ಪ್ರಧಾನಿ ಮೋದಿ 
ದೇಶ

ಮುಂಬೈ-ಶಿರಡಿ, ಮುಂಬೈ-ಸೊಲ್ಲಾಪುರ ಎರಡು ವಂದೇ ಭಾರತ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

ಮುಂಬೈನಿಂದ ಶಿರಡಿ ಮತ್ತು ಮುಂಬೈನಿಂದ ಸೊಲ್ಲಾಪುರಕ್ಕೆ ಎರಡು ವಂದೇ ಭಾರತ್ ರೈಲುಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಚಾಲನೆ ನೀಡಿದರು.

ಮುಂಬೈ: ಮುಂಬೈನಿಂದ ಶಿರಡಿ ಮತ್ತು ಮುಂಬೈನಿಂದ ಸೊಲ್ಲಾಪುರಕ್ಕೆ ಎರಡು ವಂದೇ ಭಾರತ್ ರೈಲುಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಚಾಲನೆ ನೀಡಿದರು.

ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್(CSMT)ನಲ್ಲಿ ಎರಡು ವಂದೇ ಭಾರತ್ ರೈಲಿಗಳಿಗೆ ಚಾಲನೆ ನೀಡಿ ಮಾತನಾಡಿದ ಪ್ರಧಾನಿ ಮೋದಿ, ವಂದೇ ಭಾರತ್ ರೈಲುಗಳು 'ಆತ್ಮನಿರ್ಭರ್' (ಸ್ವಾವಲಂಬಿ) ಮತ್ತು 'ವಿಕ್ಷಿತ್' (ಅಭಿವೃದ್ಧಿ ಹೊಂದಿದ) ಭಾರತವಾಗುತ್ತಿರುವದರ ಪ್ರತಿಬಿಂಬವಾಗಿದೆ ಎಂದು ಹೇಳಿದರು.

"21ನೇ ಶತಮಾನದ ಭಾರತವು, ತನ್ನ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ತ್ವರಿತವಾಗಿ ಸುಧಾರಿಸಬೇಕಾಗಿದೆ. ನಮ್ಮ ಸಾರ್ವಜನಿಕ ಸಾರಿಗೆ ವ್ಯವಸ್ಥೆಯು ಅತ್ಯಂತ ವೇಗವಾಗಿ ಆಧುನಿಕ ಮತ್ತು ಸುಧಾರಿತವಾಗುತ್ತಿದೆ. ಇದರಿಂದ ಜನರ ಜೀವನವು ಹೆಚ್ಚು ಸುಲಭವಾಗುತ್ತದೆ" ಎಂದು ಪ್ರಧಾನಿ ಮೋದಿ ಹೇಳಿದರು.

ಇದುವರೆಗೆ 17 ರಾಜ್ಯಗಳ 108 ಜಿಲ್ಲೆಗಳು ವಂದೇ ಭಾರತ್ ರೈಲುಗಳ ಮೂಲಕ ವೇಗದ ರೈಲು ಸಂಪರ್ಕವನ್ನು ಪಡೆದಿವೆ ಎಂದು ಪ್ರಧಾನಿ ಮೋದಿ ತಿಳಿಸಿದರು.

ಮುಂಬೈ-ಸೋಲಾಪುರ ವಂದೇ ಭಾರತ್ ಎಕ್ಸ್‌ಪ್ರೆಸ್ 455 ಕಿಮೀ ದೂರವನ್ನು 6 ಗಂಟೆ 30 ನಿಮಿಷಗಳಲ್ಲಿ ಕ್ರಮಿಸಲಿದ್ದು, ಮುಂಬೈ-ಸಾಯಿನಗರ ಶಿರಡಿ ವಂದೇ ಭಾರತ್ ಎಕ್ಸ್‌ಪ್ರೆಸ್ 343 ಕಿಮೀ ದೂರವನ್ನು 5 ಗಂಟೆ 25 ನಿಮಿಷಗಳಲ್ಲಿ ಕ್ರಮಿಸಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT