ತೇಜಸ್ವಿ ಸೂರ್ಯ 
ದೇಶ

ತೇಜಸ್ವಿ ಸೂರ್ಯ ಆಕಸ್ಮಿಕವಾಗಿ ಇಂಡಿಗೋ ವಿಮಾನದ ತುರ್ತು ಬಾಗಿಲು ತೆರೆದಿದ್ದರು: ಕೇಂದ್ರ

ಭಾರತೀಯ ಜನತಾ ಪಕ್ಷದ ಸಂಸದ ತೇಜಸ್ವಿ ಸೂರ್ಯ ಅವರು ಕಳೆದ ತಿಂಗಳು ಆಕಸ್ಮಿಕವಾಗಿ ಇಂಡಿಗೋ ವಿಮಾನದ ತುರ್ತು ಬಾಗಿಲನ್ನು ತೆರೆದಿದ್ದರು. ಆದರೆ ಅವರು ಯಾವುದೇ ನಿಯಮ ಉಲ್ಲಂಘಿಸಿದ್ದು ಕಂಡುಬಂದಿಲ್ಲ...

ನವದೆಹಲಿ: ಭಾರತೀಯ ಜನತಾ ಪಕ್ಷದ ಸಂಸದ ತೇಜಸ್ವಿ ಸೂರ್ಯ ಅವರು ಕಳೆದ ತಿಂಗಳು ಆಕಸ್ಮಿಕವಾಗಿ ಇಂಡಿಗೋ ವಿಮಾನದ ತುರ್ತು ಬಾಗಿಲನ್ನು ತೆರೆದಿದ್ದರು. ಆದರೆ ಅವರು ಯಾವುದೇ ನಿಯಮ ಉಲ್ಲಂಘಿಸಿದ್ದು ಕಂಡುಬಂದಿಲ್ಲ ಎಂದು ವಿಮಾನಯಾನ ಸಂಸ್ಥೆ ಹೇಳಿರುವುದಾಗಿ ನಾಗರಿಕ ವಿಮಾನಯಾನ ಸಚಿವಾಲಯ ಗುರುವಾರ ತಿಳಿಸಿದೆ.

ಕಳೆದ ವರ್ಷ ಡಿಸೆಂಬರ್ 10 ರಂದು ಚೆನ್ನೈ ವಿಮಾನ ನಿಲ್ದಾಣದಲ್ಲಿ ನಡೆದ ಘಟನೆಯ ಬಗ್ಗೆ ಆಡಳಿತಾರೂಢ ಬಿಜೆಪಿಯ ಬೆಂಗಳೂರು ದಕ್ಷಿಣ ಸಂಸದ ಸೂರ್ಯ ಅವರ ವಿರುದ್ಧ ಕಾಂಗ್ರೆಸ್‌ ತೀವ್ರ ವಾಗ್ದಾಳಿ ನಡೆಸಿತ್ತು.

ಚೆನ್ನೈನಲ್ಲಿ ವಿಮಾನದ ತುರ್ತು ಬಾಗಿಲನ್ನು ಅಕ್ರಮವಾಗಿ ತೆರೆದ ಪ್ರಯಾಣಿಕನನ್ನು ವಿಮಾನಯಾನ ನಿಯಂತ್ರಕ ಡಿಜಿಸಿಎ ಮೂಲಕ ಸರ್ಕಾರ ಗುರುತಿಸಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ನಾಗರಿಕ ವಿಮಾನಯಾನ ಖಾತೆ ರಾಜ್ಯ ಸಚಿವ ವಿ ಕೆ ಸಿಂಗ್ ಅವರು ಗುರುತಿಸಿದೆ ಎಂದು ಉತ್ತರಿಸಿದರು.

"ಇಂಟರ್‌ಗ್ಲೋಬ್ ಏವಿಯೇಷನ್ ಲಿಮಿಟೆಡ್ ಸಲ್ಲಿಸಿದ ವರದಿಯ ಪ್ರಕಾರ, ಘಟನೆಯಲ್ಲಿ ಆರೋಪಿಸಲಾದ ಪ್ರಯಾಣಿಕರ ಹೆಸರು ತೇಜಸ್ವಿ ಸೂರ್ಯ. ಅವರು ಡಿಸೆಂಬರ್ 10, 2022 ರಂದು ಚೆನ್ನೈ ವಿಮಾನ ನಿಲ್ದಾಣದಲ್ಲಿ 6E-7339(ಚೆನ್ನೈನಿಂದ ತಿರುಚಿರಾಪಳ್ಳಿ) ವಿಮಾನವನ್ನು ಹತ್ತಿದ್ದರು.

"ಇಂಟರ್ ಗ್ಲೋಬ್ ಏವಿಯೇಷನ್ ಲಿಮಿಟೆಡ್ ಸ್ಪಷ್ಟಪಡಿಸಿದಂತೆ ತೇಜಸ್ವಿ ಸೂರ್ಯ ಆಕಸ್ಮಿಕವಾಗಿ ತುರ್ತು ಬಾಗಿಲು ತೆರೆದರು. ಇದು ಉದ್ದೇಶಪೂರ್ವಕ ಕ್ರಮವಲ್ಲ ಮತ್ತು ಇಂಟರ್ ಗ್ಲೋಬ್ ಏವಿಯೇಷನ್ ಪ್ರಕಾರ, ಪ್ರಯಾಣಿಕ ಯಾವುದೇ ನಿಯಮವನ್ನು ಉಲ್ಲಂಘಿಸಿರುವುದು ಕಂಡುಬಂದಿಲ್ಲ" ಎಂದು ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

ಬಿಜೆಪಿ ಸಂಸದನ ವಿರುದ್ಧ ಡಿಜಿಸಿಎ ಕ್ರಮ ಕೈಗೊಂಡಿದೆಯೇ? ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, 'ಘಟನೆಗಳ ಅಧಿಸೂಚನೆ ಮತ್ತು ಅದರ ತನಿಖೆ'ಗೆ ಸಂಬಂಧಿಸಿದಂತೆ ನಾಗರಿಕ ವಿಮಾನಯಾನ ಅಗತ್ಯತೆಗಳ ಪ್ರಕಾರ, ಈ ಘಟನೆಯು 'ವರದಿ ಮಾಡಬಹುದಾದ ಘಟನೆ' ವರ್ಗಕ್ಕೆ ಬರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT