ಪ್ರಾತಿನಿಧಿಕ ಚಿತ್ರ 
ದೇಶ

ಪೊಲೀಸ್ ಇಲಾಖೆಯಲ್ಲಿ ಮಹಿಳಾ ಪ್ರಾತಿನಿಧ್ಯವನ್ನು ಶೇ 33ಕ್ಕೆ ಹೆಚ್ಚಿಸಿ: ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ

ಪೊಲೀಸ್ ಪಡೆಯಲ್ಲಿ ಮಹಿಳೆಯರ ಪ್ರಾತಿನಿಧ್ಯವನ್ನು ಶೇ 33 ಕ್ಕೆ ಹೆಚ್ಚಿಸಲು ಕೇಂದ್ರ ಸರ್ಕಾರವು ರಾಜ್ಯಗಳಿಗೆ ಅನೇಕ ಸಲಹೆಗಳನ್ನು ನೀಡಿದೆ. ಆದರೆ, 2022ರ ಜನವರಿ 1 ಕ್ಕೆ ಸದ್ಯ ಮಹಿಳೆಯರ ನಿಜವಾದ ಸಾಮರ್ಥ್ಯವು ಶೇ 11.75 ರಷ್ಟಿದೆ ಎಂದು ರಾಜ್ಯಸಭೆಗೆ ಬುಧವಾರ ತಿಳಿಸಿದೆ.

ನವದೆಹಲಿ: ಪೊಲೀಸ್ ಪಡೆಯಲ್ಲಿ ಮಹಿಳೆಯರ ಪ್ರಾತಿನಿಧ್ಯವನ್ನು ಶೇ 33 ಕ್ಕೆ ಹೆಚ್ಚಿಸಲು ಕೇಂದ್ರ ಸರ್ಕಾರವು ರಾಜ್ಯಗಳಿಗೆ ಅನೇಕ ಸಲಹೆಗಳನ್ನು ನೀಡಿದೆ. ಆದರೆ, 2022ರ ಜನವರಿ 1 ಕ್ಕೆ ಸದ್ಯ ಮಹಿಳೆಯರ ನಿಜವಾದ ಸಾಮರ್ಥ್ಯವು ಶೇ 11.75 ರಷ್ಟಿದೆ ಎಂದು ರಾಜ್ಯಸಭೆಗೆ ಬುಧವಾರ ತಿಳಿಸಿದೆ.

ಎಲ್ಲಾ ರಾಜ್ಯ ಸರ್ಕಾರಗಳು ಮಹಿಳಾ ಪೊಲೀಸರ ಪ್ರಾತಿನಿಧ್ಯವನ್ನು ಒಟ್ಟು ಬಲದ 33 ಪ್ರತಿಶತಕ್ಕೆ ಹೆಚ್ಚಿಸಲು ಗೃಹ ಸಚಿವಾಲಯವು 2013 ರ ಏಪ್ರಿಲ್ 22, 2014 ರ ಮೇ 21, 2015 ರ ಮೇ 12, 2019 ರ ಜೂನ್ 21, 2021ರ ಜೂನ್ 22 ಮತ್ತು 2022ರಲ ಏಪ್ರಿಲ್ 13 ರ ದಿನಾಂಕದಂದು ರಾಜ್ಯಗಳಿಗೆ ಸಲಹೆಗಳನ್ನು ನೀಡಿದೆ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಹೇಳಿದ್ದಾರೆ.

ಬ್ಯೂರೋ ಆಫ್ ಪೊಲೀಸ್ ರಿಸರ್ಚ್ ಅಂಡ್ ಡೆವಲಪ್‌ಮೆಂಟ್ (ಬಿಪಿಆರ್ & ಡಿ) ಸಂಗ್ರಹಿಸಿದ ಮಾಹಿತಿ ಪ್ರಕಾರ, 2022ರ ಜನವರಿ 1 ರಂತೆ ರಾಜ್ಯಗಳ ಪೊಲೀಸ್ ಇಲಾಖೆಯಲ್ಲಿ ಮಹಿಳಾ ಪೊಲೀಸ್ ಸಿಬ್ಬಂದಿಯ ಸಾಮರ್ಥ್ಯವು ಅಖಿಲ ಭಾರತ ಮಟ್ಟದಲ್ಲಿ ಶೇ 11.75 ರಷ್ಟಿದೆ' ಎಂದು ಅವರು ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರದಲ್ಲಿ ಹೇಳಿದರು.

ನಿತ್ಯಾನಂದ ರೈ

ಲಡಾಖ್ ಪೊಲೀಸ್ ಪಡೆಯಲ್ಲಿ ಅತಿ ಹೆಚ್ಚು ಶೇಕಡಾವಾರು ಮಹಿಳೆಯರನ್ನು ಹೊಂದಿದೆ (ಶೇ 28.3), ಆಂಧ್ರಪ್ರದೇಶ (ಶೇ 21.7), ಚಂಡೀಗಢ (ಶೇ 21.6) ಮತ್ತು ಬಿಹಾರ (ಶೇ 21.2) ನಂತರದ ಸ್ಥಾನದಲ್ಲಿದೆ.

ಜಮ್ಮು ಮತ್ತು ಕಾಶ್ಮೀರ (ಶೇ 3.2), ತ್ರಿಪುರ (ಶೇ 5.29) ಮತ್ತು ಮೇಘಾಲಯ (ಶೇ 5.9) ರಾಜ್ಯಗಳ ಪೊಲೀಸ್ ಇಲಾಖೆಯಲ್ಲಿ ಅತ್ಯಂತ ಕಡಿಮೆ ಮಹಿಳಾ ಪ್ರಾತಿನಿಧ್ಯವನ್ನು ಹೊಂದಿವೆ. 

ಖಾಲಿ ಇರುವ ಕಾನ್‌ಸ್ಟೇಬಲ್‌ ಮತ್ತು ಸಬ್‌ಇನ್‌ಸ್ಪೆಕ್ಟರ್‌ ಹುದ್ದೆಗಳನ್ನು ಪರಿವರ್ತಿಸುವ ಮೂಲಕ ಮಹಿಳಾ ಕಾನ್‌ಸ್ಟೆಬಲ್‌ಗಳು ಮತ್ತು ಸಬ್‌ಇನ್‌ಸ್ಪೆಕ್ಟರ್‌ಗಳ ಹೆಚ್ಚುವರಿ ಹುದ್ದೆಗಳನ್ನು ರಚಿಸಲು ಎಲ್ಲಾ ರಾಜ್ಯ ಸರ್ಕಾರಗಳಿಗೆ ಮನವಿ ಮಾಡಲಾಗಿದೆ ಎಂದು ಸಚಿವರು ಹೇಳಿದರು.

ಪ್ರತಿ ಪೊಲೀಸ್ ಠಾಣೆಯಲ್ಲಿ ಕನಿಷ್ಠ ಮೂವರು ಮಹಿಳಾ ಸಬ್‌ಇನ್‌ಸ್ಪೆಕ್ಟರ್‌ಗಳು ಮತ್ತು 10 ಮಹಿಳಾ ಪೊಲೀಸ್ ಕಾನ್‌ಸ್ಟೆಬಲ್‌ಗಳು ಇರಬೇಕು. ಇದರಿಂದಾಗಿ ಮಹಿಳಾ ಸಹಾಯ ಕೇಂದ್ರವು ದಿನದ 24 ಗಂಟೆಯೂ ಕಾರ್ಯನಿರ್ವಹಿಸುತ್ತದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT