ಆಧಾರ್ ಸಾಂದರ್ಭಿಕ ಚಿತ್ರ 
ದೇಶ

ಪಿಎಂ ಕಿಸಾನ್ ಯೋಜನೆಯ ಲಾಭ ಪಡೆಯಲು ರಾಜಸ್ಥಾನ ರೈತರು ಫೆ.10 ರೊಳಗೆ ತಮ್ಮ ಬ್ಯಾಂಕ್ ಖಾತೆಗೆ ಆಧಾರ್‌ ಲಿಂಕ್ ಮಾಡಬೇಕು

ಪಿಎಂ ಕಿಸಾನ್ ಯೋಜನೆಯ ಲಾಭ ಪಡೆಯಲು ರೈತರು ತಮ್ಮ ಬ್ಯಾಂಕ್ ಖಾತೆಗೆ ಇ-ಕೆವೈಸಿಯನ್ನು ಫೆಬ್ರವರಿ 10 ರೊಳಗೆ ಪರಿಶೀಲಿಸಬೇಕು ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.

ಜೈಪುರ: ಪಿಎಂ ಕಿಸಾನ್ ಯೋಜನೆಯ ಲಾಭ ಪಡೆಯಲು ರೈತರು ತಮ್ಮ ಬ್ಯಾಂಕ್ ಖಾತೆಗೆ ಇ-ಕೆವೈಸಿಯನ್ನು ಫೆಬ್ರವರಿ 10 ರೊಳಗೆ ಪರಿಶೀಲಿಸಬೇಕು ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.

ಫೆಬ್ರವರಿ 10, 2023 ರ ಮೊದಲು ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳು, ಮುಂದಿನ ಕಂತಿನ ಹಣ ವರ್ಗಾವಣೆಗಾಗಿ ಇ-ಕೆವೈಸಿ, ಬ್ಯಾಂಕ್ ಖಾತೆಗೆ ಆಧಾರ್‌ ಲಿಂಕ್ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದು ಯೋಜನೆಯ ರಾಜ್ಯ ನೋಡಲ್ ಅಧಿಕಾರಿ ಮೇಘರಾಜ್ ಸಿಂಗ್ ರತ್ನು ಅವರು ಹೇಳಿದ್ದಾರೆ.

ಈ ನಿಟ್ಟಿನಲ್ಲಿ ಫಲಾನುಭವಿಗಳಿಗೆ ಕೇಂದ್ರ ಸರ್ಕಾರದಿಂದ ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಜನವರಿ 2023ರ ವರೆಗೆ, ರಾಜ್ಯದಲ್ಲಿ ಈ ಯೋಜನೆಯ ಫಲಾನುಭವಿಗಳು ಶೇಕಡಾ 67 ರಷ್ಟು ಇ-ಕೆವೈಸಿ ಮಾಡಿಸಿದ್ದು, ಶೇಕಡಾ 88 ರಷ್ಟು ಫಲಾನುಭವಿಗಳು ತಮ್ಮ ಬ್ಯಾಂಕ್ ಖಾತೆಗೆ ಆಧಾರ್‌ ಲಿಂಕ್ ಮಾಡಿದ್ದಾರೆ ಎಂದು ರತ್ನು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದುವರೆಗೆ ಇ-ಕೆವೈಸಿ ಮಾಡದಿರುವ ಮತ್ತು ತಮ್ಮ ಬ್ಯಾಂಕ್ ಖಾತೆಯನ್ನು ಆಧಾರ್‌ನೊಂದಿಗೆ ಲಿಂಕ್ ಮಾಡದ ಫಲಾನುಭವಿಗಳು ಫೆಬ್ರವರಿ 10 ರೊಳಗೆ ಮಾಡಬೇಕು ಎಂದು ರತ್ನು ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಆಳಂದದಲ್ಲಿ 6000 ಮತ ಡಿಲೀಟ್ ಆರೋಪ: ಎಲ್ಲಾ ಮಾಹಿತಿ ಈಗಾಗಲೇ ಕಲಬುರಗಿ ಎಸ್‌ಪಿ ಜೊತೆ ಹಂಚಿಕೊಳ್ಳಲಾಗಿದೆ: ಕರ್ನಾಟಕ ಸಿಇಒ

ಬೆಂಗಳೂರು ನಮ್ಮ ಮನೆ, ಬೇರೆ ಏರಿಯಾಗೆ ಸ್ಥಳಾಂತರ ಅಷ್ಟೇ: ಡಿಸಿಎಂ DKS ಎಚ್ಚರಿಕೆಗೆ ಬೆದರಿದ BlackBuck ಸಿಇಒ

ಮುಡಾ ನಿವೇಶನ ಹಂಚಿಕೆಯಲ್ಲಿ ದೊಡ್ಡ ಪ್ರಮಾಣದ ಹಗರಣ ನಡೆದಿದೆ: ED

Hindenburg: Gautam Adani ಗೆ ಬಿಗ್ ರಿಲೀಫ್, SEBI ಕ್ಲೀನ್ ಚಿಟ್!

ವಿಜಯಪುರ ವಿಮಾನ ನಿಲ್ದಾಣಕ್ಕೆ 618 ಕೋಟಿ ರೂ. ಪರಿಷ್ಕೃತ ಅಂದಾಜುಗೆ ಸಚಿವ ಸಂಪುಟ ಅನುಮೋದನೆ

SCROLL FOR NEXT