ಸಾಂದರ್ಭಿಕ ಚಿತ್ರ 
ದೇಶ

ನ್ಯುಮೋನಿಯಾ ಗುಣವಾಗಲೆಂದು ಕಾದ ಕಬ್ಬಿಣದಲ್ಲಿ 51 ಬಾರಿ ಬರೆ: 3 ತಿಂಗಳ ಮಗು ದಾರುಣ ಸಾವು

ನ್ಯೂಮೋನಿಯಾದಿಂದ ಬಳಲುತ್ತಿದ್ದ ಮೂರು ತಿಂಗಳ ಹಸುಳೆಗೆ ಚಿಕಿತ್ಸೆಯ ರೂಪದಲ್ಲಿ ಕಾದ ಕಬ್ಬಿಣದ ರಾಡ್ ನಿಂದ 51 ಬಾರಿ ಹೊಟ್ಟೆಗೆ ಚುಚ್ಚಿದ್ದ ಪರಿಣಾಮ ತೀವ್ರ ಉಸಿರಾಟದ ತೊಂದರೆಗೆ ಸಿಲುಕಿ 15 ದಿನಗಳ ಬಳಿಕ ಆಸ್ಪತ್ರೆಯಲ್ಲಿ ದುರಂತ ಅಂತ್ಯ ಕಂಡಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದ ಶಾದೋಲ್ ನಲ್ಲಿ ನಡೆದಿದೆ.

ಭೂಪಾಲ್: ನ್ಯೂಮೋನಿಯಾದಿಂದ ಬಳಲುತ್ತಿದ್ದ ಮೂರು ತಿಂಗಳ ಹಸುಳೆಗೆ ಚಿಕಿತ್ಸೆಯ ರೂಪದಲ್ಲಿ ಕಾದ ಕಬ್ಬಿಣದ ರಾಡ್ ನಿಂದ 51 ಬಾರಿ ಹೊಟ್ಟೆಗೆ ಚುಚ್ಚಿದ್ದ ಪರಿಣಾಮ ತೀವ್ರ ಉಸಿರಾಟದ ತೊಂದರೆಗೆ ಸಿಲುಕಿ 15 ದಿನಗಳ ಬಳಿಕ ಆಸ್ಪತ್ರೆಯಲ್ಲಿ ದುರಂತ ಅಂತ್ಯ ಕಂಡಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದ ಶಾದೋಲ್ ನಲ್ಲಿ ನಡೆದಿದೆ.

ಮಧ್ಯಪ್ರದೇಶದ ಶಹದೋಲ್ ಜಿಲ್ಲೆಯಲ್ಲಿ ಹೀಗೊಂದು ಅಮಾನವೀಯ ಘಟನೆ ನಡೆದಿದೆ. ಆಕೆ ಚಿಕಿತ್ಸೆಯ ಹೆಸರಲ್ಲಿ ಬಿಸಿಬಿಸಿಯಾದ ಕಬ್ಬಿಣದ ರಾಡ್​​ನಿಂದ ಮಗುವಿನ ಹೊಟ್ಟೆಯ ಮೇಲೆ 51 ಬಾರಿ ಕುಟ್ಟಿದ್ದಾಳೆ. ಇದರಿಂದಾಗಿ ಶಿಶುವಿನ ಆರೋಗ್ಯ ಇನ್ನಷ್ಟು ಹದಗೆಟ್ಟು, ಮೃತಪಟ್ಟಿದ್ದಾಗಿ ವರದಿಯಾಗಿದೆ.

ಬುಡಕಟ್ಟು ಪ್ರಾಬಲ್ಯ ಹೊಂದಿರುವ ಶಾದೋಲ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಮಗುವಿನ ಶವವನ್ನು ಹೂತಿದ್ದು, ಇದೀಗ ಮರಣೋತ್ತರ ಪರೀಕ್ಷೆಗಾಗಿ ಶವವನ್ನು ಹೊರತೆಗೆಯಲಾಗಿದೆ ಎಂದು ವರದಿ ವಿವರಿಸಿದೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿದ್ದು, ಈ ಸಂದರ್ಭದಲ್ಲಿ ಕುರುಡು ಮೂಢನಂಬಿಕೆಯ ಕರಾಳತೆ ಬೆಳಕಿಗೆ ಬಂದಿರುವುದಾಗಿ ತಿಳಿದು ಬಂದಿದೆ. ಮಗುವಿಗೆ ನ್ಯೂಮೋನಿಯಾಗೆ ಚಿಕಿತ್ಸೆ ನೀಡದೆ, ಕಾದ ಕಬ್ಬಿಣದ ಸರಳನ್ನು ಹೊಟ್ಟೆಗೆ ಚುಚ್ಚುವ ಮೂಲಕ ಮಗುವಿನ ಸ್ಥಿತಿ ಚಿಂತಾಜನಕವಾಗಲು ಕಾರಣವಾಗಿತ್ತು ಎಂದು ಶಾದೋಲ್ ಜಿಲ್ಲಾಧಿಕಾರಿ ವಂದನಾ ವೈಧ್ ತಿಳಿಸಿದ್ದಾರೆ.

ಹೀಗೆ ಕಬ್ಬಿಣದ ರಾಡ್​ ಚಿಕಿತ್ಸೆಯ ಬಳಿಕ ಮಗುವಿನ ಆರೋಗ್ಯ ಇನ್ನಷ್ಟು ಹದಗೆಟ್ಟಿತು. ಉಸಿರಾಟವೇ ಕ್ಷೀಣವಾಯಿತು. ಕೂಡಲೇ ಅವಳನ್ನು ಶಹದೋಲ್​ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ಬುಧವಾರ ರಾತ್ರಿ ಆಕೆ ಮೃತಪಟ್ಟಿದ್ದಾಳೆ.

ಘಟನೆ ಶಹದೋಲ್​ ಜಿಲ್ಲಾಧಿಕಾರಿ ವಂದನಾ ವೈದ್ಯ ಗಮನಕ್ಕೂ ಬಂದಿದೆ. ಈ ಬಗ್ಗೆ ಗಂಭೀರವಾಗಿ ತನಿಖೆ ನಡೆಸಲಾಗುತ್ತಿದೆ. ಮಹಿಳಾ ಚಿಕಿತ್ಸಕಳ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಡಿಸಿ ವಂದನಾ ತಿಳಿಸಿದ್ದಾರೆ. ‘ಹೀಗೆ ಮೂಢನಂಬಿಕೆಯ ಕಾರಣದಿಂದ ಮಗುವಿಗೆ ಚಿಕಿತ್ಸೆ ವಿಳಂಬ ಮಾಡಿದ್ದಾರೆ. ನ್ಯುಮೋನಿಯಾ ಬಂದಾಗ ಎಷ್ಟಾಗತ್ತೋ ಅಷ್ಟು ಬೇಗ ಚಿಕಿತ್ಸೆ ನೀಡಬೇಕು. ಇಲ್ಲದೆ ಇದ್ದರೆ ಸೋಂಕು ಹರಡಿ, ಸಾವು ಉಂಟಾಗುತ್ತದೆ’ ಎಂದು ಹೇಳಿದ್ದಾರೆ.

ಮಧ್ಯಪ್ರದೇಶದ ಅನೇಕ ಬುಡಕಟ್ಟು ಪ್ರಾಬಲ್ಯವಿರುವ ಪ್ರದೇಶಗಳಲ್ಲಿ, ನ್ಯುಮೋನಿಯಾವನ್ನು "ಚಿಕಿತ್ಸೆ" ಮಾಡಲು ಬಿಸಿ ಕಬ್ಬಿಣದ ರಾಡ್‌ನಿಂದ ಚುಚ್ಚುವ ಅಭ್ಯಾಸವು ಸಾಮಾನ್ಯವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

SCROLL FOR NEXT