ಆಟೋಗೆ ಟ್ರಕ್ ಡಿಕ್ಕಿ 
ದೇಶ

ಛತ್ತೀಸ್‌ಗಢ: ಆಟೋಗೆ ಟ್ರಕ್ ಡಿಕ್ಕಿ, ಏಳು ಶಾಲಾ ಮಕ್ಕಳು ಸಾವು

ರಾಯ್‌ಪುರದಿಂದ ದಕ್ಷಿಣಕ್ಕೆ 200 ಕಿ.ಮೀ ದೂರದಲ್ಲಿರುವ ಕಂಕೇರ್ ಜಿಲ್ಲೆಯ ಭಾನುಪ್ರತಾಪುರದಲ್ಲಿ ಗುರುವಾರ ಮಧ್ಯಾಹ್ನ ಆಟೋಗೆ ಟ್ರಕ್‌ ಡಿಕ್ಕಿ ಹೊಡೆದ ಪರಿಣಾಮ ಏಳು ಶಾಲಾ ಮಕ್ಕಳು ಸಾವನ್ನಪ್ಪಿದ್ದಾರೆ.

ರಾಯ್‌ಪುರ: ರಾಯ್‌ಪುರದಿಂದ ದಕ್ಷಿಣಕ್ಕೆ 200 ಕಿ.ಮೀ ದೂರದಲ್ಲಿರುವ ಕಂಕೇರ್ ಜಿಲ್ಲೆಯ ಭಾನುಪ್ರತಾಪುರದಲ್ಲಿ ಗುರುವಾರ ಮಧ್ಯಾಹ್ನ ಆಟೋಗೆ ಟ್ರಕ್‌ ಡಿಕ್ಕಿ ಹೊಡೆದ ಪರಿಣಾಮ ಏಳು ಶಾಲಾ ಮಕ್ಕಳು ಸಾವನ್ನಪ್ಪಿದ್ದಾರೆ. ಓರ್ವ ವಿದ್ಯಾರ್ಥಿಯ ಸ್ಥಿತಿ ಚಿಂತಾಜನಕವಾಗಿದೆ.

ಕೋರೇರ್-ಭಾನುಪ್ರತಾಪುರ ಮಾರ್ಗದಲ್ಲಿ ಶಾಲಾ ಮಕ್ಕಳು ಆಟೋ ರಿಕ್ಷಾದಲ್ಲಿ ಮನೆಗೆ ಮರಳುತ್ತಿದ್ದಾಗ ಈ ಭೀಕರ ಅಪಘಾತ ಸಂಭವಿಸಿದೆ.

“ಐವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಪ್ರತ್ಯಕ್ಷದರ್ಶಿಗಳ ಪ್ರಕಾರ, ಆಟೋ-ರಿಕ್ಷಾ ಬಹುಶಃ ತಪ್ಪು ದಿಕ್ಕಿನಲ್ಲಿ ಹಠಾತ್ ತಿರುವು ತೆಗೆದುಕೊಂಡಿದೆ. ಈ ವೇಳೆ  ಎದುರಿನಿಂದ ಬಂದ ಟ್ರಕ್ ಅದಕ್ಕೆ ಡಿಕ್ಕಿ ಹೊಡೆದಿದೆ. ಆಟೋದಲ್ಲಿ ಒಟ್ಟು ಎಂಟು ಮಕ್ಕಳಿದ್ದರು. ಉಳಿದ ಗಾಯಗೊಂಡ ಮಗುವನ್ನು ತಕ್ಷಣದ ವೈದ್ಯಕೀಯ ಚಿಕಿತ್ಸೆಗಾಗಿ ರಾಯ್‌ಪುರಕ್ಕೆ ಕಳುಹಿಸಲಾಗುವುದು" ಎಂದು ಕಂಕೇರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಲಭ್ ಸಿನ್ಹಾ ಅವರು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಅಪಘಾತದ ನಂತರ ಲಾರಿ ಚಾಲಕ ತಲೆಮರೆಸಿಕೊಂಡಿದ್ದಾನೆ.

ಶಾಲಾ ಮಕ್ಕಳ ಸಾವಿಗೆ ಛತ್ತೀಸ್ ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ಸಂತಾಪ ಸೂಚಿಸಿದ್ದು, ಸಾಧ್ಯವಿರುವ ಎಲ್ಲ ನೆರವು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT