ಪಾರ್ಲಿಮೆಂಟ್ ಕಟ್ಟಡ 
ದೇಶ

ಸಿಪಿ ಜೋಶಿಯ 'ಸತಿ ಪದ್ಧತಿ' ಹೇಳಿಕೆಯಿಂದ ಗದ್ದಲ, ಲೋಕಸಭೆ ಕೆಲಕಾಲ ಮುಂದೂಡಿಕೆ

ಬಿಜೆಪಿ ಸದಸ್ಯ ಸಿ.ಪಿ. ಜೋಶಿ ರದ್ದುಪಡಿಸಿರುವ ಸತಿ ಪದ್ಧತಿಯನ್ನು ವೈಭವೀಕರಿಸಿದ್ದಾರೆ ಎಂದು ಆರೋಪಿಸಿ ಪ್ರತಿಪಕ್ಷಗಳು ಗದ್ದಲ ಉಂಟುಮಾಡಿದ್ದರಿಂದ ಲೋಕಸಭೆಯನ್ನು ಮಂಗಳವಾರ ಕೆಲಕಾಲ ಮುಂದೂಡಲಾಯಿತು.

ನವದೆಹಲಿ: ಬಿಜೆಪಿ ಸದಸ್ಯ ಸಿ.ಪಿ. ಜೋಶಿ ರದ್ದುಪಡಿಸಿರುವ ಸತಿ ಪದ್ಧತಿಯನ್ನು ವೈಭವೀಕರಿಸಿದ್ದಾರೆ ಎಂದು ಆರೋಪಿಸಿ ಪ್ರತಿಪಕ್ಷಗಳು ಗದ್ದಲ ಉಂಟುಮಾಡಿದ್ದರಿಂದ ಲೋಕಸಭೆಯನ್ನು ಮಂಗಳವಾರ ಕೆಲಕಾಲ ಮುಂದೂಡಲಾಯಿತು.

ರಾಜಸ್ಥಾನದ ಚಿತ್ತೋರ್‌ಗಢದ ಬಿಜೆಪಿ ಸದಸ್ಯ ಜೋಶಿ, ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲಿನ ಚರ್ಚೆಯನ್ನು ಪ್ರಾರಂಭಿಸಿದಾಗ, ಆಕ್ರಮಣಕಾರ ಅಲ್ಲಾವುದೀನ್ ಖಿಲ್ಜಿಯಿಂದ ತನ್ನ ಗೌರವವನ್ನು ರಕ್ಷಿಸಲು ಮೇವಾರದ ರಾಣಿ ಪದ್ಮಾವತಿ ಸ್ವಯಂ ದಹನ ಮಾಡಿಕೊಂಡ ವಿಚಾರವನ್ನು ಉಲ್ಲೇಖಿಸಿದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಪ್ರತಿಪಕ್ಷದ ಸದಸ್ಯರಾದ ಸುಪ್ರಿಯಾ ಸುಳೆ (ಎನ್‌ಸಿಪಿ), ಕನಿಮೋಳಿ, ದಯಾನಿಧಿ ಮಾರನ್, ಎ ರಾಜಾ (ಡಿಎಂಕೆ), ಕೆ ಮುರಳೀಧರನ್ (ಕಾಂಗ್ರೆಸ್), ಇಮ್ತಿಯಾಜ್ ಜಲೀಲ್ (ಎಐಎಂಐಎಂ) ಜೋಶಿ ‘ಸತಿ’ ಪದ್ಧತಿಯನ್ನು ವೈಭವೀಕರಿಸಿದ್ದಾರೆ ಎಂದು ಪ್ರತಿಪಾದಿಸಿದರು.

ತಾನು ಸತಿ ಪದ್ದತಿ ಬಗ್ಗೆ ಯಾವುದೇ ಉಲ್ಲೇಖ ಮಾಡಿಲ್ಲ. ಆದರೆ,  ಆದರೆ ಪದ್ಮಾವತಿ ತನ್ನ ಗೌರವವನ್ನು ಕಾಪಾಡಲು 'ಜೌಹರ್' (ಸ್ವಯಂ ದಹನ) ಮಾಡಿಕೊಂಡಿದ್ದಾರೆ ಎಂದು ಹೇಳಿರುವುದಾಗಿ ಜೋಶಿ ಸಮರ್ಥಿಸಿಕೊಂಡಿದರು. ಇದರಿಂದ ಆಕ್ರೋಶಗೊಂಡ ಪ್ರತಿಪಕ್ಷದ ಸದಸ್ಯರು ಸದನದ ಬಾವಿಗಿಳಿದು ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.

ಈ ಮಧ್ಯೆ ಜೋಶಿ ತನ್ನ ನಿಲುವಿಗೆ ಅಂಟಿಕೊಂಡರು. ಪ್ರತಿಭಟನೆ ಮುಂದುವರಿದಿದ್ದರಿಂದ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಕಲಾಪವನ್ನು 20 ನಿಮಿಷಗಳ ಕಾಲ ಮುಂದೂಡಿದರು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT