ಉತ್ತರಾಖಂಡದ ಜೋಶಿಮಠದಲ್ಲಿ ಮತ್ತೆ ಮನೆಗಳಲ್ಲಿ ಕಾಣಿಸಿಕೊಂಡ ಬಿರುಕು 
ದೇಶ

ಜೋಶಿಮಠ ಬಿಕ್ಕಟ್ಟು: ಮನೆಗಳಲ್ಲಿ ಮತ್ತೆ ಹೊಸ ಬಿರುಕು, ಸ್ಥಳೀಯರಲ್ಲಿ ಮನೆಮಾಡಿದ ಆತಂಕ

ಭೂಮಿ ಕುಸಿದ ಪರಿಣಾಮವಾಗಿ ಈಗಾಗಲೇ ಸಂಕಷ್ಟಕ್ಕೊಳಗಾಗಿದ್ದ ಉತ್ತರಾಖಂಡದ ಜೋಶಿಮಠದಲ್ಲಿ ವಸತಿ ಕಟ್ಟಡಗಳಲ್ಲಿನ ಬಿರುಕುಗಳು ಅಗಲವಾಗುತ್ತಿರುವುದು ಹಾಗೂ ಹೆಚ್ಚುತ್ತಿರುವ ಬಿರುಕುಗಳ ಜತೆಗೆ ಇನ್ನೂ ಐದಾರು ಮನೆಗಳಲ್ಲಿ ಸಣ್ಣಪುಟ್ಟ ಬಿರುಕುಗಳು ಕಾಣಿಸಿಕೊಂಡಿದ್ದು, ಇಲ್ಲಿನ ನಿವಾಸಿಗಳು ಭಯದ ವಾತಾವರಣದಲ್ಲಿ ಬದುಕುವಂತಾಗಿದೆ.

ಜೋಶಿಮಠ: ಭೂಮಿ ಕುಸಿದ ಪರಿಣಾಮವಾಗಿ ಈಗಾಗಲೇ ಸಂಕಷ್ಟಕ್ಕೊಳಗಾಗಿದ್ದ ಉತ್ತರಾಖಂಡದ ಜೋಶಿಮಠದಲ್ಲಿ ವಸತಿ ಕಟ್ಟಡಗಳಲ್ಲಿನ ಬಿರುಕುಗಳು ಅಗಲವಾಗುತ್ತಿರುವುದು ಹಾಗೂ ಹೆಚ್ಚುತ್ತಿರುವ ಬಿರುಕುಗಳ ಜತೆಗೆ ಇನ್ನೂ ಐದಾರು ಮನೆಗಳಲ್ಲಿ ಸಣ್ಣಪುಟ್ಟ ಬಿರುಕುಗಳು ಕಾಣಿಸಿಕೊಂಡಿದ್ದು, ಇಲ್ಲಿನ ನಿವಾಸಿಗಳು ಭಯದ ವಾತಾವರಣದಲ್ಲಿ ಬದುಕುವಂತಾಗಿದೆ.

ಚಮೋಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಹಿಮಾಂಶು ಖುರಾನಾ ಅವರು ಈ ಪ್ರದೇಶಕ್ಕೆ ಆಗಮಿಸಿ ಮನೆಗಳನ್ನು ಬುಧವಾರ ಪರಿಶೀಲಿಸಿದರು.

ಕ್ರ್ಯಾಕೊಮೀಟರ್‌ಗಳನ್ನು ಅಳವಡಿಸಿರುವ ಮನೆಗಳಲ್ಲಿ ಹಳೆಯ ಬಿರುಕುಗಳ ಗಾತ್ರ ಹೆಚ್ಚಾಗಿದೆ ಎಂದು ಖುರಾನಾ ಗುರುವಾರ ಹೇಳಿದ್ದಾರೆ.

ಜನವರಿಯಲ್ಲಿ ಮನೋಹರ್ ಬಾಗ್ ವಾರ್ಡ್‌ನ ಹೊಲಗಳಲ್ಲಿ ಬಿರುಕುಗಳು ಕಾಣಿಸಿಕೊಂಡಿದ್ದವು. ಸಂತ್ರಸ್ತ ಹೊಲವೊಂದರ ಮಾಲೀಕ ಸೂರಜ್ ಕಪರ್ವಾನ್ ಮಾತನಾಡಿ, ಜಿಲ್ಲಾಡಳಿತವು ಮಣ್ಣು ಮತ್ತು ಪ್ಲಾಸ್ಟಿಕ್‌ನಿಂದ ಆ ಬಿರುಕುಗಳನ್ನು ತುಂಬಿದೆ ಎಂದಿದ್ದಾರೆ.

ಜನವರಿ 20ರ ನಂತರ ಪವಿತ್ರ ನಗರದಲ್ಲಿ ಹೊಸ ಬಿರುಕುಗಳು ಕಾಣಿಸಿಕೊಳ್ಳುವುದು ನಿಂತಿದೆ. ಆದರೆ, ಇದೀಗ ಮತ್ತೆ ಪ್ರಾರಂಭವಾಗಿದೆ. ಇದು ಸ್ಥಳೀಯರು ಮತ್ತು ಆಡಳಿತದ ಚಿಂತೆಯನ್ನು ಹೆಚ್ಚಿಸಿದೆ. ಇದರೊಂದಿಗೆ ಮನೋಹರ್ ಬಾಗ್ ಮತ್ತು ಸಿಂಘಧಾರ್ ವಾರ್ಡ್‌ನ ಮನೆಗಳಲ್ಲಿ ಬಿರುಕುಗಳು ಕಾಣಿಸಿಕೊಂಡಿವೆ.

ಜೋಶಿಮಠದ ಸಿಂಘಧಾರ್ ವಾರ್ಡ್‌ನಲ್ಲಿ ಕಳೆದ ಹಲವು ವರ್ಷಗಳಿಂದ ಹರಿಯುತ್ತಿದ್ದ ನೈಸರ್ಗಿಕ ಹೊಳೆ ಏಕಾಏಕಿ ಬತ್ತಿ ಹೋಗಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT