ಸಾಂದರ್ಭಿಕ ಚಿತ್ರ 
ದೇಶ

ಮಹಾರಾಷ್ಟ್ರ: ಟವರ್‌ ವ್ಯಾಗನ್‌ ಡಿಕ್ಕಿ ಹೊಡೆದು ನಾಲ್ವರು ರೈಲ್ವೆ ಟ್ರ್ಯಾಕ್‌ಮ್ಯಾನ್‌ಗಳು ಸಾವು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿ ಸೋಮವಾರ ಟವರ್ ವ್ಯಾಗನ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ರೈಲ್ವೆ ಟ್ರ್ಯಾಕ್‌ಮೆನ್‌ಗಳು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಾಸಿಕ್: ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿ ಸೋಮವಾರ ಟವರ್ ವ್ಯಾಗನ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ರೈಲ್ವೆ ಟ್ರ್ಯಾಕ್‌ಮೆನ್‌ಗಳು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟವರ್ ವ್ಯಾಗನ್ ಅನ್ನು ಎಲೆಕ್ಟ್ರಿಫೈಡ್ ವಿಭಾಗಗಳಲ್ಲಿ ಅತಿ ಎತ್ತರದಲ್ಲಿರುವ ಉಪಕರಣಗಳ ನಿರ್ವಹಣೆಗಾಗಿ ಬಳಸಲಾಗುತ್ತದೆ. ಮಧ್ಯ ರೈಲ್ವೆಯ ಲಾಸಲ್‌ಗಾಂವ್ ಮತ್ತು ಉಗಾಂವ್ ನಿಲ್ದಾಣಗಳ ನಡುವೆ ಇಂದು ಬೆಳಗ್ಗೆ 5.45 ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟ್ರ್ಯಾಕ್‌ಮೆನ್‌ಗಳು ಕೆಲಸ ಮಾಡುತ್ತಿದ್ದಾಗ ರಾಂಗ್ ಸೈಡ್‌ನಿಂದ ಬಂದ ಟವರ್ ವ್ಯಾಗನ್ ಅವರಿಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಘಟನೆ ಕುರಿತು ಮಾಹಿತಿ ಪಡೆದ ಲಾಸಲ್‌ಗಾಂವ್‌ ಪೊಲೀಸ್‌ ತಂಡ ಸ್ಥಳಕ್ಕೆ ಧಾವಿಸಿದೆ. ಪೊಲೀಸರು ವ್ಯಾಗನ್ ಚಾಲಕನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.

ಮೃತರನ್ನು ಸಂತೋಷ್ ಭೌರಾವ್ ಕೇದಾರೆ(38), ದಿನೇಶ್ ಸಹದು ದಾರಾಡೆ(35), ಕೃಷ್ಣ ಆತ್ಮರಾಮ್ ಅಹಿರೆ(40) ಮತ್ತು ಸಂತೋಷ್ ಸುಖದೇವ್ ಶಿರ್ಸಾತ್(38) ಎಂದು ಗುರುತಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT