ಉತ್ತರಾಖಂಡದ ಜೋಶಿಮಠದಲ್ಲಿ ಮತ್ತೆ ಮನೆಗಳಲ್ಲಿ ಕಾಣಿಸಿಕೊಂಡ ಬಿರುಕು 
ದೇಶ

ಜೋಶಿಮಠ ಬಿಕ್ಕಟ್ಟು: ಮನೆಗಳಲ್ಲಿ ಮತ್ತೆ ಹೊಸ ಬಿರುಕು, ಸ್ಥಳೀಯರಲ್ಲಿ ಮನೆಮಾಡಿದ ಆತಂಕ

ಭೂಮಿ ಕುಸಿದ ಪರಿಣಾಮವಾಗಿ ಈಗಾಗಲೇ ಸಂಕಷ್ಟಕ್ಕೊಳಗಾಗಿದ್ದ ಉತ್ತರಾಖಂಡದ ಜೋಶಿಮಠದಲ್ಲಿ ವಸತಿ ಕಟ್ಟಡಗಳಲ್ಲಿನ ಬಿರುಕುಗಳು ಅಗಲವಾಗುತ್ತಿರುವುದು ಹಾಗೂ ಹೆಚ್ಚುತ್ತಿರುವ ಬಿರುಕುಗಳ ಜತೆಗೆ ಇನ್ನೂ ಐದಾರು ಮನೆಗಳಲ್ಲಿ ಸಣ್ಣಪುಟ್ಟ ಬಿರುಕುಗಳು ಕಾಣಿಸಿಕೊಂಡಿದ್ದು, ಇಲ್ಲಿನ ನಿವಾಸಿಗಳು ಭಯದ ವಾತಾವರಣದಲ್ಲಿ ಬದುಕುವಂತಾಗಿದೆ.

ಜೋಶಿಮಠ: ಭೂಮಿ ಕುಸಿದ ಪರಿಣಾಮವಾಗಿ ಈಗಾಗಲೇ ಸಂಕಷ್ಟಕ್ಕೊಳಗಾಗಿದ್ದ ಉತ್ತರಾಖಂಡದ ಜೋಶಿಮಠದಲ್ಲಿ ವಸತಿ ಕಟ್ಟಡಗಳಲ್ಲಿನ ಬಿರುಕುಗಳು ಅಗಲವಾಗುತ್ತಿರುವುದು ಹಾಗೂ ಹೆಚ್ಚುತ್ತಿರುವ ಬಿರುಕುಗಳ ಜತೆಗೆ ಇನ್ನೂ ಐದಾರು ಮನೆಗಳಲ್ಲಿ ಸಣ್ಣಪುಟ್ಟ ಬಿರುಕುಗಳು ಕಾಣಿಸಿಕೊಂಡಿದ್ದು, ಇಲ್ಲಿನ ನಿವಾಸಿಗಳು ಭಯದ ವಾತಾವರಣದಲ್ಲಿ ಬದುಕುವಂತಾಗಿದೆ.

ಚಮೋಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಹಿಮಾಂಶು ಖುರಾನಾ ಅವರು ಈ ಪ್ರದೇಶಕ್ಕೆ ಆಗಮಿಸಿ ಮನೆಗಳನ್ನು ಬುಧವಾರ ಪರಿಶೀಲಿಸಿದರು.

ಕ್ರ್ಯಾಕೊಮೀಟರ್‌ಗಳನ್ನು ಅಳವಡಿಸಿರುವ ಮನೆಗಳಲ್ಲಿ ಹಳೆಯ ಬಿರುಕುಗಳ ಗಾತ್ರ ಹೆಚ್ಚಾಗಿದೆ ಎಂದು ಖುರಾನಾ ಗುರುವಾರ ಹೇಳಿದ್ದಾರೆ.

ಜನವರಿಯಲ್ಲಿ ಮನೋಹರ್ ಬಾಗ್ ವಾರ್ಡ್‌ನ ಹೊಲಗಳಲ್ಲಿ ಬಿರುಕುಗಳು ಕಾಣಿಸಿಕೊಂಡಿದ್ದವು. ಸಂತ್ರಸ್ತ ಹೊಲವೊಂದರ ಮಾಲೀಕ ಸೂರಜ್ ಕಪರ್ವಾನ್ ಮಾತನಾಡಿ, ಜಿಲ್ಲಾಡಳಿತವು ಮಣ್ಣು ಮತ್ತು ಪ್ಲಾಸ್ಟಿಕ್‌ನಿಂದ ಆ ಬಿರುಕುಗಳನ್ನು ತುಂಬಿದೆ ಎಂದಿದ್ದಾರೆ.

ಜನವರಿ 20ರ ನಂತರ ಪವಿತ್ರ ನಗರದಲ್ಲಿ ಹೊಸ ಬಿರುಕುಗಳು ಕಾಣಿಸಿಕೊಳ್ಳುವುದು ನಿಂತಿದೆ. ಆದರೆ, ಇದೀಗ ಮತ್ತೆ ಪ್ರಾರಂಭವಾಗಿದೆ. ಇದು ಸ್ಥಳೀಯರು ಮತ್ತು ಆಡಳಿತದ ಚಿಂತೆಯನ್ನು ಹೆಚ್ಚಿಸಿದೆ. ಇದರೊಂದಿಗೆ ಮನೋಹರ್ ಬಾಗ್ ಮತ್ತು ಸಿಂಘಧಾರ್ ವಾರ್ಡ್‌ನ ಮನೆಗಳಲ್ಲಿ ಬಿರುಕುಗಳು ಕಾಣಿಸಿಕೊಂಡಿವೆ.

ಜೋಶಿಮಠದ ಸಿಂಘಧಾರ್ ವಾರ್ಡ್‌ನಲ್ಲಿ ಕಳೆದ ಹಲವು ವರ್ಷಗಳಿಂದ ಹರಿಯುತ್ತಿದ್ದ ನೈಸರ್ಗಿಕ ಹೊಳೆ ಏಕಾಏಕಿ ಬತ್ತಿ ಹೋಗಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT