ಡಿವೈ ಚಂದ್ರಚೂಡ್ 
ದೇಶ

ಸುಪ್ರೀಂಗೆ ದೊಡ್ಡ ಅಥವಾ ಸಣ್ಣ ಪ್ರಕರಣ ಅಂತ ಇಲ್ಲ, ಪ್ರತಿಯೊಂದು ಕೇಸ್ ಮುಖ್ಯ: ಸಿಜೆಐ ಚಂದ್ರಚೂಡ್

ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಪ್ರಜಾಪ್ರಭುತ್ವಕ್ಕೆ ಸೇವೆ ಸಲ್ಲಿಸುತ್ತಿರುವ ಸುಪ್ರೀಂ ಕೋರ್ಟ್ ಗೆ ಯಾವುದೇ ದೊಡ್ಡ ಅಥವಾ ಸಣ್ಣ ಪ್ರಕರಣ ಅಂತ ಇಲ್ಲ. ಏಕೆಂದರೆ ಪ್ರತಿಯೊಂದು ಪ್ರಕರಣವೂ ಮುಖ್ಯವಾಗಿದೆ ಎಂದು...

ನವದೆಹಲಿ: ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಪ್ರಜಾಪ್ರಭುತ್ವಕ್ಕೆ ಸೇವೆ ಸಲ್ಲಿಸುತ್ತಿರುವ ಸುಪ್ರೀಂ ಕೋರ್ಟ್ ಗೆ ಯಾವುದೇ ದೊಡ್ಡ ಅಥವಾ ಸಣ್ಣ ಪ್ರಕರಣ ಅಂತ ಇಲ್ಲ. ಏಕೆಂದರೆ ಪ್ರತಿಯೊಂದು ಪ್ರಕರಣವೂ ಮುಖ್ಯವಾಗಿದೆ ಎಂದು ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ಶನಿವಾರ ಹೇಳಿದ್ದಾರೆ.

ಭಾರತದ ಸುಪ್ರೀಂ ಕೋರ್ಟ್ ಸ್ಥಾಪನೆಯಾಗಿ 73 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಜೆಐ ಡಿವೈ ಚಂದ್ರಚೂಡ್, ಉನ್ನತ ನ್ಯಾಯಾಲಯವು ಸಾಂವಿಧಾನಿಕ ಕರ್ತವ್ಯಗಳು, ಕಟ್ಟುಪಾಡುಗಳು ಮತ್ತು ಕಾರ್ಯಗಳನ್ನು ನಿರ್ವಹಿಸುತ್ತದೆ ಎಂದು ಹೇಳಿದರು.

"ನ್ಯಾಯಾಲಯಕ್ಕೆ, ಯಾವುದೇ ದೊಡ್ಡ ಅಥವಾ ಸಣ್ಣ ಪ್ರಕರಣಗಳು ಅಂತ ಇಲ್ಲ. ಪ್ರತಿಯೊಂದು ಪ್ರಕರಣವೂ ಮುಖ್ಯವಾಗಿದೆ. ಏಕೆಂದರೆ ನಮ್ಮ ನಾಗರಿಕರನ್ನು ಒಳಗೊಂಡ ಸಣ್ಣ ಮತ್ತು ವಾಡಿಕೆಯ ವಿಷಯಗಳಲ್ಲಿ ಸಾಂವಿಧಾನಿಕ ಮತ್ತು ನ್ಯಾಯಶಾಸ್ತ್ರದ ಪ್ರಾಮುಖ್ಯತೆ ಇದೆ ಎಂದಿದ್ದಾರೆ.

ನಾಗರಿಕರ ಕುಂದುಕೊರತೆಗಳ ಬಗ್ಗೆ ವಿಚಾರಣೆ ನಡೆಸುವಾಗ ನ್ಯಾಯಾಲಯವು ಸರಳವಾದ ಸಾಂವಿಧಾನಿಕತೆಯನ್ನು ನಿರ್ವಹಿಸುತ್ತದೆ. ಸರಳ ಸಾಂವಿಧಾನಿಕ ಬಾಧ್ಯತೆ ಮತ್ತು ಸರಳ ಸಾಂವಿಧಾನಿಕ ಕಾರ್ಯವನ್ನು ಕೋರ್ಟ್ ನಿರ್ವಹಿಸುತ್ತದೆ ಎಂದು ಸಿಜೆಐ ಹೇಳಿದ್ದಾರೆ.

ಸುಪ್ರೀಂ ಕೋರ್ಟ್ ಲಿಂಗ ಸಮಾನತೆಯ ಪ್ರಬಲ ಪ್ರತಿಪಾದಕನಾಗಿ ಹೊರಹೊಮ್ಮುತ್ತಿರುವುದು ಮಾತ್ರವಲ್ಲದೆ ಮಾನವ ಹಕ್ಕುಗಳ ಚೌಕಟ್ಟಿನೊಳಗೆ ಕ್ರಿಮಿನಲ್ ನ್ಯಾಯದ ಆಡಳಿತದ ಸಂಪರ್ಕವನ್ನು ಖಾತ್ರಿಪಡಿಸುತ್ತಿದೆ. ನಮ್ಮ ನ್ಯಾಯಾಲಯವು ಲಿಂಗ ಸಮಾನತೆಯ ಪ್ರಬಲ ಪ್ರತಿಪಾದಕನಾಗಿ ಹೊರಹೊಮ್ಮಿದೆ. ಉತ್ತರಾಧಿಕಾರದ ಕಾನೂನುಗಳ ವ್ಯಾಖ್ಯಾನ ಅಥವಾ ಸಶಸ್ತ್ರ ಪಡೆಗಳಲ್ಲಿ ಮಹಿಳೆಯರ ಪ್ರವೇಶವನ್ನು ಭದ್ರಪಡಿಸುವುದು. ಕ್ರಿಮಿನಲ್ ನ್ಯಾಯದ ಆಡಳಿತವು ಮಾನವ ಹಕ್ಕುಗಳ ಚೌಕಟ್ಟಿನಿಂದ ಬೇರ್ಪಟ್ಟಿಲ್ಲ ಎಂಬುದನ್ನು ನ್ಯಾಯಾಲಯ ಖಚಿತಪಡಿಸಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel