ಬಂಧಿತ ಆರೋಪಿಗಳು 
ದೇಶ

ಬಾಲ್ಯ ವಿವಾಹ ವಿರುದ್ಧ ಕಾರ್ಯಾಚರಣೆ: ಅಸ್ಸಾಂ ಸರ್ಕಾರದಿಂದ ತಾತ್ಕಾಲಿಕ ಜೈಲುಗಳ ಸ್ಥಾಪನೆ

ಪ್ರತಿಪಕ್ಷಗಳ ಟೀಕೆ ಮತ್ತು ಪ್ರತಿಭಟನೆಗಳ ನಡುವೆಯೇ ಬಾಲ್ಯ ವಿವಾಹದ ವಿರುದ್ಧ ಕಾರ್ಯಾಚರಣೆಯನ್ನು ತೀವ್ರಗೊಳಿಸಿರುವ ಅಸ್ಸಾಂ ಸರ್ಕಾರ ನಿತ್ಯ ನೂರಾರು ಜನರನ್ನು ಬಂಧಿಸುತ್ತಿದೆ.

ಗುವಾಹತಿ: ಪ್ರತಿಪಕ್ಷಗಳ ಟೀಕೆ ಮತ್ತು ಪ್ರತಿಭಟನೆಗಳ ನಡುವೆಯೇ ಬಾಲ್ಯ ವಿವಾಹದ ವಿರುದ್ಧ ಕಾರ್ಯಾಚರಣೆಯನ್ನು ತೀವ್ರಗೊಳಿಸಿರುವ ಅಸ್ಸಾಂ ಸರ್ಕಾರ ನಿತ್ಯ ನೂರಾರು ಜನರನ್ನು ಬಂಧಿಸುತ್ತಿದೆ.

ಬಂಧಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಪೊಲೀಸರು ಈಗ ಆರೋಪಿಗಳನ್ನು ಇರಿಸಲು ತಾತ್ಕಾಲಿಕ ಜೈಲುಗಳನ್ನು ಸ್ಥಾಪಿಸುತ್ತಿದ್ದಾರೆ. ಗೋಲ್ಪಾರಾ ಮತ್ತು ಕ್ಯಾಚಾರ್ ಜಿಲ್ಲೆಗಳಲ್ಲಿ ಈಗಾಗಲೇ ಅಂತಹ ಎರಡು ಜೈಲುಗಳನ್ನು ಸ್ಥಾಪಿಸಿದೆ.

ವಿವಿಧ ಜಿಲ್ಲೆಗಳ ಆರೋಪಿಗಳನ್ನು ಈಗಾಗಲೇ ಗೋಲ್‌ಪಾರಾದಲ್ಲಿರುವ ಜೈಲಿಗೆ ಸ್ಥಳಾಂತರಿಸಿದ್ದರೆ, ಕ್ಯಾಚಾರ್‌ನಲ್ಲಿ ಮತ್ತೊಂದು ತಾತ್ಕಾಲಿಕ ಜೈಲು ಸಿದ್ಧವಾಗುತ್ತಿದೆ.

"ತಾತ್ಕಾಲಿಕ ಜೈಲು ಸ್ಥಾಪಿಸಲು ನಾವು ಅನುಮೋದನೆ ಪಡೆದಿದ್ದೇವೆ. ಸಿಲ್ಚಾರ್ ಬಳಿ ಕಾರ್ಯನಿರ್ವಹಿಸದ ಅಸ್ತಿತ್ವದಲ್ಲಿರುವ ಸರ್ಕಾರಿ ಆವರಣದಲ್ಲಿ ಇದನ್ನು ಸ್ಥಾಪಿಸಲಾಗುವುದು" ಎಂದು ಕ್ಯಾಚಾರ್ ಪೊಲೀಸ್ ವರಿಷ್ಠಾಧಿಕಾರಿ ನೋಮಲ್ ಮಹತ್ತಾ ಪಿಟಿಐಗೆ ತಿಳಿಸಿದ್ದಾರೆ.

ಕಟ್ಟಡ ಮತ್ತು ಇತರ ಮೂಲಸೌಕರ್ಯಗಳು ಈಗಾಗಲೇ ಲಭ್ಯವಿದ್ದು, ಈಗ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT