ಪ್ರಾತಿನಿಧಿಕ ಚಿತ್ರ 
ದೇಶ

ಕೆಮ್ಮುತ್ತಿದ್ದ ಎರಡು ತಿಂಗಳ ಹೆಣ್ಣು ಮಗುವಿಗೆ ಬಿಸಿ ಕಬ್ಬಿಣದ ರಾಡ್‌ನಿಂದ ಬರೆ; ನಕಲಿ ವೈದ್ಯನ ಬಂಧನ

ಗುಜರಾತ್‌ನ ಪೋರಬಂದರ್ ಜಿಲ್ಲೆಯಲ್ಲಿ ಕೆಮ್ಮಿಗೆ ಚಿಕಿತ್ಸೆ ನೀಡಲು ಎರಡು ತಿಂಗಳ ಹೆಣ್ಣು ಮಗುವಿಗೆ ನಕಲಿ ವೈದ್ಯರು ಬಿಸಿಯಾದ ಕಬ್ಬಿಣದ ರಾಡ್‌ನಿಂದ ಬರೆ ಎಳೆದ ನಂತರ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಪೋರಬಂದರ್: ಗುಜರಾತ್‌ನ ಪೋರಬಂದರ್ ಜಿಲ್ಲೆಯಲ್ಲಿ ಕೆಮ್ಮಿಗೆ ಚಿಕಿತ್ಸೆ ನೀಡಲು ಎರಡು ತಿಂಗಳ ಹೆಣ್ಣು ಮಗುವಿಗೆ ನಕಲಿ ವೈದ್ಯರು ಬಿಸಿಯಾದ ಕಬ್ಬಿಣದ ರಾಡ್‌ನಿಂದ ಬರೆ ಎಳೆದ ನಂತರ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಆರೋಪಿಯನ್ನು ಭಾನುವಾರ ಬಂಧಿಸಲಾಗಿದ್ದು, ಆತನ ಮತ್ತು ಮಗುವಿನ ತಾಯಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಸುರ್ಜೀತ್ ಮಹೇದು ತಿಳಿಸಿದ್ದಾರೆ.

ಮಗುವನ್ನು ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ (ಐಸಿಯು) ದಾಖಲಿಸಲಾಗಿದೆ. ಆಕೆಯನ್ನು ನಿಗಾದಲ್ಲಿರಿಸಲಾಗಿದ್ದು, ಆಕೆಯ ಸ್ಥಿತಿ ಸ್ಥಿರವಾಗಿದೆ ಎಂದು ವರದಿಯಾಗಿದೆ.

ಒಂದು ವಾರದ ಹಿಂದೆ ಮಗು ಕೆಮ್ಮು ಮತ್ತು ಕಫದಿಂದ ಬಳಲುತ್ತಿದ್ದು, ಆಕೆಯ ಪೋಷಕರು ಮನೆಯಲ್ಲಿ ಸ್ಥಳೀಯ ನಾಟಿ ಚಿಕಿತ್ಸೆ ನೀಡಿಸಲು ಪ್ರಯತ್ನಿಸಿದರು. ಆದರೆ, ಆಕೆಗೆ ಪರಿಹಾರ ಸಿಕ್ಕಿಲ್ಲ. ನಂತರ, ಮಗುವಿನ ತಾಯಿ ಅವಳನ್ನು ದೇವರಾಜಭಾಯ್ ಕಟಾರಾ ಬಳಿಗೆ ಕರೆದೊಯ್ದಿದ್ದಾರೆ ಎಂದು ಮಹೇದು ಹೇಳಿದರು.

ಕತಾರಾ, ಮಗುವಿನ ಎದೆ ಮತ್ತು ಹೊಟ್ಟೆಯ ಮೇಲೆ ಬಿಸಿಯಾದ ಕಬ್ಬಿಣದ ರಾಡ್‌ನಿಂದ ಬರೆ ಎಳೆದಿದ್ದಾರೆ. ಅದರಿಂದಲೂ ಪ್ರಯೋಜನವಾಗದಿದ್ದಾಗ, ಪೋಷಕರು ಮಗುವನ್ನು ಪೋರಬಂದರ್‌ನ ಭಾವಸಿಂಹಜಿ ಜನರಲ್ ಆಸ್ಪತ್ರೆಗೆ ಕರೆದೊಯ್ದಾಗ ವಿಚಾರ ಬೆಳಕಿಗೆ ಬಂದಿದೆ ಎಂದು ಅವರು ಹೇಳಿದರು.

ಶಿಶುವಿನ ತಂದೆ ನೀಡಿದ ದೂರಿನ ಆಧಾರದ ಮೇಲೆ, ಭಾರತೀಯ ದಂಡ ಸಂಹಿತೆ ಸೆಕ್ಷನ್ 324 (ಸಾವಿಗೆ ಕಾರಣವಾಗುವ ಯಾವುದೇ ಸಾಧನದ ಮೂಲಕ ಸ್ವಯಂಪ್ರೇರಣೆಯಿಂದ ಗಾಯಗೊಳಿಸುವುದು) ಮತ್ತು ಇತರ ನಿಬಂಧನೆಗಳ ಅಡಿಯಲ್ಲಿ ಕತಾರಾ ಮತ್ತು ಮಗುವಿನ ತಾಯಿಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಪೋರಬಂದರ್‌ನಲ್ಲಿರುವ ಆಸ್ಪತ್ರೆಯ ಐಸಿಯುನಲ್ಲಿ ದಾಖಲಾಗಿರುವ ಮಗುವಿನ ಸ್ಥಿತಿ ಸ್ಥಿರವಾಗಿದೆ ಎಂದು ಅವರು ಹೇಳಿದರು.

ಫೆಬ್ರುವರಿ 9 ರಂದು ಉಸಿರಾಟದ ತೊಂದರೆಯೊಂದಿಗೆ ಮಗುವನ್ನು ಆಸ್ಪತ್ರೆಗೆ ಕರೆತರಲಾಯಿತು. ಆಕೆಯನ್ನು ಐಸಿಯುನಲ್ಲಿಟ್ಟು ಆಕ್ಸಿಜನ್ ಬೆಂಬಲ ನೀಡಲಾಗಿದ್ದು, ಚಿಕಿತ್ಸೆಯ ಸಮಯದಲ್ಲಿ, ಆಕೆಯ ಎದೆಯ ಮೇಲೆ ಬರೆ ಎಳೆದಿರುವುದನ್ನು ನಾವು ಕಂಡುಕೊಂಡಿದ್ದೇವೆ ಎಂದು ಜನರಲ್ ಆಸ್ಪತ್ರೆಯ ಡಾ ಜೈ ಬದಿಯಾನಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಈ ತಿಂಗಳ ಆರಂಭದಲ್ಲಿ, ಮಧ್ಯಪ್ರದೇಶದ ಶಾಹದೋಲ್ ಜಿಲ್ಲೆಯಲ್ಲಿ ಎರಡೂವರೆ ತಿಂಗಳ ಬಾಲಕಿಗೆ ಭೂತ ಬಿಡಿಸುವವನಿಂದ 50ಕ್ಕೂ ಹೆಚ್ಚು ಬಾರಿ ಬಿಸಿಯಾದ ಕಬ್ಬಿಣದ ರಾಡ್‌ನಿಂದ ಎಳೆಸಿಕೊಂಡ ನಂತರ ಮೃತಪಟ್ಟಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

3 ತಿಂಗಳ ಹೆಣ್ಣು ಮಗುವಿಗೆ ಕಾದ ಕಬ್ಬಿಣದ ರಾಡ್‌ನಿಂದ ಬರೆ ಎಳೆದ ಮತ್ತೊಂದು ಪ್ರಕರಣವೂ ಶಹದೋಲ್‌ನಲ್ಲಿ ಬೆಳಕಿಗೆ ಬಂದಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT