ಉಮ್ಮನ್ ಚಾಂಡಿ 
ದೇಶ

ಕೇರಳ ಮಾಜಿ ಸಿಎಂ ಉಮ್ಮನ್ ಚಾಂಡಿಗೆ ತೀವ್ರ ಅನಾರೋಗ್ಯ; ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಏರ್ ಲಿಫ್ಟ್

ಹಿರಿಯ ಕಾಂಗ್ರೆಸ್ ನಾಯಕ ಮತ್ತು ಕೇರಳ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಅವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಭಾನುವಾರ ವಿಮಾನದ ಮೂಲಕ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ...

ಬೆಂಗಳೂರು: ಹಿರಿಯ ಕಾಂಗ್ರೆಸ್ ನಾಯಕ ಮತ್ತು ಕೇರಳ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಅವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಭಾನುವಾರ ವಿಮಾನದ ಮೂಲಕ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆತರಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ನ್ಯುಮೋನಿಯಾನಿಂದ ಬಳಲುತ್ತಿರುವ ಉಮ್ಮನ್ ಚಾಂಡಿ ಅವರನ್ನು ಚಿಕಿತ್ಸೆಗಾಗಿ ಸಮೀಪದ ನೆಯ್ಯಟ್ಟಿಂಕರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ನೆಯ್ಯಟ್ಟಿಂಕರ ಖಾಸಗಿ ಆಸ್ಪತ್ರೆಯಲ್ಲಿ ನನ್ನ ಚಿಕಿತ್ಸೆಗೆ ಸಂಬಂಧಿಸಿದ ವಿವಾದಗಳಿಗೆ ಯಾವುದೇ ಆಧಾರವಿಲ್ಲ ಎಂದು ಚಾಂಡಿ ಅವರು ದುರ್ಬಲ ಧ್ವನಿಯಲ್ಲಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಅವರ ಪತ್ನಿ, ಇಬ್ಬರು ಪುತ್ರಿಯರು ಮತ್ತು ಮಗ ಚಾಂಡಿ ಉಮ್ಮನ್ ಅವರು ಹಿರಿಯ ನಾಯಕರೊಂದಿಗೆ ಬೆಂಗಳೂರಿಗೆ ಆಗಮಿಸಿದ್ದಾರೆ.

79 ವರ್ಷದ ಚಾಂಡಿ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ಸ್ಥಳಾಂತರಿಸಲು ಕಾಂಗ್ರೆಸ್ ನಿರ್ಧರಿಸಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು ಶನಿವಾರ ಹೇಳಿದ್ದರು. ಇದಕ್ಕೂ ಮುನ್ನ ಅವರ ಹದಗೆಟ್ಟ ಆರೋಗ್ಯದ ಬಗ್ಗೆ ವಿವಿಧ ವಲಯಗಳಿಂದ ತೀವ್ರ ಕಳವಳ ವ್ಯಕ್ತವಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!