ಸುಪ್ರೀಂಕೋರ್ಟ್ 
ದೇಶ

ಭಾರತದಲ್ಲಿ ಬಿಬಿಸಿ ಪ್ರಸಾರಕ್ಕೆ ನಿಷೇಧ ಕೋರಿದ್ದ ಅರ್ಜಿ ಸುಪ್ರೀಂ ಕೋರ್ಟ್ ನಿಂದ ತಿರಸ್ಕೃತ

ಪ್ರಧಾನಿ ನರೇಂದ್ರ ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರ ಪ್ರಸಾರ ಮಾಡಿದ್ದ ಬ್ರಿಟಿಷ್‌ ಬ್ರಾಡ್‌ಕಾಸ್ಟಿಂಗ್‌ ಕಾರ್ಪೊರೇಷನ್‌ ಪ್ರಸಾರವನ್ನು ಭಾರತದಲ್ಲಿ ನಿಷೇಧಿಸುವಂತೆ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾ ಮಾಡಿದೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರ ಪ್ರಸಾರ ಮಾಡಿದ್ದ ಬ್ರಿಟಿಷ್‌ ಬ್ರಾಡ್‌ಕಾಸ್ಟಿಂಗ್‌ ಕಾರ್ಪೊರೇಷನ್‌ ಪ್ರಸಾರವನ್ನು ಭಾರತದಲ್ಲಿ ನಿಷೇಧಿಸುವಂತೆ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾ ಮಾಡಿದೆ.

2002ರ ಗುಜರಾತ್‌ಗೆ ಸಂಬಂಧಿಸಿದ 'ಇಂಡಿಯಾ: ದಿ ಮೋದಿ ಕ್ವೆಶ್ಚನ್' ಎಂಬ ಶೀರ್ಷಿಕೆಯ ಸಾಕ್ಷ್ಯಚಿತ್ರವನ್ನು ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ಬ್ರಿಟಿಷ್ ಬ್ರಾಡ್‌ಕಾಸ್ಟಿಂಗ್ ಕಾರ್ಪೊರೇಷನ್ (ಬಿಬಿಸಿ) ಮತ್ತು ಬಿಬಿಸಿ ಇಂಡಿಯಾವನ್ನು ಭಾರತೀಯ ಭೂಪ್ರದೇಶದಿಂದ ಕಾರ್ಯನಿರ್ವಹಿಸದಂತೆ ಸಂಪೂರ್ಣ ನಿಷೇಧಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ. 

2002ರ ಗುಜರಾತ್ ಗಲಭೆಯ ಸಂದರ್ಭದಲ್ಲಿ ಪ್ರಧಾನಿ ಮೋದಿಯವರು ಗುಜರಾತ್ ಮುಖ್ಯಮಂತ್ರಿಯಾಗಿದ್ದ ಅವಧಿಯ ಮೇಲೆ ದಾಳಿ ಮಾಡುವ ಬ್ರಿಟನ್ ನ ಬ್ರಿಟಿಷ್ ಬ್ರಾಡ್‌ಕಾಸ್ಟಿಂಗ್ ಕಾರ್ಪೊರೇಶನ್‌ನ (ಬಿಬಿಸಿ) ಎರಡು ಭಾಗಗಳ ಸರಣಿಯು ದೇಶದಲ್ಲಿ ತೀವ್ರ ವಿವಾದ ಹುಟ್ಟುಹಾಕಿತ್ತು. ಈ ವಿವಾದಿತ ಸಾಕ್ಷ್ಯಚಿತ್ರವನ್ನುದೇಶಾದ್ಯಂತ ಹಲವು ಆಯ್ದ ವೇದಿಕೆಗಳಲ್ಲಿ ಪ್ರಸಾರ ಮಾಡಲಾಗಿತ್ತು. 

ಮೂಲಗಳ ಪ್ರಕಾರ, ಜನವರಿ 21 ರಂದು, ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರಕ್ಕೆ ಲಿಂಕ್‌ಗಳನ್ನು ಹಂಚಿಕೊಳ್ಳುವ ಬಹು ಯೂಟ್ಯೂಬ್ ವೀಡಿಯೊಗಳು ಮತ್ತು ಟ್ವಿಟರ್ ಪೋಸ್ಟ್‌ಗಳನ್ನು ನಿರ್ಬಂಧಿಸಲು ಕೇಂದ್ರವು ನಿರ್ದೇಶನಗಳನ್ನು ನೀಡಿದೆ.

‘ಇಂಡಿಯಾ: ದಿ ಮೋದಿ ಕ್ವೆಶ್ಚನ್‌’ ಎಂಬ ಸಾಕ್ಷ್ಯಚಿತ್ರವನ್ನು ಬಿಬಿಸಿ ನಿರ್ಮಿಸಿದೆ. ಸಾಕ್ಷ್ಯಚಿತ್ರದ ಒಂದು ಕಂತು ಜನವರಿ 17ರಂದು ಬಿಡುಗಡೆಯಾಗಿತ್ತು. 2002ರಲ್ಲಿ ಗುಜರಾತ್‌ನಲ್ಲಿ ನಡೆದಿದ್ದ ಗೋಧ್ರೋತ್ತರ ಹತ್ಯಾಕಾಂಡವನ್ನು ನಿಯಂತ್ರಿಸುವಲ್ಲಿ ಪೊಲೀಸರು ವಿಫಲವಾಗಿದ್ದರು. ಪೊಲೀಸರ ವೈಫಲ್ಯದಲ್ಲಿ ಗುಜರಾತ್‌ನ ಆಗಿನ ಮುಖ್ಯಮಂತ್ರಿಯಾಗಿದ್ದ ಮೋದಿ ಅವರ ಪಾತ್ರವೂ ಇತ್ತು ಎಂದು ಭಾರತದಲ್ಲಿ ಬ್ರಿಟನ್ ರಾಜತಾಂತ್ರಿಕರಾಗಿದ್ದ ಅಧಿಕಾರಿಗಳು ಹೇಳಿರುವುದನ್ನು ಸಾಕ್ಷ್ಯಚಿತ್ರದಲ್ಲಿ ತೋರಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

SCROLL FOR NEXT