ಬಾಬಾ ರಾಮ್ ದೇವ್ 
ದೇಶ

ದ್ವೇಷ ಭಾಷಣ: ರಾಜಸ್ಥಾನದಲ್ಲಿ ಬಾಬಾ ರಾಮ್‌ದೇವ್ ವಿರುದ್ಧ ಎಫ್ಐಆರ್ ದಾಖಲು

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆದ ಧರ್ಮಗುರುಗಳ ಸಭೆಯಲ್ಲಿ ಪ್ರಚೋದನಕಾರಿ ಹೇಳಿಕೆ ನೀಡುವ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಯೋಗ ಗುರು ಬಾಬಾ ರಾಮ್‌ದೇವ್ ಅವರ ವಿರುದ್ಧ ಭಾನುವಾರ

ಜೈಪುರ: ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆದ ಧರ್ಮಗುರುಗಳ ಸಭೆಯಲ್ಲಿ ಪ್ರಚೋದನಕಾರಿ ಹೇಳಿಕೆ ನೀಡುವ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಯೋಗ ಗುರು ಬಾಬಾ ರಾಮ್‌ದೇವ್ ಅವರ ವಿರುದ್ಧ ಭಾನುವಾರ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳೀಯ ನಿವಾಸಿ ಪಥಾಯಿ ಖಾನ್ ನೀಡಿದ ದೂರಿನ ಆಧಾರದ ಮೇಲೆ ಚೌಹಾಟನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಚೌಹಾತನ್ ಪೊಲೀಸ್ ಠಾಣೆ ಎಸ್‌ಎಚ್‌ಒ ಭೂತರಾಮ್ ಪ್ರಕಾರ, ಐಪಿಸಿ ಸೆಕ್ಷನ್ 153ಎ (ಧರ್ಮ, ಜನಾಂಗ, ಜನ್ಮ ಸ್ಥಳ, ವಾಸಸ್ಥಳದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷ ಉತ್ತೇಜಿಸುವುದು), 295 ಎ (ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯ, ಧಾರ್ಮಿಕ ಭಾವನೆಗಳಿಗೆ ಧಕ್ಕೆ) ಅಡಿ ಪ್ರಕರಣ ದಾಖಲಿಸಲಾಗಿದೆ.

ಫೆಬ್ರವರಿ 2 ರಂದು ನಡೆದ ಧರ್ಮಗುರುಗಳ ಸಭೆಯಲ್ಲಿ, ಹಿಂದೂ ಧರ್ಮವನ್ನು ಇಸ್ಲಾಂ ಮತ್ತು ಕ್ರಿಶ್ಚಿಯನ್ ಧರ್ಮಕ್ಕೆ ಹೋಲಿಸುವಾಗ, ಮುಸ್ಲಿಮರು ಹಿಂದೂ ಮಹಿಳೆಯರನ್ನು ಅಪಹರಿಸುತ್ತಿದ್ದಾರೆ ಮತ್ತು ಭಯೋತ್ಪಾದಕರಾಗುತ್ತಾರೆ. ಹಿಂದೂ ಧರ್ಮವು ತನ್ನ ಅನುಯಾಯಿಗಳಿಗೆ ಒಳ್ಳೆಯದನ್ನು ಮಾಡಲು ಕಲಿಸಿದರೆ ಈ ಎರಡು ಧರ್ಮಗಳು ಮತಾಂತರದ ಗೀಳನ್ನು ಹೊಂದಿದ್ದವು ಎಂದು ರಾಮ್ ದೇವ್ ಆರೋಪಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪುಣೆ ಭೂ ಹಗರಣ: ತಪ್ಪು ಸರಿಪಡಿಸಿಕೊಳ್ಳಲು ದುಪ್ಪಟ್ಟು ಸುಂಕ ತೆರಬೇಕಾಯ್ತು ಅಜಿತ್ ಪವಾರ್ ಪುತ್ರ ಪಾರ್ಥ್ ಪವಾರ್!

'ನಾಚಿಕೆಗೇಡು.. ಪಾಕ್ ಪರಮಾಣು ಸ್ಥಾವರ ಮೇಲೆ ದಾಳಿ ಮಾಡಲು ಇಂದಿರಾಗಾಂಧಿ ಹಿಂದೇಟು ಹಾಕಿದ್ದರು': ಮಾಜಿ ಸಿಐಎ ಅಧಿಕಾರಿ ಸ್ಫೋಟಕ ಹೇಳಿಕೆ!

ಛತ್ರಪತಿ ಸಂಭಾಜಿ ಮಹಾರಾಜ್ ನಾಮಫಲಕದ ಬಳಿ ಮೂತ್ರ ವಿಸರ್ಜನೆ ಮಾಡಿದ್ದ ವಿಡಿಯೋ ವೈರಲ್, ಟ್ರೋಲ್; ಅವಮಾನ ಸಹಿಸಲಾಗದೆ ಯುವಕ ಆತ್ಮಹತ್ಯೆ!

Sexual Harassment: 'ಪೀರಿಯಡ್ಸ್ ಮುಗೀತಾ.. ಯಾವಾಗ ಬರ್ತೀಯಾ ಎಂದು ಕೇಳುತ್ತಿದ್ದ'.. ಕಣ್ಣೀರು ಹಾಕಿದ ಕ್ರಿಕೆಟ್ ಆಟಗಾರ್ತಿ..

ಭ್ರಷ್ಟಾಚಾರ, ನಕಲಿ ದಾಖಲೆ: ಬೆಂಗಳೂರಿನ 6 ಆರ್‌ಟಿಒಗಳ ಮೇಲೆ ಲೋಕಾಯುಕ್ತ ದಾಳಿ, ಅಧಿಕಾರಿಗಳ ದುಷ್ಕೃತ್ಯ ಬಟಾ ಬಯಲು!

SCROLL FOR NEXT