ಸಂಗ್ರಹ ಚಿತ್ರ 
ದೇಶ

ಪ್ರೇಮಿಗಳ ದಿನದಂದೆ ದೆಹಲಿಯ ಡಾಬಾದ ಫ್ರಿಜ್ ನಲ್ಲಿ ಯುವತಿಯ ಮೃತದೇಹ ಪತ್ತೆ!

ಪ್ರೇಮಿಗಳ ದಿನದಂದು ಜನರು ಪರಸ್ಪರ ಪ್ರೀತಿಯನ್ನು ವ್ಯಕ್ತಪಡಿಸುತ್ತಿರುವಾಗ, ದೆಹಲಿಯಲ್ಲಿ ಪ್ರೇಮಕಥೆಯ ಭಯಾನಕ ಘಟನೆಯೊಂದು ಮುನ್ನೆಲೆಗೆ ಬಂದಿದೆ. 

ಪ್ರೇಮಿಗಳ ದಿನದಂದು ಜನರು ಪರಸ್ಪರ ಪ್ರೀತಿಯನ್ನು ವ್ಯಕ್ತಪಡಿಸುತ್ತಿರುವಾಗ, ದೆಹಲಿಯಲ್ಲಿ ಪ್ರೇಮಕಥೆಯ ಭಯಾನಕ ಘಟನೆಯೊಂದು ಮುನ್ನೆಲೆಗೆ ಬಂದಿದೆ. 

ಐದು ವರ್ಷಗಳ ಹಿಂದಿನ ಸಂಬಂಧವನ್ನು ಮುರಿದು ಬೇರೆ ಹುಡುಗಿಯನ್ನು ಮದುವೆಯಾಗಲು ಬಯಸಿದ್ದು ಇದನ್ನು ಗೆಳತಿ ವಿರೋಧಿಸಿದಾಗ ಪ್ರಿಯಕರ ಆಕೆಯ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಕಾರಿನಲ್ಲಿ ಕೊಲೆ ಮಾಡಿ ಶವವನ್ನು ಫ್ರಿಡ್ಜ್‌ನಲ್ಲಿ ಬಚ್ಚಿಟ್ಟು ಬೇರೆ ಹುಡುಗಿಯನ್ನು ಮದುವೆಯಾಗಿದ್ದ. ಉತ್ತಮ್‌ನಗರದ ಡಾಬಾದಲ್ಲಿ ಇರಿಸಲಾಗಿದ್ದ ರೆಫ್ರಿಜರೇಟರ್‌ನಿಂದ ಮೃತದೇಹ ಪತ್ತೆಯಾಗಿದ್ದು, ಘಟನೆಗೆ ತೆರೆ ಎಳೆಯಲಾಗಿದೆ. ಆರೋಪಿ ಸಾಹಿಲ್ ಗೆಹ್ಲೋಟ್ ನನ್ನು ಪೊಲೀಸರು ಬಂಧಿಸಿದ್ದಾರೆ.

ದೆಹಲಿ ಪೊಲೀಸರಿಗೆ ಯುವತಿಯ ಕೊಲೆ ಮಾಡಲಾಗಿದ್ದು ಆಕೆಯ ಶವವನ್ನು ಉತ್ತಮ್ ನಗರದ ಮಿತ್ರೌ ಗ್ರಾಮದ ಡಾಬಾದಲ್ಲಿ ಇರಿಸಲಾಗಿದೆ ಎಂದು ಮಾಹಿತಿ ಸಿಕ್ಕಿತ್ತು. ತಕ್ಷಣ ಪೊಲೀಸರು ಸ್ಥಳಕ್ಕೆ ಧಾವಿಸಿ ಶವವನ್ನು ಹೊರತೆಗೆದಿದ್ದಾರೆ. ಪ್ರಾಥಮಿಕ ತನಿಖೆಯ ನಂತರವೇ ಪೊಲೀಸರು ಮಿತ್ರೌ ನಿವಾಸಿ ಮತ್ತು ಡಾಬಾದ ಮಾಲೀಕ ಸಾಹಿಲ್ ಗೆಹ್ಲೋಟ್ ನನ್ನು ಬಂಧಿಸಿದ್ದಾರೆ. ಪ್ರಾಥಮಿಕ ವಿಚಾರಣೆಯಲ್ಲಿ ಆರೋಪಿಯು ಬೇರೊಬ್ಬ ಹುಡುಗಿಯನ್ನು ಮದುವೆಯಾಗಲು ಬಯಸಿದ್ದು, ಸಂತ್ರಸ್ತೆ ವಿರೋಧಿಸುತ್ತಿದ್ದಳು ಎಂದು ಪೊಲೀಸರಿಗೆ ತಿಳಿದು ಬಂದಿದೆ. ಕಾಶ್ಮೀರೆ ಗೇಟ್ ಐಎಸ್‌ಬಿಟಿ ಬಳಿ ಕಾರಿನೊಳಗೆ ಯುವತಿಯ ಕತ್ತು ಹಿಸುಕಿ ಕೊಲೆ ಮಾಡಲಾಗಿದ್ದು, ಬಳಿಕ ಮೃತದೇಹದೊಂದಿಗೆ ಮಿತ್ರೌ ತಲುಪಿದ್ದಾನೆ.

ಇಬ್ಬರೂ 2018ರಿಂದ ಸ್ನೇಹಿತರಾಗಿದ್ದರು. ಆದರೆ ಇತ್ತೀಚೆಗಷ್ಟೇ ಸಾಹಿಲ್ ಮತ್ತೊಬ್ಬ ಹುಡುಗಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದನು. ಫೆಬ್ರವರಿ 10ರಂದು ಮದುವೆ ನಿಶ್ಚಯವಾಗಿತ್ತು. ಈ ವಿಷಯ ತಿಳಿದ ಹುಡುಗಿ ಹಾಸಿಲ್‌ಗೆ ಕರೆ ಮಾಡಿ ನಿಶ್ಚಿತಾರ್ಥ ಮುರಿದುಕೊಳ್ಳುವಂತೆ ಒತ್ತಡ ಹೇರಿದ್ದಳು. ಈ ವೇಳೆ ಇಬ್ಬರ ನಡುವೆ ವಾಗ್ವಾದ ನಡೆದಿದೆ. ನಂತರ ಬಾಲಕಿಯನ್ನು ಕಾರಿನಲ್ಲಿ ಕರೆದುಕೊಂಡು ಕಾಶ್ಮೀರ ಗೇಟ್ ಪಾರ್ಕಿಂಗ್ ಬಳಿ ತಲುಪಿದ್ದಾನೆ. ಇಲ್ಲಿ ಆಕೆಯ ಕತ್ತು ಹಿಸುಕಿ ಕೊಲೆ ಮಾಡಿ ನಂತರ ಇಲ್ಲಿಂದ ಉತ್ತಮ್ ನಗರಕ್ಕೆ ಹೋಗಿ ಶವವನ್ನು ಢಾಬಾದ ರೆಫ್ರಿಜರೇಟರ್ ನಲ್ಲಿಟ್ಟಿದ್ದಾನೆ. 9-10 ರ ಮಧ್ಯರಾತ್ರಿ ಕೊಲೆ ಮಾಡಿದ ನಂತರ, ಮರುದಿನ ಫೆಬ್ರವರಿ 10ರಂದು ಆರೋಪಿಗಳು ಮದುವೆಯಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT