ಪಾರ್ಲಿಮೆಂಟ್ ಕಟ್ಟಡ 
ದೇಶ

ಸಿಪಿ ಜೋಶಿಯ 'ಸತಿ ಪದ್ಧತಿ' ಹೇಳಿಕೆಯಿಂದ ಗದ್ದಲ, ಲೋಕಸಭೆ ಕೆಲಕಾಲ ಮುಂದೂಡಿಕೆ

ಬಿಜೆಪಿ ಸದಸ್ಯ ಸಿ.ಪಿ. ಜೋಶಿ ರದ್ದುಪಡಿಸಿರುವ ಸತಿ ಪದ್ಧತಿಯನ್ನು ವೈಭವೀಕರಿಸಿದ್ದಾರೆ ಎಂದು ಆರೋಪಿಸಿ ಪ್ರತಿಪಕ್ಷಗಳು ಗದ್ದಲ ಉಂಟುಮಾಡಿದ್ದರಿಂದ ಲೋಕಸಭೆಯನ್ನು ಮಂಗಳವಾರ ಕೆಲಕಾಲ ಮುಂದೂಡಲಾಯಿತು.

ನವದೆಹಲಿ: ಬಿಜೆಪಿ ಸದಸ್ಯ ಸಿ.ಪಿ. ಜೋಶಿ ರದ್ದುಪಡಿಸಿರುವ ಸತಿ ಪದ್ಧತಿಯನ್ನು ವೈಭವೀಕರಿಸಿದ್ದಾರೆ ಎಂದು ಆರೋಪಿಸಿ ಪ್ರತಿಪಕ್ಷಗಳು ಗದ್ದಲ ಉಂಟುಮಾಡಿದ್ದರಿಂದ ಲೋಕಸಭೆಯನ್ನು ಮಂಗಳವಾರ ಕೆಲಕಾಲ ಮುಂದೂಡಲಾಯಿತು.

ರಾಜಸ್ಥಾನದ ಚಿತ್ತೋರ್‌ಗಢದ ಬಿಜೆಪಿ ಸದಸ್ಯ ಜೋಶಿ, ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲಿನ ಚರ್ಚೆಯನ್ನು ಪ್ರಾರಂಭಿಸಿದಾಗ, ಆಕ್ರಮಣಕಾರ ಅಲ್ಲಾವುದೀನ್ ಖಿಲ್ಜಿಯಿಂದ ತನ್ನ ಗೌರವವನ್ನು ರಕ್ಷಿಸಲು ಮೇವಾರದ ರಾಣಿ ಪದ್ಮಾವತಿ ಸ್ವಯಂ ದಹನ ಮಾಡಿಕೊಂಡ ವಿಚಾರವನ್ನು ಉಲ್ಲೇಖಿಸಿದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಪ್ರತಿಪಕ್ಷದ ಸದಸ್ಯರಾದ ಸುಪ್ರಿಯಾ ಸುಳೆ (ಎನ್‌ಸಿಪಿ), ಕನಿಮೋಳಿ, ದಯಾನಿಧಿ ಮಾರನ್, ಎ ರಾಜಾ (ಡಿಎಂಕೆ), ಕೆ ಮುರಳೀಧರನ್ (ಕಾಂಗ್ರೆಸ್), ಇಮ್ತಿಯಾಜ್ ಜಲೀಲ್ (ಎಐಎಂಐಎಂ) ಜೋಶಿ ‘ಸತಿ’ ಪದ್ಧತಿಯನ್ನು ವೈಭವೀಕರಿಸಿದ್ದಾರೆ ಎಂದು ಪ್ರತಿಪಾದಿಸಿದರು.

ತಾನು ಸತಿ ಪದ್ದತಿ ಬಗ್ಗೆ ಯಾವುದೇ ಉಲ್ಲೇಖ ಮಾಡಿಲ್ಲ. ಆದರೆ,  ಆದರೆ ಪದ್ಮಾವತಿ ತನ್ನ ಗೌರವವನ್ನು ಕಾಪಾಡಲು 'ಜೌಹರ್' (ಸ್ವಯಂ ದಹನ) ಮಾಡಿಕೊಂಡಿದ್ದಾರೆ ಎಂದು ಹೇಳಿರುವುದಾಗಿ ಜೋಶಿ ಸಮರ್ಥಿಸಿಕೊಂಡಿದರು. ಇದರಿಂದ ಆಕ್ರೋಶಗೊಂಡ ಪ್ರತಿಪಕ್ಷದ ಸದಸ್ಯರು ಸದನದ ಬಾವಿಗಿಳಿದು ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.

ಈ ಮಧ್ಯೆ ಜೋಶಿ ತನ್ನ ನಿಲುವಿಗೆ ಅಂಟಿಕೊಂಡರು. ಪ್ರತಿಭಟನೆ ಮುಂದುವರಿದಿದ್ದರಿಂದ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಕಲಾಪವನ್ನು 20 ನಿಮಿಷಗಳ ಕಾಲ ಮುಂದೂಡಿದರು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT