ಸಾಂದರ್ಭಿಕ ಚಿತ್ರ 
ದೇಶ

ತಿರುವನಂತಪುರಂ: ಕೇಂದ್ರ ಸಚಿವ ವಿ. ಮುರಳೀಧರನ್ ಮನೆ ಮೇಲೆ ದಾಳಿ, ವ್ಯಕ್ತಿ ಬಂಧನ

ಕೇಂದ್ರ ಸಚಿವ ವಿ.ಮುರಳೀಧರನ್ ಅವರ ಮನೆ ಮೇಲೆ ಗುರುವಾರ ದಾಳಿ ನಡೆಸಿದ ಆರೋಪದ ಮೇರೆಗೆ 45 ವರ್ಷದ ವ್ಯಕ್ತಿಯೊಬ್ಬನನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ.

ತಿರುವನಂತಪುರಂ: ಕೇಂದ್ರ ಸಚಿವ ವಿ.ಮುರಳೀಧರನ್ ಅವರ ಮನೆ ಮೇಲೆ ಗುರುವಾರ ದಾಳಿ ನಡೆಸಿದ ಆರೋಪದ ಮೇರೆಗೆ 45 ವರ್ಷದ ವ್ಯಕ್ತಿಯೊಬ್ಬನನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ.

ಶನಿವಾರ ಮಧ್ಯರಾತ್ರಿ ಬಂಧಿಸಲಾಗಿರುವ ವ್ಯಕ್ತಿಯನ್ನು ಕೆ. ವಿ ಮನೋಜ್ ಎಂದು ಗುರುತಿಸಲಾಗಿದೆ. ಈತ ಹೋಟೆಲ್ ವೊಂದರ ಮಾಜಿ ನೌಕರನಾಗಿದ್ದು, ಕೇರಳದ ಪಯ್ಯನೂರು ಗ್ರಾಮದ ನಿವಾಸಿ ಎನ್ನಲಾಗಿದೆ. ಆರೋಪಿ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದು, ತಿರುವನಂತಪುರಂ ರೈಲು ನಿಲ್ದಾಣದ ಬಳಿ ಕಸ್ಟಡಿಗೆ ಪಡೆಯಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. 

ಮನೋಜ್ ಸಮಸ್ಯೆಗೆ ಕೇಂದ್ರ ಸಚಿವರು ಪರಿಹಾರ ದೊರಕಿಸದ ಹಿನ್ನೆಲೆಯಲ್ಲಿ ಅವರ ಮನೆ ಮೇಲೆ ದಾಳಿ ನಡೆಸಿದ್ದು, ಮನೆಯಲ್ಲಿನ ಕಿಟಕಿ, ಗಾಜುಗಳಿಗೆ ಹಾನಿಯುಂಟು ಮಾಡಲಾಗಿದೆ. ದಾಳಿ ವೇಳೆ ಯಾವುದೇ ಕಳ್ಳತನದ ಪ್ರಯತ್ನ ನಡೆದಿಲ್ಲ. ಮನೆಯಲ್ಲಿ ಯಾವುದೇ ಬೆಲೆಬಾಳುವ ವಸ್ತುಗಳು ಕಾಣೆಯಾದ ಬಗ್ಗೆ ವರದಿಯಾಗಿಲ್ಲ ಮತ್ತು ಯಾವುದೇ ಪ್ರಯತ್ನಗಳನ್ನು ಮಾಡಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. 

ಮನೆಯ ಕಿಟಕಿ, ಗಾಜುಗಳು ಮುರಿದಿರುವ ಚಿತ್ರ

ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ದಾಳಿಯ ನಂತರ ಮನೋಜ್ ಮನೆಯಿಂದ ಹೊರಬಂದಿರುವುದು ಪೊಲೀಸರಿಗೆ ಕಂಡುಬಂದಿದೆ. ದಾಳಿ ವೇಲೆ ಉಳ್ಳೂರಿನ ಮನೆಯ ಮುಂಭಾಗದ ಕಿಟಕಿ ಗಾಜುಗಳು ಪುಡಿಪುಡಿಯಾಗಿವೆ. ಕಿಟಕಿಯ ಗಾಜುಗಳನ್ನು ಗುರಿಯಾಗಿಸಲು ಬಳಸಲಾದ ಕಲ್ಲು ಮತ್ತು ರಕ್ತದ ಕಲೆಗಳನ್ನು ಪೊಲೀಸರು ಸ್ಥಳದಲ್ಲಿ ವಶಕ್ಕೆ ಪಡೆದಿದ್ದಾರೆ.

 ಘಟನೆ ನಡೆದಾಗ ಸಚಿವರು ಮನೆಯಲ್ಲಿ ಇರಲಿಲ್ಲ. ಮುರಳೀಧರನ್ ಅವರು ತಿರುವನಂತಪುರಂನಲ್ಲಿರುವಾಗ ಸಾಮಾನ್ಯವಾಗಿ ಈ ಮನೆಯಲ್ಲಿಯೇ ಇರುತ್ತಾರೆ ಮತ್ತು ಅವರ ಕಚೇರಿಯು ಮನೆಯ ಹಿಂಭಾಗದಲ್ಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಕೋಗಿಲು ಪ್ರಕರಣ' ಈಗ ಅಂತಾರಾಷ್ಟ್ರೀಯ ವಿಚಾರ: ಪಾಕ್ ಕ್ಯಾತೆ; ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ಕಿಡಿ; ಸಚಿವ ಜಮೀರ್ ಹೇಳಿದ್ದು ಏನು?

'ಸ್ವಂತ ತಮ್ಮನ ಮಗನಿಗೆ ಮಗಳನ್ನು ಕೊಟ್ಟು ಮದುವೆ' ಮಾಡಿದ ಪಾಕ್ ಸೇನಾ ಮುಖ್ಯಸ್ಥ! ಇದರಲ್ಲಿಯೂ ಒಳ ಸಂಚು?

ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ; G RAM G ಕಾಯ್ದೆ ಅನುಷ್ಠಾನಗೊಳಿಸದಂತೆ ಆಗ್ರಹ

ಹೊಸ ವರ್ಷದಲ್ಲಿ ಶುಭಸುದ್ದಿ? ನಾಯಕತ್ವ ಬದಲಾವಣೆ ಬಗ್ಗೆ ಡಿಕೆಶಿ ಹೇಳಿದ್ದೇನು?

'ಬಾಂಗ್ಲಾದೇಶ ಮೂಲದ ಸಂಘಟನೆಯೊಂದಿಗೆ' ನಂಟು: ಅಸ್ಸಾಂ, ತ್ರಿಪುರಾದಲ್ಲಿ 11 ಜನರ ಬಂಧನ

SCROLL FOR NEXT