ಪ್ರಧಾನಿ ನರೇಂದ್ರ ಮೋದಿ 
ದೇಶ

ಯಾರಾದರೂ ತಾಯಿಯ ಅಜ್ಜನ ಸರ್‌ನೇಮ್‌ ಬಳಸುತ್ತಾರೆಯೇ?, ನಿಮಗೆ ಸಾಮಾನ್ಯ ತಿಳುವಳಿಕೆ ಇಲ್ಲವೇ?: ಮೋದಿಗೆ ಕಾಂಗ್ರೆಸ್ ತಿರುಗೇಟು

ರಾಜ್ಯಸಭೆಯಲ್ಲಿ ಗಾಂಧಿಗಳು ನೆಹರೂ ಹೆಸರನ್ನು ಬಳಸುವುದಿಲ್ಲ ಎಂದು ಹೇಳಿದ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ತೀವ್ರ ತರಾಟೆಗೆ ತೆಗೆದುಕೊಂಡ ಪ್ರತಿಪಕ್ಷ ಕಾಂಗ್ರೆಸ್, ಭಾರತದಲ್ಲಿ ಯಾರಾದರೂ ತಮ್ಮ ತಾಯಿಯ ಅಜ್ಜನ ...

ನವದೆಹಲಿ: ರಾಜ್ಯಸಭೆಯಲ್ಲಿ ಗಾಂಧಿಗಳು ನೆಹರೂ ಹೆಸರನ್ನು ಬಳಸುವುದಿಲ್ಲ ಎಂದು ಹೇಳಿದ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ತೀವ್ರ ತರಾಟೆಗೆ ತೆಗೆದುಕೊಂಡ ಪ್ರತಿಪಕ್ಷ ಕಾಂಗ್ರೆಸ್, ಭಾರತದಲ್ಲಿ ಯಾರಾದರೂ ತಮ್ಮ ತಾಯಿಯ ಅಜ್ಜನ  ಸರ್‌ನೇಮ್‌ ಅನ್ನು ಬಳಸುತ್ತಾರೆಯೇ? ಎಂದು ಪ್ರಶ್ನಿಸಿದೆ.

ಪ್ರಧಾನಿ ಮೋದಿಗೆ ಭಾರತೀಯ ಸಂಸ್ಕೃತಿಯ ಬಗ್ಗೆ ಕನಿಷ್ಠ ತಿಳುವಳಿಕೆಯೂ ಇಲ್ಲ. ದೇಶವನ್ನು ದೇವರೇ ಕಾಪಾಬೇಕು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೆವಾಲಾ ಅವರು, ನೆಹರೂ ಸರ್ ನೇಮ್ ಬಳಸುವುದಕ್ಕೆ ಗಾಂಧಿಗಳು ಏಕೆ ನಾಚಿಕೆಪಡುತ್ತಾರೆ ಎಂದು ಪ್ರಶ್ನಿಸಿದರು.

ಇಂದು ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಜತೆ ಸುದ್ದಿಗೋಷ್ಠಿ ನಡೆಸಿದ ಸುರ್ಜೇವಾಲಾ ಅವರು, "ಪ್ರಧಾನಿಯಂತಹ ಜವಾಬ್ದಾರಿಯುತ ಸ್ಥಾನದಲ್ಲಿ ಕುಳಿತಿರುವವರಿಗೆ ಭಾರತದ ಸಂಸ್ಕೃತಿಯ ಬಗ್ಗೆ ಕನಿಷ್ಠ ಜ್ಞಾನವೂ ಇಲ್ಲ ಎಂದು ಪ್ರಧಾನಿ ಹೇಳಿಕೆ ತೀವ್ರ ಅಸಮಧಾನ ವ್ಯಕ್ತಪಡಿಸಿದರು.

ನೀವು ದೇಶದ ಯಾವುದೇ ವ್ಯಕ್ತಿಯನ್ನೂ ಕೇಳಿ, ಯಾರಾದರೂ ತಾಯಿಯ ಅಜ್ಜನ ಉಪನಾಮವನ್ನು ತಮ್ಮ ಹೆಸರಿನ ಮುಂದೆ ಬಳಸುತ್ತಾರೆಯೇ?. ಭಾರತೀಯ ಸಂಸ್ಕೃತಿಯಲ್ಲಿ ಯಾರೂ ತಾಯಿಯ ಅಜ್ಜನ ಉಪನಾಮವನ್ನು ಬಳಸುವುದಿಲ್ಲ, ಮೋದಿಯವರಿಗೆ ಇದನ್ನ ಅರ್ಥಮಾಡಿಕೊಳ್ಳುವಷ್ಟು ಸಾಮಾನ್ಯ ತಿಳುವಳಿಕೆ ಇಲ್ಲ ಎಂದು ಕಾಂಗ್ರೆಸ್ ನಾಯಕ ವ್ಯಂಗ್ಯವಾಡಿದ್ದಾರೆ.

ಪ್ರಧಾನಿ ಮೋದಿ ಗುರುವಾರ ರಾಜ್ಯಸಭೆಯಲ್ಲಿ ಮಾಡಿದ ಭಾಷಣದಲ್ಲಿ, ಜವಾಹರ್​ ಲಾಲ್​ ನೆಹರೂ ಅವರು ದೇಶದ ಮೊದಲ ಪ್ರಧಾನಮಂತ್ರಿ, ಅವರೊಬ್ಬ ಶ್ರೇಷ್ಠ ವ್ಯಕ್ತಿ, ಆದರೂ ಅವರ ಕುಟುಂಬ ಹಾಗೂ ಪಕ್ಷದವರೂ ಅವರ ಉಪನಾಮವನ್ನು (Surname) ಎಲ್ಲೂ ಏಕೆ ಬಳಸುವುದಿಲ್ಲ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT