ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ 
ದೇಶ

ಜಾರ್ಖಂಡ್: ಕ್ರೀಡೆ, ಕ್ರೀಡಾಪಟುಗಳಿಗಾಗಿ ದೇಶದ ಮೊದಲ ಡಿಜಿಟಲ್ ಪೋರ್ಟಲ್ ಪ್ರಾರಂಭ

ದೇಶದಲ್ಲೇ ಮೊದಲ ಬಾರಿಗೆ ಕ್ರೀಡೆ ಹಾಗೂ ಕ್ರೀಡಾಪಟುಗಳಿಗಾಗಿ ಜಾರ್ಖಂಡ್ ಸರ್ಕಾರ ಡಿಜಿಟಲ್ ಪೋರ್ಟಲ್ ಪ್ರಾರಂಭಿಸಿದೆ.

ರಾಂಚಿ: ದೇಶದಲ್ಲೇ ಮೊದಲ ಬಾರಿಗೆ ಕ್ರೀಡೆ ಹಾಗೂ ಕ್ರೀಡಾಪಟುಗಳಿಗಾಗಿ ಜಾರ್ಖಂಡ್ ಸರ್ಕಾರ ಡಿಜಿಟಲ್ ಪೋರ್ಟಲ್ ಪ್ರಾರಂಭಿಸಿದ್ದು, ಯುವಜನತೆಯಲ್ಲಿ ಕ್ರೀಡಾ ಸಂಸ್ಕೃತಿಯನ್ನು ಉತ್ತೇಜಿಸುವುದು ಜೊಹರ್ ಖಿಲಾಡಿ ಸ್ಪೋರ್ಟ್ಸ್ ಇಂಟಿಗ್ರೇಟೆಡ್ ಪೋರ್ಟಲ್ ನ ಉದ್ದೇಶವಾಗಿದೆ. 

ಕ್ರೀಡಾಪಟುಗಳ ಪ್ರತಿಭೆಯನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ಈ ಪೋರ್ಟಲ್ ಉಪಯ್ತುಕ್ತವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಿಎಂ ಹೇಮಂತ್ ಸೊರೇನ್ ಪೋರ್ಟಲ್ ನ್ನು ಉದ್ಘಾಟಿಸಿದ್ದು, ಕ್ರೀಡೆಯ ಡಿಜಿಟಲೀಕರಣದ ಪರಿಕಲ್ಪನೆಯನ್ನು ಸಾಕಾರಗೊಳಿಸುವ ಹೆಜ್ಜೆ ಇದಾಗಿದೆ ಎಂದು ವಿಶ್ಲೇಶಿಸಲಾಗುತ್ತಿದೆ. ಕ್ರೀಡಾಪಟುಗಳು, ಕೋಚ್, ರೆಫರಿಗಳು, ಕ್ರೀಡಾ ಅಕಾಡೆಮಿಗಳು, ಕ್ರೀಡಾ ಮೈದಾನಗಳು ಮತ್ತು ಕ್ರೀಡಾ ಕ್ರೀಡಾಂಗಣಗಳ ಬಗ್ಗೆ ವಿಸ್ತೃತ ಡೇಟಾಬೇಸ್ ನ್ನು ಈ ವೆಬ್ ಪೋರ್ಟಲ್ ಹೊಂದಿರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯದಲ್ಲಿ ನಡೆಯಲಿರುವ ರಾಜ್ಯ, ಜಿಲ್ಲಾ ಮಟ್ಟದ ಸ್ಪರ್ಧೆಗಳ ಬಗ್ಗೆ ಮಾಹಿತಿಯನ್ನೂ ಇನ್ನು ಮುಂದೆ ವೆಬ್ ಪೋರ್ಟಲ್ ನಲ್ಲಿ ನೀಡಲಾಗುತ್ತದೆ. ಒಟ್ಟು 32 ಕ್ರೀಡೆಗಳನ್ನು ಪೋರ್ಟಲ್ ನಲ್ಲಿ ಪಟ್ಟಿ ಮಾಡಲಾಗಿತ್ತು ಒಲಂಪಿಕ್ ಅಸೋಸಿಯೇಶನ್ ನಿಂದ ಗುರುತಿಸಲ್ಪಟ್ಟಿರುವ 32 ಕ್ರೀಡೆಗಳ ಕ್ರೀಡಾಪಟುಗಳು ಈ ವೆಬ್ ಸೈಟ್ ನಿಂದ ಉಪಯೋಗ ಪಡೆಯಬಹುದು ಎಂದು ರಾಜ್ಯದ ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನು ಈ ವೆಬ್ ಪೋರ್ಟಲ್ ಮೂಲಕ ಕ್ರೀಡಾ ಇಲಾಖೆ ರಾಜ್ಯ ಮಟ್ಟದಲ್ಲಿ ನಡೆಯುತ್ತಿರುವ ಚಟುವಟಿಕೆಗಳ ಮೇಲೆಯೂ ಗಮನ ಹರಿಸುವುದಕ್ಕೆ ಸಾಧ್ಯವಾಗಲಿದೆ. ಪ್ರಸ್ತುತ ಫುಟ್ಬಾಲ್ ಗೆ ಸಂಬಂಧಿಸಿದ ನೋಂದಣಿ, ಹಾಕಿ, ಬಿಲ್ಲುಗಾರಿಕೆ, ಅಥ್ಲೆಟಿಕ್ಸ್, ವಾಲಿಬಾಲ್, ವೇಟ್‌ಲಿಫ್ಟಿಂಗ್ ಮತ್ತು ಕುಸ್ತಿಗೆ ಸಂಬಂಧಿಸಿದ ನೋಂದಣಿಗೆ ಅವಕಾಶ ಪೋರ್ಟಲ್ ನಲ್ಲಿ ಪ್ರಗತಿಯಲ್ಲಿದೆ.

ಇನ್ನು ಕ್ರೀಡಾಪಟುಗಳಿಗೆ ಎದುರಾಗುವ ಸಮಸ್ಯೆಗಳ ಬಗ್ಗೆಯೂ ಈ ಪೋರ್ಟಲ್ ಮೂಲಕ ಕ್ರೀಡಾ ಇಲಾಖೆಯ ಗಮನಕ್ಕೆ ತರುವ  ಅವಕಾಶವಿದ್ದು, ಅಧಿಕಾರಿಗಳು ಸಮಸ್ಯೆಗಳಿಗೆ ಪರಿಹಾರ ನೀಡಲಿದ್ದಾರೆ ಎಂದು ಜಾರ್ಖಂಡ್ ಸರ್ಕಾರ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT