ನಿತಿನ್ ಗಡ್ಕರಿ-ಪ್ರತಾಪ್ ಸಿಂಹ 
ದೇಶ

Karnataka Election effect: ರಾಜ್ಯದ 6 ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ 3,582 ಕೋಟಿ ರೂ. ಮಂಜೂರು- ನಿತಿನ್ ಗಡ್ಕರಿ

ಕರ್ನಾಟಕ ವಿಧಾನಸಭೆ ಚುನಾವಣೆಗೆ ಎರಡ್ಮೂರು ತಿಂಗಳು ಬಾಕಿ ಇರುವಂತೆ ರಾಜ್ಯದಲ್ಲಿನ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಒಟ್ಟು 3,582 ಕೋಟಿ ರೂಪಾಯಿ ಅನುದಾನವನ್ನು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಘೋಷಿಸಿದ್ದಾರೆ.

ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಎರಡ್ಮೂರು ತಿಂಗಳು ಬಾಕಿ ಇರುವಂತೆ ರಾಜ್ಯದಲ್ಲಿನ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಒಟ್ಟು 3,582 ಕೋಟಿ ರೂಪಾಯಿ ಅನುದಾನವನ್ನು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಘೋಷಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ನಿತಿನ್ ಗಡ್ಕರಿ, ಕನಮಡಿ ಬಿಜ್ಜರಗಿ ಟಿಕೋಟಾ ಸೆಕ್ಷನ್​ನಲ್ಲಿ (ಬಿಜಾಪುರ) ದ್ವಿಪಥ ರಸ್ತೆಯ ಅಗಲೀಕರಣಕ್ಕೆ 196.05 ಕೋಟಿ ರೂಪಾಯಿ. 

ಇಪಿಸಿ ಮಾದರಿಯಲ್ಲಿ ವಿಜಯಪುರ ಕಲಬುರ್ಗಿಯ ಮಹಾರಾಷ್ಟ್ರ ಗಡಿಭಾಗದ ರಾಹೆ-548ಬಿಗೆ ಸೇರುವ ಮುರುಂನಿಂದ ಐಬಿ ಸರ್ಕಲ್​ವರೆಗಿನ ದ್ವಿಪಥ ರಸ್ತೆಯ ಅಗಲೀಕರಣ ಯೋಜನೆಗೆ 957.09 ಕೋಟಿ ರೂಪಾಯಿ ಅನುದಾನ.

ಕೊಪ್ಪಳ ಮತ್ತು ಗದಗ್​ನಲ್ಲಿ ರಾಹೆ-367ರ ಗಡ್ಡನಕೇರಿ ಸೆಕ್ಷನ್​ನಲ್ಲಿ ಕುಕುನೂರ, ಯಲಬುರ್ಗ, ಗಜೇಂದ್ರಗಡದಲ್ಲಿ ಬೈಪಾಸ್ ರಸ್ತೆ ನಿರ್ಮಾಣ ಯೋಜನೆಗೆ 333.96 ಕೋಟಿ ರೂ. ಹಾಗೂ ಬಾಗಲಕೋಟೆ ಜಿಲ್ಲೆ ರಾಹೆ-367: ಸರ್ಜಾಪುರದಿಂದ ಪಟ್ಟದಕಲ್ಲು ರಸ್ತೆ ಅಗಲೀಕರಣ ಯೋಜನೆಗೆ 445.62 ಕೋಟಿ ರೂಪಾಯಿ ಬಿಡುಗಡೆ.

ಮೈಸೂರು ಜಿಲ್ಲೆಯ ಕುಶಾಲನಗರ ಬೈಪಾಸ್‌ನ ಪ್ರಾರಂಭದಲ್ಲಿ ಗುಡ್ಡೆಹೊಸೂರು ಬಳಿಯ NH-275 ರ ಕುಶಾಲನಗರ ಭಾಗದವರೆಗೆ ಮೈಸೂರಿನಿಂದ ಸುಸಜ್ಜಿತ ನಾಲ್ಕು ಪಥ ರಸ್ತೆ ಅಗಲೀಕರಣ ಯೋಜನೆಗೆ 909.86 ಕೋಟಿ ರೂಪಾಯಿ ಬಜೆಟ್‌ನಲ್ಲಿ ಮಂಜೂರು ಮಾಡಲಾಗಿದೆ. ಅಲ್ಲದೆ ಮೈಸೂರಿಗೆ ಹೆಚ್ಚುವರಿಯಾಗಿ 739.39 ಕೋಟಿ ರೂ. ನೀಡಲಾಗಿದ್ದು ಯಲವಾಲ ಕೆಆರ್ ನಗರ ರಸ್ತೆ ಜಂಕ್ಷನ್​ನಲ್ಲಿ ನಾಲ್ಕು ಪಥ ರಸ್ತೆ ನಿರ್ಮಾಣ ಮಾಡಲಾಗುತ್ತದೆ.

ಯೋಜನೆಗೆ ಅನುದಾನ ಮಂಜೂರು ಮಾಡಿದ್ದಕ್ಕಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿ ಸಚಿವ ನಿತಿನ್ ಗಡ್ಕರಿ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.

ಈ ಹಿಂದೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರು ಮೈಸೂರು-ಕುಶಾಲನಗರ ಹೆದ್ದಾರಿಗೆ ₹ 4,000 ಕೋಟಿ ವೆಚ್ಚದ ಅನುದಾನ ನೀಡುವಂತೆ ಕೇಂದ್ರ ಹಣಕಾಸು ಸಚಿವಾಲಯಕ್ಕೆ ಹಲವು ಬಾರಿ ಮನವಿ ಮಾಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT