ಬ್ರಿಟನ್ 
ದೇಶ

ಬ್ರಿಟನ್ ನಲ್ಲಿ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಧುನಿಕ ಗುಲಾಮಗಿರಿಗೆ ಗುರಿ; ಭಾರತದಿಂದ ರಕ್ಷಣೆಗೆ ಕ್ರಮ

ಕೇರ್ ಹೋಮ್ ಗಳಲ್ಲಿ ಕಾರ್ಯನಿರ್ವಹಿಸುವ ಮೂಲಕ ಬ್ರಿಟನ್ ನಲ್ಲಿ 50 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಧುನಿಕ ಗುಲಾಮಗಿರಿಗೆ ಗುರಿಯಾಗಿದ್ದು, ಭಾರತದಿಂದ ರಕ್ಷಣೆಗೆ ಕ್ರಮ ಕೈಗೊಳ್ಳಲಾಗಿದೆ. 

ನವದೆಹಲಿ: ಕೇರ್ ಹೋಮ್ ಗಳಲ್ಲಿ ಕಾರ್ಯನಿರ್ವಹಿಸುವ ಮೂಲಕ ಬ್ರಿಟನ್ ನಲ್ಲಿ 50 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಧುನಿಕ ಗುಲಾಮಗಿರಿಗೆ ಗುರಿಯಾಗಿದ್ದು, ಭಾರತದಿಂದ ರಕ್ಷಣೆಗೆ ಕ್ರಮ ಕೈಗೊಳ್ಳಲಾಗಿದೆ. 
  
ನಾರ್ತ್ ವ್ಹೇಲ್ಸ್ ನಲ್ಲಿ ಈ ರೀತಿಯ ಘಟನೆ ವರದಿಯಾಗಿದ್ದು, ಲಂಡನ್ ನಲ್ಲಿರುವ ಭಾರತೀಯ ಹೈ ಕಮಿಷನ್ ವಿದ್ಯಾರ್ಥಿಗಳ ಸಹಾಯಕ್ಕೆ ನೆರವಿನ ಹಸ್ತ ಚಾಚಿದ್ದು, ಈ ರೀತಿಯ ಸಮಸ್ಯೆ ಎದುರಿಸುತ್ತಿರುವ ವಿದ್ಯಾರ್ಥಿಗಳಿಗೆ ನೆರವು ಕೇಳುವಂತೆ ಕರೆ ನೀಡಿದೆ. 

ಕಾರ್ಮಿಕರ ಶೋಷಣೆಯ ತಡೆಗಾಗಿ ಇರುವ ಬ್ರಿಟನ್ ಸರ್ಕಾರದ ಗುಪ್ತಚರ ಹಾಗೂ ತನಿಖಾ ಸಂಸ್ಥೆ ಗ್ಯಾಂಗ್‌ಮಾಸ್ಟರ್‌ಗಳು ಮತ್ತು ಕಾರ್ಮಿಕ ನಿಂದನೆ ಪ್ರಾಧಿಕಾರ ಈ ವಾರದಲ್ಲಿ ವರದಿ ಪ್ರಕಟಿಸಿ, ಕಾರ್ಮಿಕರ ನಿಂದನೆ ವಿರುದ್ಧ ಕೋರ್ಟ್ ಆದೇಶ ತರುವುದರಲ್ಲಿ ಯಶಸ್ವಿಯಾಗಿದೆ ಎಂದು ಹೇಳಿತ್ತು. 

ಜಿಎಲ್ಎಎ ಪ್ರಕಾರ 50ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಆಧುನಿಕ ಗುಲಾಮಗಿರಿಗೆ ಗುರಿಯಾಗಿದ್ದು, 14 ತಿಂಗಳಿನಿಂದ್ಮ ಕಾರ್ಮಿಕ ನಿಂದನೆಗೆ ಒಳಗಾಗಿದ್ದಾರೆ ಎಂದು ಹೇಳಿದೆ.

ಈ ವರದಿಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಭಾರತೀಯ ಹೈ ಕಮಿಷನ್, ಈ ಸುದ್ದಿಯನ್ನು ಗಮನಿಸಿ ಆತಂಕವಾಗಿದ್ದು, ಈ ರೀತಿಯ ಸಮಸ್ಯೆ ಎದುರಿಸುತ್ತಿರುವ ವಿದ್ಯಾರ್ಥಿಗಳು pol3.london@mea.gov.in ಮೂಲಕ ನಮ್ಮನ್ನು ಸಂಪರ್ಕಿಸಬಹುದು, ನಾವು ನಿಮಗೆ ಸಹಾಯ ಮಾಡುತ್ತೇವೆ ಎಂದು ಟ್ವೀಟ್ ಮಾಡಿದೆ. 

ಮ್ಯಾಥ್ಯೂ ಐಸಾಕ್, 32, ಜಿನು ಚೆರಿಯನ್, 30, ಎಲ್ದೋಸ್ ಚೆರಿಯನ್, 25, ಎಲ್ದೋಸ್ ಕುರಿಯಾಚನ್, 25, ಮತ್ತು ಜಾಕೋಬ್ ಲಿಜು, 47 ಎಂಬ 5 ಮಂದಿ, ನಾರ್ತ್ ವ್ಹೇಲ್ಸ್ ನಲ್ಲಿ ಕೇರ್ ಹೋಮ್ಸ್ ಗಳಲ್ಲಿ ಕೆಲಸಕ್ಕೆ ದುರ್ಬಲ ಭಾರತೀಯ ವಿದ್ಯಾರ್ಥಿಗಳನ್ನು ನೇಮಕ ಮಾಡಿಕೊಂಡು ಶೋಷಣೆಗೆ ಒಳಪಡಿಸುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ. ಈ ಐವರ ವಿರುದ್ಧವೂ ಗುಲಾಮಗಿರಿ ಮತ್ತು ಕಳ್ಳಸಾಗಣೆ ಅಪಾಯದ ಆದೇಶ ಹೊರಡಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT