ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ 
ದೇಶ

ಡಿಸ್ಕಾಂ ಮಂಡಳಿಗಳಿಗೆ ನೇಮಕ: ಆಮ್ ಆದ್ಮಿ ಪಕ್ಷದ ನಾಮನಿರ್ದೇಶಿತರನ್ನು ವಜಾಗೊಳಿಸಿದ ದೆಹಲಿ ಲೆಫ್ಟಿನೆಂಟ್ ಗವರ್ನರ್ 

ದೆಹಲಿಯಲ್ಲಿ ವಿದ್ಯುತ್ ಡಿಸ್ಕಾಮ್ ಗಳ ಮಂಡಳಿಗಳಿಗೆ ನಾಮನಿರ್ದೇಶನಗೊಂಡಿದ್ದ ಆಮ್ ಆದ್ಮಿ ಪಕ್ಷದ ನಾಯಕರನ್ನು ಲೆಫ್ಟಿನೆಂಟ್ ಗೌರ್ನರ್ ವಜಾಗೊಳಿಸಿದ್ದಾರೆ.

ನವದೆಹಲಿ: ದೆಹಲಿಯಲ್ಲಿ ವಿದ್ಯುತ್ ಡಿಸ್ಕಾಮ್ ಗಳ ಮಂಡಳಿಗಳಿಗೆ ನಾಮನಿರ್ದೇಶನಗೊಂಡಿದ್ದ ಆಮ್ ಆದ್ಮಿ ಪಕ್ಷದ ನಾಯಕರನ್ನು ಲೆಫ್ಟಿನೆಂಟ್ ಗೌರ್ನರ್ ವಜಾಗೊಳಿಸಿದ್ದು, ಆ ಸ್ಥಾನಕ್ಕೆ ಹಿರಿಯ ಅಧಿಕಾರಿಗಳನ್ನು ನೇಮಕ ಮಾಡಿದ್ದಾರೆ ಎಂದು ಗೌರ್ನರ್ ಕಚೇರಿ ಮೂಲಗಳಿಂದ ತಿಳಿದುಬಂದಿದೆ. 

ಆಮ್ ಆದ್ಮಿ ಪಕ್ಷದ ವಕ್ತಾರರಾದ ಜಾಸ್ಮೀನ್ ಶಾ, ಆಪ್ ಸಂಸದ ಎನ್ ಡಿ ಗುಪ್ತಾ ಅವರ ಪುತ್ರ ನವೀನ್ ಗುಪ್ತಾ ಹಾಗೂ ಇನ್ನೂ ಇತರ ಖಾಸಗಿ ವ್ಯಕ್ತಿಗಳನ್ನು ಸರ್ಕಾರದ ನಾಮನಿರ್ದೇಶಿತರೆಂದು ಅಕ್ರಮವಾಗಿ ನೇಮಕ ಮಾಡಲಾಗಿತ್ತು ಎಂಬ ಆರೋಪ ಕೇಳಿಬಂದಿದೆ. 

ದೆಹಲಿಯ ಆಡಳಿತಾರೂಢ ಪಕ್ಷ ಆಪ್ ಲೆಫ್ಟಿನೆಂಟ್ ಗವರ್ನರ್ ಆದೇಶವನ್ನು ಅಕ್ರಮ ಹಾಗೂ ಅಸಾಂವಿಧಾನಿಕ ಎಂದು ಆರೋಪಿಸಿದ್ದು ಇಂತಹ ಆದೇಶವನ್ನು ಹೊರಡಿಸಲು ಗವರ್ನರ್ ಗೆ ಅಧಿಕಾರವೇ ಇಲ್ಲ ಎಂದು ಹೇಳಿದೆ. 

ಲೆಫ್ಟಿನೆಂಟ್ ಗವರ್ನರ್ ಕಚೇರಿಯ ಮಾಹಿತಿಯ ಪ್ರಕಾರ, ಹಣಕಾಸು ಕಾರ್ಯದರ್ಶಿ, ಇಂಧನ ಕಾರ್ಯದರ್ಶಿ ಹಾಗೂ ದೆಹಲಿ ಟ್ರಾನ್ಸ್ಕೋದ ಎಂಡಿ ಡಿಸ್ಕಾಮ್ ಗಳ ಮಂಡಳಿಗಳಲ್ಲಿ ಸರ್ಕಾರವನ್ನು ಪ್ರತಿನಿಧಿಸಲಿದ್ದಾರೆ. 

ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಶಾ, ಗುಪ್ತಾ ಹಾಗೂ ಇನ್ನೂ ಇತರ ಖಾಸಗಿ ವ್ಯಕ್ತಿಗಳನ್ನು ಬಿವೈಪಿಎಲ್, ಬಿಆರ್ ಪಿಎಲ್, ಟಿಪಿಡಿಡಿಎಲ್ ಗಳಿಗೆ ಅಕ್ರಮವಾಗಿ ಸರ್ಕಾರದ ನಾಮನಿರ್ದೇಶನ ಮಾಡಲಾಗಿದೆ ಎಂದು ಗನರ್ವರ್ ಕಚೇರಿ ಹೇಳಿದೆ.
 
ಆದರೆ ಈ ಆರೋಪಗಳನ್ನು ಅಲ್ಲಗಳೆದಿರುವ ಆಮ್ ಆದ್ಮಿ ಪಕ್ಷ, ಚುನಾಯಿತ ಸರ್ಕಾರಕ್ಕೆ ವಿದ್ಯುತ್ ಗೆ ಸಂಬಂಧಿಸಿದ ಆದೇಶಗಳನ್ನು ಪ್ರಕಟಿಸುವುದಕ್ಕೆ ಅಧಿಕಾರವಿದೆ ಎಂದು ಸಮರ್ಥಿಸಿಕೊಂಡಿದ್ದು, ಲೆಫ್ಟಿನೆಂಟ್ ಗವರ್ನರ್ ಸುಪ್ರೀಂ ಕೋರ್ತ್ ನ ಎಲ್ಲಾ ಆದೇಶಗಳನ್ನು ಹಾಗೂ ಸಂವಿಧಾನವನ್ನು ಅಪಹಾಸ್ಯ ಮಾಡಿದ್ದಾರೆ ಎಂದು ಆರೋಪಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕರ್ನಾಟಕದ ಮುಕುಟಕ್ಕೆ ಮತ್ತೊಂದು ಗರಿ: ಬೆಂಗಳೂರು ಮೂಲದ ಮೇಜರ್ Swathi ShanthaKumarಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ!

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

SCROLL FOR NEXT