರಿಸಲು ಸಮಯ ನೀಡಬೇಕು ಎಂದರು.

ಮುಖ್ಯಮಂತ್ರಿಗಳು ರಾಜ್ಯದ ಸ್ಥಾನಮಾನದ ಅಗತ್ಯ ಇದೆ ಎಂದು ಹೇಳುತ್ತಿದ್ದಾರೆ. ಆದರೆ ಲೆಫ್ಟಿನೆಂಟ್ ಗವರ್ನರ್ ಪುದುಚೇರಿ ಕೇಂದ್ರಾಡಳಿತ ಪ್ರದೇಶವಾಗಿದ್ದರೂ ಒಂದು ರಾಜ್ಯ ಪಡೆಯುವ ಎಲ್ಲಾ ಪ್ರಯೋಜನಗಳನ್ನು ಈಗ ಪಡೆಯುತ್ತಿದೆ ಎಂದಿದ್ದಾರೆ. ಇದರಲ್ಲಿ ಯಾವುದು ನಿಜ ಎಂಬುದನ್ನು ಸದನದ ಸಿಎಂ ಸ್ಪಷ್ಟಪಡಿಸಬೇಕು ಎಂದು ಆರ್.ಶಿವ ಒತ್ತಾಯಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT