(ಸಾಂಕೇತಿಕ ಚಿತ್ರ) 
ದೇಶ

ಫೆ.14 ರಂದು ಗೋವು ಅಪ್ಪಿಕೊಳ್ಳುವ ದಿನ ಆಚರಣೆಯ ಕರೆ ಹಿಂಪಡೆದ ಪ್ರಾಣಿ ಕಲ್ಯಾಣ ಮಂಡಳಿ

ಫೆ.14 ರಂದು ಪ್ರೇಮಿಗಳ ದಿನದಂದು ವೈದಿಕ ಸಂಪ್ರದಾಯವನ್ನು ಸಂಭ್ರಮಿಸುವುದಕ್ಕಾಗಿ ಗೋವು ಅಪ್ಪಿಕೊಳ್ಳುವ ದಿನ (Cow Hug Day) ಆಚರಣೆಗೆ ನೀಡಿದ್ದ ಕರೆಯನ್ನು ಪ್ರಾಣಿ ಕಲ್ಯಾಣ ಮಂಡಳಿ ವಾಪಸ್ ಪಡೆದಿದೆ.

ನವದೆಹಲಿ: ಫೆ.14 ರಂದು ಪ್ರೇಮಿಗಳ ದಿನದಂದು ವೈದಿಕ ಸಂಪ್ರದಾಯವನ್ನು ಸಂಭ್ರಮಿಸುವುದಕ್ಕಾಗಿ ಗೋವು ಅಪ್ಪಿಕೊಳ್ಳುವ ದಿನ (Cow Hug Day) ಆಚರಣೆಗೆ ನೀಡಿದ್ದ ಕರೆಯನ್ನು ಪ್ರಾಣಿ ಕಲ್ಯಾಣ ಮಂಡಳಿ ವಾಪಸ್ ಪಡೆದಿದೆ.

ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯದ ನಿರ್ದೇಶನದಂತೆ, ಫೆಬ್ರವರಿ 14 ರಂದು ಹಸುವನ್ನು ತಬ್ಬಿಕೊಳ್ಳುವ ದಿನ ಆಚರಿಸಲು ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿ ಹೊರಡಿಸಿದ ಮನವಿಯನ್ನು ಹಿಂಪಡೆಯಲಾಗಿದೆ ಎಂದು ಮಂಡಳಿಯ ಕಾರ್ಯದರ್ಶಿ ಎಸ್‌ಕೆ ದತ್ತಾ ನೋಟಿಸ್‌ನಲ್ಲಿ ತಿಳಿಸಿದ್ದಾರೆ.

AWBI ಮನವಿಗೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಭಾರತೀಯ ಸಂಸ್ಕೃತಿ ಹಾಗೂ ಗ್ರಾಮೀಣ ಆರ್ಥಿಕತೆಗೆ ಹಸು ಬೆನ್ನೆಲುಬಾಗಿದೆ ಹಾಗೂ ಹಸು ನಮ್ಮ ಜೀವನಕ್ಕೆ ನೆರವಾಗುವ ಜಾನುವಾರು ಸಂಪತ್ತು ಮತ್ತು ಜೀವವೈವಿಧ್ಯತೆಯನ್ನು ಪ್ರತಿನಿಧಿಸುವ ಪ್ರಾಣಿಯಾಗಿದೆ. ಹಸು ಮನುಕುಲವನ್ನು ತಾಯಿಯಂತೆ ಪೋಷಣೆಯ ಪ್ರಕೃತಿ ಹೊಂದಿರುವುದರಿಂದ ಕಾಮಧೇನು ಹಾಗೂ ಗೋಮಾತೆ ಎಂದು ಕರೆಸಿಕೊಳ್ಳುತ್ತದೆ ಎಂದು ಪ್ರಾಣಿ ಕಲ್ಯಾಣ ಮಂಡಳಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ. 

ಪಶ್ಚಿಮದ ಸಂಸ್ಕೃತಿಯ ಪ್ರಗತಿಯಿಂದಾಗಿ ವೈದಿಕ ಸಂಪ್ರದಾಯಗಳು ಅಳಿವಿನ ಅಂಚಿನಲ್ಲಿದೆ. ಪಶ್ಚಿಮದ ನಾಗರಿಕತೆ ನಮ್ಮ ಭೌತಿಕ ಸಂಸ್ಕೃತಿ ಹಾಗೂ ಪರಂಪರೆಯನ್ನೇ ಮರೆಯುವಂತೆ ಮಾಡಿದೆ ಎಂದು ಮಂಡಳಿ ಹೇಳಿದೆ. 

ಪ್ರಾಣಿ ಕಲ್ಯಾಣ ಮಂಡಳಿಯ ಪ್ರಕಾರ, ಹಸುವಿನಿಂದ ಸಿಗುವ ಅಪಾರ ಪ್ರಯೋಜನಗಳಿಂದಾಗಿ ಅದನ್ನು ಅಪ್ಪಿಕೊಳ್ಳುವುದರಿಂದ ಭಾವನಾತ್ಮಕ ಶ್ರೀಮಂತಿಕೆಯನ್ನು ಹೆಚ್ಚಿಸುತ್ತದೆ ಹಾಗೂ ವೈಯಕ್ತಿಕ ಹಾಗೂ ಸಾಮೂಹಿಕ ಸಂತೋಷವನ್ನು ಹೆಚ್ಚಿಸುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ, ಹೇಗೆ ನೆರವೇರಿಸಿದ್ರು?ಈ ಅದ್ಬುತ Video ನೋಡಿ..

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

SCROLL FOR NEXT