ಎನ್'ಡಿಆರ್'ಎಫ್ ಪಡೆ 
ದೇಶ

ಪ್ರಬಲ ಭೂಕಂಪಕ್ಕೆ ತತ್ತರಿಸಿದ ಸಿರಿಯಾ, ಟರ್ಕಿ: ನೆರವಿಗೆ ಭಾರತ ಮುಂದು, ರಕ್ಷಣಾ, ವೈದ್ಯ ತಂಡಗಳ ರವಾನೆ

ಪ್ರಬಲ ಭೂಕಂಪಕ್ಕೆ ಟರ್ಕಿ, ಸಿರಿಯಾ ತತ್ತರಿಸಿ ಹೋಗಿದ್ದು, ಸಂತ್ರಸ್ತ ದೇಶಗಳಿಗೆ ನೆರವಿನ ಹಸ್ತ ಚಾಚಿರುವ ಭಾರತ, ವೈದ್ಯಕೀಯ ತಂಡ, ರಕ್ಷಣಾ ಪಡೆಗಳನ್ನು ರವಾನಿಸಿದೆ.

ನವದೆಹಲಿ: ಪ್ರಬಲ ಭೂಕಂಪಕ್ಕೆ ಟರ್ಕಿ, ಸಿರಿಯಾ ತತ್ತರಿಸಿ ಹೋಗಿದ್ದು, ಸಂತ್ರಸ್ತ ದೇಶಗಳಿಗೆ ನೆರವಿನ ಹಸ್ತ ಚಾಚಿರುವ ಭಾರತ, ವೈದ್ಯಕೀಯ ತಂಡ, ರಕ್ಷಣಾ ಪಡೆಗಳನ್ನು ರವಾನಿಸಿದೆ.

ಭೂಕಂಪ ಪೀಡಿತ ರಾಷ್ಟ್ರಗಳಿಗೆ 48 ಜನರ ರಕ್ಷಣಾ, ವೈದ್ಯ ಪಡೆಯ ಮೊದಲ ತಂಡ ತೆರಳಿದ್ದು, ನೆರವಿನ ಕಾರ್ಯಾಚರಣೆಯನ್ನು ಆರಂಭಿಸಲು ಮುಂದಾಗಿದ್ದಾರೆಂದು ತಿಳಿದುಬಂದಿದೆ.

ಪ್ರಕೃತಿ ಮುನಿಸಿಗೆ ವಿನಾಶಕಾರಿ ಪ್ರಮಾಣದಲ್ಲಿ ಹಾನಿಯಾದ ದೇಶಗಳಿಗೆ ನೆರವು ನೀಡುವುದಾಗಿ ಪ್ರಧಾನಮಂತ್ರಿ ಕಾರ್ಯಾಲಯ ಘೋಷಿಸಿದ ಕೆಲವೇ ಗಂಟೆಗಳಲ್ಲಿ ಭಾರತೀಯ ವಾಯುಪಡೆಯ ವಿಮಾನದಲ್ಲಿ ಪರಿಹಾರ ಸಾಮಗ್ರಿಗಳ ಜೊತೆಗೆ ಮೊದಲ ತಂಡ ಟರ್ಕಿಗೆ ಹಾರಿದೆ.

ಪುರುಷ ಮತ್ತು ಮಹಿಳಾ ಸಿಬ್ಬಂದಿ, ನುರಿತ ಶ್ವಾನದಳಗಳು, ವೈದ್ಯಕೀಯ ಸಾಮಗ್ರಿಗಳು, ಸುಧಾರಿತ ಕೊರೆಯುವ ಉಪಕರಣಗಳು ಸೇರಿದಂತೆ ಇತರ ಸಾಧನಗಳನ್ನು ಒಳಗೊಂಡಂತೆ ಪರಿಣಿತ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ(ಎನ್​ಡಿಆರ್​ಎಫ್​) ತಂಡ ನೆರವಿಗೆ ತೆರಳಿದೆ. ಟರ್ಕಿ ಮತ್ತು ಸಿರಿಯಾಗೆ ಭಾರತದಿಂದ ಮಾನವೀಯ ನೆರವು ನೀಡಲು ವಿಪತ್ತು ಪರಿಹಾರ ತಂಡಗಳು ಸಜ್ಜಾಗಿವೆ.

ಈ ಸಂಬಂಧ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಬಾಗ್ಚಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿದ್ದು, ಎನ್'ಡಿಆರ್'ಎಫ್ ತಂಡ ಅಗತ್ಯ ಸಾಮಗ್ರಿಗಳ ಜೊತೆಗೆ ತೆರಳುತ್ತಿದೆ ಎಂದು ಹೇಳಿದ್ದಾರೆ.

ಭಾರತದಲ್ಲಿರುವ ಟರ್ಕಿಯ ರಾಯಭಾರಿ ಫಿರತ್ ಸುನೆಲ್ ಅವರು ಭಾರತ ಸರ್ಕಾರದ ನೆರವಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

"ಅಗತ್ಯಕ್ಕೆ ಬೇಕಾಗುವವ ನಿಜವಾದ ಸ್ನೇಹಿತ" ಎಂದು ಫಿರತ್ ಸುನೆಲ್ ಹೇಳಿದ್ದು, ಟರ್ಕಿಶ್​ ಭಾಷೆಯಲ್ಲಿನ ಗಾದೆಯನ್ನೂ ಉಲ್ಲೇಖಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT