ರಾಹುಲ್ ಗಾಂಧಿ 
ದೇಶ

ಕೇಂದ್ರ ಸರ್ಕಾರದಿಂದ ಅದಾನಿ ರಕ್ಷಣೆ: ಲೋಕಸಭೆಯಲ್ಲಿ ಪ್ರಧಾನಿ ಮೋದಿ ಹೇಳಿಕೆ ಬಳಿಕ ರಾಹುಲ್ ಗಾಂಧಿ ಪ್ರತಿಕ್ರಿಯೆ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೈಗಾರಿಕೋದ್ಯಮಿ ಗೌತಮ್ ಅದಾನಿಯನ್ನು ರಕ್ಷಿಸುತ್ತಿದೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಬುಧವಾರ ಪುನರುಚ್ಚರಿಸಿದ್ದಾರೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೈಗಾರಿಕೋದ್ಯಮಿ ಗೌತಮ್ ಅದಾನಿಯನ್ನು ರಕ್ಷಿಸುತ್ತಿದೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಬುಧವಾರ ಪುನರುಚ್ಚರಿಸಿದ್ದಾರೆ.

ರಾಷ್ಟ್ರಪತಿಗಳ ಭಾಷಣಕ್ಕೆ ಕೃತಜ್ಞತಾ ನಿರ್ಣಯದ ಹಿಂದಿನ ಸಂಸತ್ತಿನಲ್ಲಿ ಪ್ರಧಾನಿ ಮೋದಿ ಅವರ ಉತ್ತರದಿಂದ ತಾವು ತೃಪ್ತರಾಗಿಲ್ಲ ಎಂದು ಹೇಳಿದ ರಾಹುಲ್ ಗಾಂಧಿ, 'ಪ್ರಧಾನಿ ಭಾಷಣದಿಂದ ನನಗೆ ತೃಪ್ತಿ ಇಲ್ಲ. ಆದರೆ, ಅದು ಸತ್ಯವನ್ನು ಬಹಿರಂಗಪಡಿಸಿದ್ದು, ಕೇಂದ್ರ ಸರ್ಕಾರ ಕೈಗಾರಿಕೋದ್ಯಮಿ ಗೌತಮ್ ಅದಾನಿಯನ್ನು ರಕ್ಷಿಸುತ್ತಿದೆ' ಎಂದು ಹೇಳಿದರು.

ಬುಧವಾರ ಲೋಕಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ ಮುಗಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, "ಪ್ರಧಾನಿ ಭಾಷಣದಿಂದ ನನಗೆ ತೃಪ್ತಿ ಇಲ್ಲ. ಆದರೆ, ಅದು ಸತ್ಯವನ್ನು ಬಹಿರಂಗಪಡಿಸಿದೆ. ಅವರ ಭಾಷಣದಲ್ಲಿ ಅದಾನಿ ಗ್ರೂಪ್ ಬಗ್ಗೆ ವಿಚಾರಣೆಯ ಬಗ್ಗೆ ಏನೂ ಹೇಳಲಿಲ್ಲ. ಹಿಂಡೆನ್‌ಬರ್ಗ್ ವರದಿಯ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಗೌತಮ್ ಅದಾನಿ ಅವರನ್ನು ರಕ್ಷಿಸುತ್ತಿದ್ದಾರೆ ಎಂಬುದು ಇದರಿಂದ ಸ್ಪಷ್ಟವಾಗಿದೆ. ನಾವು ಎತ್ತಿರುವ ಯಾವುದೇ ಪ್ರಶ್ನೆಗಳಿಗೆ ಪ್ರಧಾನಿ ಮೋದಿ ಉತ್ತರಿಸಲಿಲ್ಲ ಎಂದು ವಯನಾಡ್ ಸಂಸದರೂ ಕೂಡ ಆಗಿರುವ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

"ಪ್ರಧಾನಿ, ತಮ್ಮ ಭಾಷಣದಲ್ಲಿ' ಯಾವುದೇ (ಅವರ) ಪ್ರಶ್ನೆಗಳಿಗೆ ಉತ್ತರಿಸಲಿಲ್ಲ. ಅವರು ಶೆಲ್-ಶಾಕ್ ಆಗಿದ್ದರು. ನಾನು ಯಾವುದೇ ಕಠಿಣ ಪ್ರಶ್ನೆಗಳನ್ನು ಎತ್ತಲಿಲ್ಲ. ಸರಳವಾದ ಪ್ರಶ್ನೆಗಳನ್ನು ಅವರು ತಪ್ಪಿಸಿಕೊಂಡರು. ಪ್ರಧಾನಿ ಮೋದಿ ಅವರು ಗೌತಮ್ ಅದಾನಿ ಅವರೊಂದಿಗೆ ಸ್ನೇಹಿತರಾಗದಿದ್ದರೆ, ಹಿಂಡೆನ್‌ಬರ್ಗ್ ವರದಿಯ ಹಿನ್ನೆಲೆಯಲ್ಲಿ ಅವರ ವ್ಯವಹಾರಗಳ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಅವರು ತಮ್ಮ ಭಾಷಣದಲ್ಲಿ ಉಲ್ಲೇಖಿಸಬೇಕಿತ್ತು. ಆದರೆ ಅಂತಹ ಒಂದೇ ಒಂದು ಶಬ್ಧ ಕೂಡ ಅವರು ಬರಲಿಲ್ಲ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT