ಪ್ರಧಾನಿ ನರೇಂದ್ರ ಮೋದಿ 
ದೇಶ

ಯಾರಾದರೂ ತಾಯಿಯ ಅಜ್ಜನ ಸರ್‌ನೇಮ್‌ ಬಳಸುತ್ತಾರೆಯೇ?, ನಿಮಗೆ ಸಾಮಾನ್ಯ ತಿಳುವಳಿಕೆ ಇಲ್ಲವೇ?: ಮೋದಿಗೆ ಕಾಂಗ್ರೆಸ್ ತಿರುಗೇಟು

ರಾಜ್ಯಸಭೆಯಲ್ಲಿ ಗಾಂಧಿಗಳು ನೆಹರೂ ಹೆಸರನ್ನು ಬಳಸುವುದಿಲ್ಲ ಎಂದು ಹೇಳಿದ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ತೀವ್ರ ತರಾಟೆಗೆ ತೆಗೆದುಕೊಂಡ ಪ್ರತಿಪಕ್ಷ ಕಾಂಗ್ರೆಸ್, ಭಾರತದಲ್ಲಿ ಯಾರಾದರೂ ತಮ್ಮ ತಾಯಿಯ ಅಜ್ಜನ ...

ನವದೆಹಲಿ: ರಾಜ್ಯಸಭೆಯಲ್ಲಿ ಗಾಂಧಿಗಳು ನೆಹರೂ ಹೆಸರನ್ನು ಬಳಸುವುದಿಲ್ಲ ಎಂದು ಹೇಳಿದ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ತೀವ್ರ ತರಾಟೆಗೆ ತೆಗೆದುಕೊಂಡ ಪ್ರತಿಪಕ್ಷ ಕಾಂಗ್ರೆಸ್, ಭಾರತದಲ್ಲಿ ಯಾರಾದರೂ ತಮ್ಮ ತಾಯಿಯ ಅಜ್ಜನ  ಸರ್‌ನೇಮ್‌ ಅನ್ನು ಬಳಸುತ್ತಾರೆಯೇ? ಎಂದು ಪ್ರಶ್ನಿಸಿದೆ.

ಪ್ರಧಾನಿ ಮೋದಿಗೆ ಭಾರತೀಯ ಸಂಸ್ಕೃತಿಯ ಬಗ್ಗೆ ಕನಿಷ್ಠ ತಿಳುವಳಿಕೆಯೂ ಇಲ್ಲ. ದೇಶವನ್ನು ದೇವರೇ ಕಾಪಾಬೇಕು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೆವಾಲಾ ಅವರು, ನೆಹರೂ ಸರ್ ನೇಮ್ ಬಳಸುವುದಕ್ಕೆ ಗಾಂಧಿಗಳು ಏಕೆ ನಾಚಿಕೆಪಡುತ್ತಾರೆ ಎಂದು ಪ್ರಶ್ನಿಸಿದರು.

ಇಂದು ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಜತೆ ಸುದ್ದಿಗೋಷ್ಠಿ ನಡೆಸಿದ ಸುರ್ಜೇವಾಲಾ ಅವರು, "ಪ್ರಧಾನಿಯಂತಹ ಜವಾಬ್ದಾರಿಯುತ ಸ್ಥಾನದಲ್ಲಿ ಕುಳಿತಿರುವವರಿಗೆ ಭಾರತದ ಸಂಸ್ಕೃತಿಯ ಬಗ್ಗೆ ಕನಿಷ್ಠ ಜ್ಞಾನವೂ ಇಲ್ಲ ಎಂದು ಪ್ರಧಾನಿ ಹೇಳಿಕೆ ತೀವ್ರ ಅಸಮಧಾನ ವ್ಯಕ್ತಪಡಿಸಿದರು.

ನೀವು ದೇಶದ ಯಾವುದೇ ವ್ಯಕ್ತಿಯನ್ನೂ ಕೇಳಿ, ಯಾರಾದರೂ ತಾಯಿಯ ಅಜ್ಜನ ಉಪನಾಮವನ್ನು ತಮ್ಮ ಹೆಸರಿನ ಮುಂದೆ ಬಳಸುತ್ತಾರೆಯೇ?. ಭಾರತೀಯ ಸಂಸ್ಕೃತಿಯಲ್ಲಿ ಯಾರೂ ತಾಯಿಯ ಅಜ್ಜನ ಉಪನಾಮವನ್ನು ಬಳಸುವುದಿಲ್ಲ, ಮೋದಿಯವರಿಗೆ ಇದನ್ನ ಅರ್ಥಮಾಡಿಕೊಳ್ಳುವಷ್ಟು ಸಾಮಾನ್ಯ ತಿಳುವಳಿಕೆ ಇಲ್ಲ ಎಂದು ಕಾಂಗ್ರೆಸ್ ನಾಯಕ ವ್ಯಂಗ್ಯವಾಡಿದ್ದಾರೆ.

ಪ್ರಧಾನಿ ಮೋದಿ ಗುರುವಾರ ರಾಜ್ಯಸಭೆಯಲ್ಲಿ ಮಾಡಿದ ಭಾಷಣದಲ್ಲಿ, ಜವಾಹರ್​ ಲಾಲ್​ ನೆಹರೂ ಅವರು ದೇಶದ ಮೊದಲ ಪ್ರಧಾನಮಂತ್ರಿ, ಅವರೊಬ್ಬ ಶ್ರೇಷ್ಠ ವ್ಯಕ್ತಿ, ಆದರೂ ಅವರ ಕುಟುಂಬ ಹಾಗೂ ಪಕ್ಷದವರೂ ಅವರ ಉಪನಾಮವನ್ನು (Surname) ಎಲ್ಲೂ ಏಕೆ ಬಳಸುವುದಿಲ್ಲ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತೀವ್ರ ಕುತೂಹಲ ಘಟ್ಟಕ್ಕೆ ತಲುಪಿದ ಪಶ್ಚಿಮ ಏಷ್ಯಾ ಸಂಘರ್ಷ: ಇಂದು ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಇರಾನ್-ಅಮೆರಿಕ ನಡುವೆ ಸಂಧಾನ ಮಾತುಕತೆ-Video

5 ದಶಕಗಳ ಬಳಿಕ ದಾಖಲೆ ನಿರ್ಮಿಸಿದ ಚಂದ್ರಯಾನ: ಯಶಸ್ವಿಯಾಗಿ ಭೂಮಿಗೆ ಮರಳಿದ Artemis II ಗಗನ ಯಾತ್ರಿಗಳು-Video

'ನನ್ನ ಹಣೆಬರಹ ಎಲ್ಲಿದೆಯೋ, ಜನ ಎಲ್ಲಿ ಗೆಲ್ಲಿಸ್ತಾರೋ ನೋಡೋಣ: ನಮ್ಮ ಸಂಖ್ಯೆ ನೋಡಿ ಅಪಹಾಸ್ಯ ಮಾಡಿದ್ದಾರೆ, 2028 ರಲ್ಲಿ ಸರ್ಕಾರ ರಚಿಸ್ತಿವಿ'

ಲೋಕಭವನ -ಸರ್ಕಾರದ ನಡುವೆ ಮತ್ತೊಂದು ಸುತ್ತಿನ ಸಂಘರ್ಷ: ಮತ ಪತ್ರ ಬಳಕೆ ಮಸೂದೆಗೆ ರಾಜ್ಯಪಾಲರ ತಡೆ

ಆನೇಕಲ್‌ ಬಳಿ ಕ್ರಿಕೆಟ್‌ ಸ್ಟೇಡಿಯಂ ನಿರ್ಮಾಣಕ್ಕೆ 943 ಕೋಟಿ ರೂ. ಟೆಂಡರ್: ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಪರ್ಯಾಯ ಸಮುಚ್ಚಯ !

SCROLL FOR NEXT