ಸಾಂದರ್ಭಿಕ ಚಿತ್ರ 
ದೇಶ

ತಿರುವನಂತಪುರಂ: ಕೇಂದ್ರ ಸಚಿವ ವಿ. ಮುರಳೀಧರನ್ ಮನೆ ಮೇಲೆ ದಾಳಿ, ವ್ಯಕ್ತಿ ಬಂಧನ

ಕೇಂದ್ರ ಸಚಿವ ವಿ.ಮುರಳೀಧರನ್ ಅವರ ಮನೆ ಮೇಲೆ ಗುರುವಾರ ದಾಳಿ ನಡೆಸಿದ ಆರೋಪದ ಮೇರೆಗೆ 45 ವರ್ಷದ ವ್ಯಕ್ತಿಯೊಬ್ಬನನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ.

ತಿರುವನಂತಪುರಂ: ಕೇಂದ್ರ ಸಚಿವ ವಿ.ಮುರಳೀಧರನ್ ಅವರ ಮನೆ ಮೇಲೆ ಗುರುವಾರ ದಾಳಿ ನಡೆಸಿದ ಆರೋಪದ ಮೇರೆಗೆ 45 ವರ್ಷದ ವ್ಯಕ್ತಿಯೊಬ್ಬನನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ.

ಶನಿವಾರ ಮಧ್ಯರಾತ್ರಿ ಬಂಧಿಸಲಾಗಿರುವ ವ್ಯಕ್ತಿಯನ್ನು ಕೆ. ವಿ ಮನೋಜ್ ಎಂದು ಗುರುತಿಸಲಾಗಿದೆ. ಈತ ಹೋಟೆಲ್ ವೊಂದರ ಮಾಜಿ ನೌಕರನಾಗಿದ್ದು, ಕೇರಳದ ಪಯ್ಯನೂರು ಗ್ರಾಮದ ನಿವಾಸಿ ಎನ್ನಲಾಗಿದೆ. ಆರೋಪಿ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದು, ತಿರುವನಂತಪುರಂ ರೈಲು ನಿಲ್ದಾಣದ ಬಳಿ ಕಸ್ಟಡಿಗೆ ಪಡೆಯಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. 

ಮನೋಜ್ ಸಮಸ್ಯೆಗೆ ಕೇಂದ್ರ ಸಚಿವರು ಪರಿಹಾರ ದೊರಕಿಸದ ಹಿನ್ನೆಲೆಯಲ್ಲಿ ಅವರ ಮನೆ ಮೇಲೆ ದಾಳಿ ನಡೆಸಿದ್ದು, ಮನೆಯಲ್ಲಿನ ಕಿಟಕಿ, ಗಾಜುಗಳಿಗೆ ಹಾನಿಯುಂಟು ಮಾಡಲಾಗಿದೆ. ದಾಳಿ ವೇಳೆ ಯಾವುದೇ ಕಳ್ಳತನದ ಪ್ರಯತ್ನ ನಡೆದಿಲ್ಲ. ಮನೆಯಲ್ಲಿ ಯಾವುದೇ ಬೆಲೆಬಾಳುವ ವಸ್ತುಗಳು ಕಾಣೆಯಾದ ಬಗ್ಗೆ ವರದಿಯಾಗಿಲ್ಲ ಮತ್ತು ಯಾವುದೇ ಪ್ರಯತ್ನಗಳನ್ನು ಮಾಡಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. 

ಮನೆಯ ಕಿಟಕಿ, ಗಾಜುಗಳು ಮುರಿದಿರುವ ಚಿತ್ರ

ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ದಾಳಿಯ ನಂತರ ಮನೋಜ್ ಮನೆಯಿಂದ ಹೊರಬಂದಿರುವುದು ಪೊಲೀಸರಿಗೆ ಕಂಡುಬಂದಿದೆ. ದಾಳಿ ವೇಲೆ ಉಳ್ಳೂರಿನ ಮನೆಯ ಮುಂಭಾಗದ ಕಿಟಕಿ ಗಾಜುಗಳು ಪುಡಿಪುಡಿಯಾಗಿವೆ. ಕಿಟಕಿಯ ಗಾಜುಗಳನ್ನು ಗುರಿಯಾಗಿಸಲು ಬಳಸಲಾದ ಕಲ್ಲು ಮತ್ತು ರಕ್ತದ ಕಲೆಗಳನ್ನು ಪೊಲೀಸರು ಸ್ಥಳದಲ್ಲಿ ವಶಕ್ಕೆ ಪಡೆದಿದ್ದಾರೆ.

 ಘಟನೆ ನಡೆದಾಗ ಸಚಿವರು ಮನೆಯಲ್ಲಿ ಇರಲಿಲ್ಲ. ಮುರಳೀಧರನ್ ಅವರು ತಿರುವನಂತಪುರಂನಲ್ಲಿರುವಾಗ ಸಾಮಾನ್ಯವಾಗಿ ಈ ಮನೆಯಲ್ಲಿಯೇ ಇರುತ್ತಾರೆ ಮತ್ತು ಅವರ ಕಚೇರಿಯು ಮನೆಯ ಹಿಂಭಾಗದಲ್ಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT