ಸಂಸತ್ತು 
ದೇಶ

ಅದಾನಿ ವಿವಾದ: ಸಂಸತ್ತಿನ ಕಲಾಪಗಳಲ್ಲಿ ಭಾಗವಹಿಸಲು ಬಹುತೇಕ ವಿರೋಧ ಪಕ್ಷಗಳು ನಿರ್ಧರ

ಅದಾನಿ ಗ್ರೂಪ್ ವಿರುದ್ಧದ ವಂಚನೆ ಆರೋಪಗಳ ಕುರಿತು ಉಭಯ ಸದನಗಳಲ್ಲಿ ಮೂರು ದಿನಗಳ ಕಲಾಪದ ಗದ್ದಲದ ನಂತರ ಸಂಸತ್ತಿನ ಕಲಾಪದಲ್ಲಿ ಭಾಗವಹಿಸಲು ಕಾಂಗ್ರೆಸ್ ಸೇರಿದಂತೆ ಹೆಚ್ಚಿನ ವಿರೋಧ ಪಕ್ಷಗಳು ಮಂಗಳವಾರ ನಿರ್ಧರಿಸಿವೆ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ತಿಳಿಸಿದ್ದಾರೆ.

ನವದೆಹಲಿ: ಅದಾನಿ ಗ್ರೂಪ್ ವಿರುದ್ಧದ ವಂಚನೆ ಆರೋಪಗಳ ಕುರಿತು ಉಭಯ ಸದನಗಳಲ್ಲಿ ಮೂರು ದಿನಗಳ ಕಲಾಪದ ಗದ್ದಲದ ನಂತರ ಸಂಸತ್ತಿನ ಕಲಾಪದಲ್ಲಿ ಭಾಗವಹಿಸಲು ಕಾಂಗ್ರೆಸ್ ಸೇರಿದಂತೆ ಹೆಚ್ಚಿನ ವಿರೋಧ ಪಕ್ಷಗಳು ಮಂಗಳವಾರ ನಿರ್ಧರಿಸಿವೆ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ತಿಳಿಸಿದ್ದಾರೆ.

ಆದಾಗ್ಯೂ, ಆಮ್ ಆದ್ಮಿ ಪಕ್ಷ (ಎಎಪಿ) ಮತ್ತು ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಅದಾನಿ ವಿಷಯದ ಬಗ್ಗೆ ಚರ್ಚೆಯಿಲ್ಲದೆ ಸಂಸತ್ತಿನಲ್ಲಿ ಇತರ ವಿಚಾರಗಳ ಚರ್ಚೆ ಬೇಡ ಎಂದು ಹೇಳಿರುವುದಾಗಿ ಮೂಲಗಳು ತಿಳಿಸಿವೆ.

ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಕಚೇರಿಯಲ್ಲಿ ನಡೆದ 15 ವಿರೋಧ ಪಕ್ಷಗಳ ನಾಯಕರು ಪಾಲ್ಗೊಂಡಿದ್ದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಬಹುಪಾಲು ವಿರೋಧ ಪಕ್ಷಗಳು ಇಂದಿನಿಂದ ಸಂಸತ್ತಿನ ಕಲಾಪದಲ್ಲಿ ಭಾಗವಹಿಸಲು ನಿರ್ಧರಿಸಿವೆ ಮತ್ತು ಅದಾನಿ ವಿವಾದಕ್ಕೆ ಸಂಬಂಧಿಸಿದಂತೆ ಜಂಟಿ ಸಂಸದೀಯ ಸಮಿತಿ ತನಿಖೆ ಅಥವಾ ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯ ತನಿಖೆಗಾಗಿ ತಮ್ಮ ಬೇಡಿಕೆಯನ್ನು ಎತ್ತುವುದನ್ನು ಮುಂದುವರಿಸಲು ನಿರ್ಧರಿಸಿವೆ' ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಸಭೆಯ ನಂತರ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಕಾಂಗ್ರೆಸ್, ಡಿಎಂಕೆ, ಸಮಾಜವಾದಿ ಪಕ್ಷ, ರಾಷ್ಟ್ರೀಯ ಜನತಾ ದಳ, ಜನತಾ ದಳ (ಯುನೈಟೆಡ್), ಎಎಪಿ, ಸಿಪಿಐ-ಎಂ, ಸಿಪಿಐ, ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ, ಶಿವಸೇನೆ, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್, ನ್ಯಾಷನಲ್ ಕಾನ್ಫರೆನ್ಸ್, ರೆವಲ್ಯೂಷನರಿ ಸೋಷಿಯಲಿಸ್ಟ್ ಪಾರ್ಟಿ, ಕೇರಳ ಕಾಂಗ್ರೆಸ್ ಮತ್ತು ವಿದುತಲೈ ಚಿರುತೈಗಲ್ ಕಚ್ಚಿ ಪಕ್ಷಗಳ ಮುಖಂಡರು ಸೇರಿದಂತೆ ಹಲವರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಗೌತಮ್ ಅದಾನಿ ನೇತೃತ್ವದ ಗುಂಪಿನ ವಿರುದ್ಧ ಅಮೆರಿಕ ಮೂಲದ ಹಿಂಡೆನ್‌ಬರ್ಗ್ ರಿಸರ್ಚ್ ಬಿಡುಗಡೆ ಮಾಡಿರುವ ವರದಿಯಿಂದಾಗಿ ಅದಾನಿ ಕಂಪನಿಗಳ ಷೇರಿನ ಮೌಲ್ಯ ದಿನದಿಂದ ದಿನಕ್ಕೆ ಕುಸಿಯುತ್ತಾ ಸಾಗಿದೆ.  ಆದರೆ, ಅದಾನಿ ಗ್ರೂಪ್ ಈ ಆರೋಪಗಳನ್ನು ಸುಳ್ಳು ಎಂದು ತಳ್ಳಿಹಾಕಿದೆ.

ಸಾರ್ವಜನಿಕ ವಲಯದ ಎಲ್‌ಐಸಿ ಮತ್ತು ಎಸ್‌ಬಿಐ ಹೂಡಿಕೆ ಮಾಡಿರುವುದರಿಂದ ಸಾಮಾನ್ಯ ಜನರ ಹಣವನ್ನು ಒಳಗೊಂಡಿರುವ ಹಗರಣವಾಗಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ. ಈ ಆರೋಪಗಳ ಕುರಿತು ಈ ಆರೋಪಗಳ ಕುರಿತು ಜಂಟಿ ಸಂಸದೀಯ ಸಮಿತಿ (ಜೆಪಿಸಿ) ತನಿಖೆ ಅಥವಾ ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯ ತನಿಖೆಗೆ ಪ್ರತಿಪಕ್ಷಗಳು ಒತ್ತಾಯಿಸುತ್ತಿವೆ.

ಈ ವಿಷಯದ ಬಗ್ಗೆ ಚರ್ಚೆಗೆ ಆಗ್ರಹಿಸಿ ಪ್ರತಿಪಕ್ಷಗಳು ಕಳೆದ ಮೂರು ದಿನಗಳಿಂದ ಸಂಸತ್ತಿನ ಉಭಯ ಸದನಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಕಲಾಪ ಸ್ಥಗಿತಗೊಂಡಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT