ಪಿಎಂ ನರೇಂದ್ರ ಮೋದಿ 
ದೇಶ

'ತೃಪ್ತಿ ಪಟ್ಟುಕೊಂಡು ಸುಮ್ಮನೆ ಕೂರಬೇಡಿ, ಬಜೆಟ್ ಅನ್ನು ಜನರ ಬಳಿ ಕೊಂಡೊಯ್ಯಿರಿ': ಬಿಜೆಪಿ ಸಂಸದರಿಗೆ ಪ್ರಧಾನಿ ಮೋದಿ ಸಲಹೆ

ಕೆಲಸದ ವಿಚಾರ, ಸಮಾಜಸೇವೆಯಲ್ಲಿ ಆತ್ಮತೃಪ್ತಿ ಪಟ್ಟುಕೊಳ್ಳದೆ ತಳಮಟ್ಟದಲ್ಲಿ ಜನರಿಗೆ ತಲುಪಬೇಕು ಎಂದು ಬಿಜೆಪಿ ಸಂಸದರಿಗೆ ಪ್ರಧಾನಿ ನರೇಂದ್ರ ಮೋದಿ ಕಿವಿಮಾತು ಹೇಳಿದ್ದಾರೆ.

ನವದೆಹಲಿ: ದೆಹಲಿಯಲ್ಲಿ ಬಿಜೆಪಿ ಸಂಸದೀಯ ಪಕ್ಷ ಸಭೆ ನಡೆಯಿತು. ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಕೇಂದ್ರ ಸಚಿವರು, ನಾಯಕರು, ಸಂಸದರು ಭಾಗವಹಿಸಿದ್ದರು. 

ಸಭೆ ಆರಂಭಕ್ಕೆ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ ಪ್ರಧಾನಿ ನರೇಂದ್ರ ಮೋದಿಯವರಿಗೆ ಹಾರ ಹಾಕಿ ಸನ್ಮಾನಿಸಿದರು. ಇತ್ತೀಚೆಗಷ್ಟೆ ಕೇಂದ್ರ ಬಜೆಟ್ 2023 ಮಂಡನೆಯಾಗಿದ್ದು, ಈ ಬಗ್ಗೆ ಚರ್ಚಿಸಲು ಮತ್ತು ಸಂಸತ್ತಿನಲ್ಲಿ ನಡೆಯುತ್ತಿರುವ ಬಜೆಟ್ ಅಧಿವೇಶನ ಹಿನ್ನೆಲೆಯಲ್ಲಿ ಬಿಜೆಪಿ ಸಂಸದೀಯ ಸಭೆ ಕರೆಯಲಾಗಿದೆ.

ಈ ಸಂದರ್ಭದಲ್ಲಿ ಸಚಿವರು, ಸಂಸದರನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಕೆಲಸದ ವಿಚಾರ, ಸಮಾಜಸೇವೆಯಲ್ಲಿ ಆತ್ಮತೃಪ್ತಿ ಪಟ್ಟುಕೊಳ್ಳದೆ ತಳಮಟ್ಟದಲ್ಲಿ ಜನರಿಗೆ ತಲುಪಬೇಕು ಎಂದು ಬಿಜೆಪಿ ಸಂಸದರಿಗೆ ಪ್ರಧಾನಿ ನರೇಂದ್ರ ಮೋದಿ ಕಿವಿಮಾತು ಹೇಳಿದ್ದಾರೆ.

ಅತ್ಯಂತ ಕಠಿಣ ಪರಿಸ್ಥಿತಿಯಲ್ಲಿ ತಮ್ಮ ಸರ್ಕಾರ ಉತ್ತಮ ಬಜೆಟ್ ನೀಡಲು ಪ್ರಯತ್ನಿಸಿತು. ಇದಕ್ಕೆ ಎಲ್ಲರು ಸಹಕಾರ ನೀಡಿದ್ದಾರೆ ಎಂದು ಶ್ಲಾಘಿಸಿದರು.ಬಜೆಟ್ ಎಂದರೆ ಸಮಾಜದ ಪ್ರತಿಯೊಂದು ಶ್ರೇಣಿಯನ್ನು ತಲುಪಬೇಕು. ಈ ಬಾರಿ ಮಂಡಿಸಿರುವ ಬಜೆಟ್ ನ್ನು ಜನರ ಬಳಿಗೆ ತೆಗೆದುಕೊಂಡು ಹೋಗುವಂತೆ ಇದೇ ಸಂದರ್ಭದಲ್ಲಿ ಸಂಸದರಿಗೆ ಪ್ರಧಾನಿ ಸೂಚಿಸಿದರು.

ತಮ್ಮ ತಮ್ಮ ಕ್ಷೇತ್ರಗಳಲ್ಲಿ ಬಜೆಟ್ ಬಗ್ಗೆ ಮಾತನಾಡುವುದು, ಜನರಿಗೆ ತಲುಪಿಸುವುದು ಸಂಸದರ ಜವಾಬ್ದಾರಿಯಾಗಿದೆ. ಜನರಿಗೆ ಬಜೆಟ್ ನಲ್ಲಿ ಏನಿದೆ, ಜಗತ್ತು ಆರ್ಥಿಕ ಅನಿಶ್ಚಿತತೆ ಎದುರಿಸುವಾಗ ಬಜೆಟ್ ನಲ್ಲಿ ಜನರಿಗೆ ಏನು ಕೊಡಲಾಗಿದೆ ಎಂಬುದನ್ನು ತೋರಿಸಬೇಕು ಎಂದರು.

ಯುವಕರನ್ನು ಉತ್ತೇಜಿಸಲು ಅವರು ಹೆಚ್ಚೆಚ್ಚು ಸ್ಪರ್ಧೆಗಳು ಮತ್ತು ಕ್ರೀಡೆಗಳಲ್ಲಿ ಭಾಗವಹಿಸುವಂತೆ ಮಾಡಲು ಹಲವು ಚಟುವಟಿಕೆಗಳಲ್ಲಿ ಭಾಗವಹಿಸುವಂತೆ ಮತ್ತು ಗಡಿ ಜಿಲ್ಲೆಗಳ ಜನರನ್ನು ತಲುಪುವಂತೆ ಸಂಸದರಿಗೆ ಸಲಹೆ ನೀಡಿದರು.

2014 ಮತ್ತು 2019ರಲ್ಲಿ ಬಿಜೆಪಿಗೆ ಬಹುಮತ ಸಿಕ್ಕಿ ಅಧಿಕಾರಕ್ಕೆ ಬರಲು ಸಾಧ್ಯವಾಯಿತಾದರೂ ಅಷ್ಟಕ್ಕೇ ತೃಪ್ತಿಪಟ್ಟುಕೊಳ್ಳಬಾರದು, ಇನ್ನಷ್ಟು ಕೆಲಸ ಮಾಡಿ ಜನರಿಗೆ ಹತ್ತಿರವಾಗಬೇಕು ಎಂದರು.

ಜನವರಿ 31ರಂದು ಕೇಂದ್ರ ಬಜೆಟ್ ಅಧಿವೇಶನ ಆರಂಭವಾಗಿದ್ದು ರಾಷ್ಟ್ರಪತಿ ದ್ರೌಪದಿ ಮುರ್ಮು ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದರು. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1ರಂದು 2023-24ನೇ ಸಾಲಿನ ಬಜೆಟ್ ಮಂಡಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಮಧ್ಯಾಹ್ನ 2.30ಕ್ಕೆ ಸಿದ್ದರಾಮಯ್ಯ ರಾಜೀನಾಮೆ; 3 ಗಂಟೆಗೆ ಪತ್ರಿಕಾಗೋಷ್ಠಿ; ಮುಂದಿನ CM ಡಿ.ಕೆ ಶಿವಕುಮಾರ್

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT