ನಿತಿನ್ ಗಡ್ಕರಿ-ಪ್ರತಾಪ್ ಸಿಂಹ 
ದೇಶ

Karnataka Election effect: ರಾಜ್ಯದ 6 ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ 3,582 ಕೋಟಿ ರೂ. ಮಂಜೂರು- ನಿತಿನ್ ಗಡ್ಕರಿ

ಕರ್ನಾಟಕ ವಿಧಾನಸಭೆ ಚುನಾವಣೆಗೆ ಎರಡ್ಮೂರು ತಿಂಗಳು ಬಾಕಿ ಇರುವಂತೆ ರಾಜ್ಯದಲ್ಲಿನ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಒಟ್ಟು 3,582 ಕೋಟಿ ರೂಪಾಯಿ ಅನುದಾನವನ್ನು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಘೋಷಿಸಿದ್ದಾರೆ.

ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಎರಡ್ಮೂರು ತಿಂಗಳು ಬಾಕಿ ಇರುವಂತೆ ರಾಜ್ಯದಲ್ಲಿನ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಒಟ್ಟು 3,582 ಕೋಟಿ ರೂಪಾಯಿ ಅನುದಾನವನ್ನು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಘೋಷಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ನಿತಿನ್ ಗಡ್ಕರಿ, ಕನಮಡಿ ಬಿಜ್ಜರಗಿ ಟಿಕೋಟಾ ಸೆಕ್ಷನ್​ನಲ್ಲಿ (ಬಿಜಾಪುರ) ದ್ವಿಪಥ ರಸ್ತೆಯ ಅಗಲೀಕರಣಕ್ಕೆ 196.05 ಕೋಟಿ ರೂಪಾಯಿ. 

ಇಪಿಸಿ ಮಾದರಿಯಲ್ಲಿ ವಿಜಯಪುರ ಕಲಬುರ್ಗಿಯ ಮಹಾರಾಷ್ಟ್ರ ಗಡಿಭಾಗದ ರಾಹೆ-548ಬಿಗೆ ಸೇರುವ ಮುರುಂನಿಂದ ಐಬಿ ಸರ್ಕಲ್​ವರೆಗಿನ ದ್ವಿಪಥ ರಸ್ತೆಯ ಅಗಲೀಕರಣ ಯೋಜನೆಗೆ 957.09 ಕೋಟಿ ರೂಪಾಯಿ ಅನುದಾನ.

ಕೊಪ್ಪಳ ಮತ್ತು ಗದಗ್​ನಲ್ಲಿ ರಾಹೆ-367ರ ಗಡ್ಡನಕೇರಿ ಸೆಕ್ಷನ್​ನಲ್ಲಿ ಕುಕುನೂರ, ಯಲಬುರ್ಗ, ಗಜೇಂದ್ರಗಡದಲ್ಲಿ ಬೈಪಾಸ್ ರಸ್ತೆ ನಿರ್ಮಾಣ ಯೋಜನೆಗೆ 333.96 ಕೋಟಿ ರೂ. ಹಾಗೂ ಬಾಗಲಕೋಟೆ ಜಿಲ್ಲೆ ರಾಹೆ-367: ಸರ್ಜಾಪುರದಿಂದ ಪಟ್ಟದಕಲ್ಲು ರಸ್ತೆ ಅಗಲೀಕರಣ ಯೋಜನೆಗೆ 445.62 ಕೋಟಿ ರೂಪಾಯಿ ಬಿಡುಗಡೆ.

ಮೈಸೂರು ಜಿಲ್ಲೆಯ ಕುಶಾಲನಗರ ಬೈಪಾಸ್‌ನ ಪ್ರಾರಂಭದಲ್ಲಿ ಗುಡ್ಡೆಹೊಸೂರು ಬಳಿಯ NH-275 ರ ಕುಶಾಲನಗರ ಭಾಗದವರೆಗೆ ಮೈಸೂರಿನಿಂದ ಸುಸಜ್ಜಿತ ನಾಲ್ಕು ಪಥ ರಸ್ತೆ ಅಗಲೀಕರಣ ಯೋಜನೆಗೆ 909.86 ಕೋಟಿ ರೂಪಾಯಿ ಬಜೆಟ್‌ನಲ್ಲಿ ಮಂಜೂರು ಮಾಡಲಾಗಿದೆ. ಅಲ್ಲದೆ ಮೈಸೂರಿಗೆ ಹೆಚ್ಚುವರಿಯಾಗಿ 739.39 ಕೋಟಿ ರೂ. ನೀಡಲಾಗಿದ್ದು ಯಲವಾಲ ಕೆಆರ್ ನಗರ ರಸ್ತೆ ಜಂಕ್ಷನ್​ನಲ್ಲಿ ನಾಲ್ಕು ಪಥ ರಸ್ತೆ ನಿರ್ಮಾಣ ಮಾಡಲಾಗುತ್ತದೆ.

ಯೋಜನೆಗೆ ಅನುದಾನ ಮಂಜೂರು ಮಾಡಿದ್ದಕ್ಕಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿ ಸಚಿವ ನಿತಿನ್ ಗಡ್ಕರಿ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.

ಈ ಹಿಂದೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರು ಮೈಸೂರು-ಕುಶಾಲನಗರ ಹೆದ್ದಾರಿಗೆ ₹ 4,000 ಕೋಟಿ ವೆಚ್ಚದ ಅನುದಾನ ನೀಡುವಂತೆ ಕೇಂದ್ರ ಹಣಕಾಸು ಸಚಿವಾಲಯಕ್ಕೆ ಹಲವು ಬಾರಿ ಮನವಿ ಮಾಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT