ಅಸಾದುದ್ದೀನ್ ಓವೈಸಿ 
ದೇಶ

'ಗಂಡಂದಿರು ಜೈಲಿಗೆ ಹೋದರೆ ಆ ಹೆಣ್ಣುಮಕ್ಕಳನ್ನು ನೋಡಿಕೊಳ್ಳುವವರು ಯಾರು?': ಅಸ್ಸಾಂ ಸಿಎಂಗೆ ಓವೈಸಿ ಪ್ರಶ್ನೆ

ಅಸ್ಸಾಂ ಸರ್ಕಾರ ಬಾಲ್ಯವಿವಾಹಗಳ ವಿರುದ್ಧ ಕಠಿಣ ಕ್ರಮ ಕೈಗೊಂಡ ನಂತರ ಅನಾಥವಾಗಿರುವ ಹೆಣ್ಣು ಮಕ್ಕಳನ್ನು ಯಾರು ನೋಡಿಕೊಳ್ಳುತ್ತಾರೆ? ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅಸ್ಸಾಂ...

ಹೈದರಾಬಾದ್: ಅಸ್ಸಾಂ ಸರ್ಕಾರ ಬಾಲ್ಯವಿವಾಹಗಳ ವಿರುದ್ಧ ಕಠಿಣ ಕ್ರಮ ಕೈಗೊಂಡ ನಂತರ ಅನಾಥವಾಗಿರುವ ಹೆಣ್ಣು ಮಕ್ಕಳನ್ನು ಯಾರು ನೋಡಿಕೊಳ್ಳುತ್ತಾರೆ? ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರನ್ನು ಪ್ರಶ್ನಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಆರು ವರ್ಷಗಳಿಂದ ಮೌನವಾಗಿದ್ದ ಅಸ್ಸಾಂ ಸರ್ಕಾರ ಈಗ ಬಾಲ್ಯ ವಿವಾಹ ಪ್ರಕರಣದಲ್ಲಿ 2,044 ಮಂದಿಯನ್ನು ಬಂಧಿಸಿ ಜೈಲಿಗೆ ಕಳುಹಿಸಿದೆ. ಆದರೆ ಆ ಹೆಣ್ಣು ಮಕ್ಕಳನ್ನು ಯಾರು ನೋಡಿಕೊಳ್ಳುತ್ತಾರೆ? ಎಂದು ಪ್ರಶ್ನಿಸಿದರು.

ರಾಜ್ಯ ಪೊಲೀಸರು ಹಿಂದಿನ ದಿನ ಪ್ರಾರಂಭಿಸಿದ ಬಾಲ್ಯವಿವಾಹದ ವಿರುದ್ಧದ ಅಭಿಯಾನವು ಮುಂದಿನ 2026ರ ವಿಧಾನಸಭಾ ಚುನಾವಣೆಯವರೆಗೆ ಮುಂದುವರಿಯುತ್ತದೆ ಎಂದು ಅಸ್ಸಾಂ ಸಿಎಂ ಹೇಳಿದ್ದಾರೆ.

"ಕಳೆದ ಆರು ವರ್ಷಗಳಿಂದ ಅಸ್ಸಾಂನಲ್ಲಿ ಬಿಜೆಪಿ ಸರ್ಕಾರವಿದೆ. ಕಳೆದ ಆರು ವರ್ಷಗಳಿಂದ ನೀವು ಏನು ಮಾಡುತ್ತಿದ್ದೀರಿ? ಕಳೆದ ಆರು ವರ್ಷಗಳಿಂದ ಇದು ನಿಮ್ಮ ವೈಫಲ್ಯವನ್ನು ತೋರಿಸುತ್ತಿದೆ. ನೀವು ಅವರನ್ನು ಜೈಲಿಗೆ ಕಳುಹಿಸುತ್ತಿದ್ದೀರಿ, ಈಗ ಆ ಹೆಣ್ಣುಮಕ್ಕಳನ್ನು ಯಾರು ನೋಡಿಕೊಳ್ಳುತ್ತಾರೆ. ಆ ಹುಡುಗಿಯರನ್ನು ಸಿಎಂ (ಹಿಮಂತ ಬಿಸ್ವ ಶರ್ಮಾ) ನೋಡಿಕೊಳ್ಳುತ್ತಾರಾ? ಆ ಮದುವೆ ಮುರಿದು ಬಿಳುತ್ತಾ?. ನಿಮ್ಮ ವೈಫಲ್ಯದಿಂದ ಹೆಣ್ಣುಮಕ್ಕಳನ್ನು ದುಸ್ಥಿತಿಗೆ ತಳ್ಳುತ್ತಿದ್ದೀರಿ ಎಂದು ವಾಗ್ದಾಳಿ ನಡೆಸಿದರು.

ಅಸ್ಸಾಂ ಸರ್ಕಾರದ ಅಧಿಕೃತ ಹೇಳಿಕೆಯ ಪ್ರಕಾರ, ಬಾಲ್ಯವಿವಾಹ ತಡೆ ಪ್ರಕರಣದಲ್ಲಿ ಶನಿವಾರದವರೆಗೆ 2,250 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT