ಉತ್ತರಾಖಂಡದ ಜೋಶಿಮಠದಲ್ಲಿ ಮತ್ತೆ ಮನೆಗಳಲ್ಲಿ ಕಾಣಿಸಿಕೊಂಡ ಬಿರುಕು 
ದೇಶ

ಜೋಶಿಮಠ ಬಿಕ್ಕಟ್ಟು: ಮನೆಗಳಲ್ಲಿ ಮತ್ತೆ ಹೊಸ ಬಿರುಕು, ಸ್ಥಳೀಯರಲ್ಲಿ ಮನೆಮಾಡಿದ ಆತಂಕ

ಭೂಮಿ ಕುಸಿದ ಪರಿಣಾಮವಾಗಿ ಈಗಾಗಲೇ ಸಂಕಷ್ಟಕ್ಕೊಳಗಾಗಿದ್ದ ಉತ್ತರಾಖಂಡದ ಜೋಶಿಮಠದಲ್ಲಿ ವಸತಿ ಕಟ್ಟಡಗಳಲ್ಲಿನ ಬಿರುಕುಗಳು ಅಗಲವಾಗುತ್ತಿರುವುದು ಹಾಗೂ ಹೆಚ್ಚುತ್ತಿರುವ ಬಿರುಕುಗಳ ಜತೆಗೆ ಇನ್ನೂ ಐದಾರು ಮನೆಗಳಲ್ಲಿ ಸಣ್ಣಪುಟ್ಟ ಬಿರುಕುಗಳು ಕಾಣಿಸಿಕೊಂಡಿದ್ದು, ಇಲ್ಲಿನ ನಿವಾಸಿಗಳು ಭಯದ ವಾತಾವರಣದಲ್ಲಿ ಬದುಕುವಂತಾಗಿದೆ.

ಜೋಶಿಮಠ: ಭೂಮಿ ಕುಸಿದ ಪರಿಣಾಮವಾಗಿ ಈಗಾಗಲೇ ಸಂಕಷ್ಟಕ್ಕೊಳಗಾಗಿದ್ದ ಉತ್ತರಾಖಂಡದ ಜೋಶಿಮಠದಲ್ಲಿ ವಸತಿ ಕಟ್ಟಡಗಳಲ್ಲಿನ ಬಿರುಕುಗಳು ಅಗಲವಾಗುತ್ತಿರುವುದು ಹಾಗೂ ಹೆಚ್ಚುತ್ತಿರುವ ಬಿರುಕುಗಳ ಜತೆಗೆ ಇನ್ನೂ ಐದಾರು ಮನೆಗಳಲ್ಲಿ ಸಣ್ಣಪುಟ್ಟ ಬಿರುಕುಗಳು ಕಾಣಿಸಿಕೊಂಡಿದ್ದು, ಇಲ್ಲಿನ ನಿವಾಸಿಗಳು ಭಯದ ವಾತಾವರಣದಲ್ಲಿ ಬದುಕುವಂತಾಗಿದೆ.

ಚಮೋಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಹಿಮಾಂಶು ಖುರಾನಾ ಅವರು ಈ ಪ್ರದೇಶಕ್ಕೆ ಆಗಮಿಸಿ ಮನೆಗಳನ್ನು ಬುಧವಾರ ಪರಿಶೀಲಿಸಿದರು.

ಕ್ರ್ಯಾಕೊಮೀಟರ್‌ಗಳನ್ನು ಅಳವಡಿಸಿರುವ ಮನೆಗಳಲ್ಲಿ ಹಳೆಯ ಬಿರುಕುಗಳ ಗಾತ್ರ ಹೆಚ್ಚಾಗಿದೆ ಎಂದು ಖುರಾನಾ ಗುರುವಾರ ಹೇಳಿದ್ದಾರೆ.

ಜನವರಿಯಲ್ಲಿ ಮನೋಹರ್ ಬಾಗ್ ವಾರ್ಡ್‌ನ ಹೊಲಗಳಲ್ಲಿ ಬಿರುಕುಗಳು ಕಾಣಿಸಿಕೊಂಡಿದ್ದವು. ಸಂತ್ರಸ್ತ ಹೊಲವೊಂದರ ಮಾಲೀಕ ಸೂರಜ್ ಕಪರ್ವಾನ್ ಮಾತನಾಡಿ, ಜಿಲ್ಲಾಡಳಿತವು ಮಣ್ಣು ಮತ್ತು ಪ್ಲಾಸ್ಟಿಕ್‌ನಿಂದ ಆ ಬಿರುಕುಗಳನ್ನು ತುಂಬಿದೆ ಎಂದಿದ್ದಾರೆ.

ಜನವರಿ 20ರ ನಂತರ ಪವಿತ್ರ ನಗರದಲ್ಲಿ ಹೊಸ ಬಿರುಕುಗಳು ಕಾಣಿಸಿಕೊಳ್ಳುವುದು ನಿಂತಿದೆ. ಆದರೆ, ಇದೀಗ ಮತ್ತೆ ಪ್ರಾರಂಭವಾಗಿದೆ. ಇದು ಸ್ಥಳೀಯರು ಮತ್ತು ಆಡಳಿತದ ಚಿಂತೆಯನ್ನು ಹೆಚ್ಚಿಸಿದೆ. ಇದರೊಂದಿಗೆ ಮನೋಹರ್ ಬಾಗ್ ಮತ್ತು ಸಿಂಘಧಾರ್ ವಾರ್ಡ್‌ನ ಮನೆಗಳಲ್ಲಿ ಬಿರುಕುಗಳು ಕಾಣಿಸಿಕೊಂಡಿವೆ.

ಜೋಶಿಮಠದ ಸಿಂಘಧಾರ್ ವಾರ್ಡ್‌ನಲ್ಲಿ ಕಳೆದ ಹಲವು ವರ್ಷಗಳಿಂದ ಹರಿಯುತ್ತಿದ್ದ ನೈಸರ್ಗಿಕ ಹೊಳೆ ಏಕಾಏಕಿ ಬತ್ತಿ ಹೋಗಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT