ಅದಾನಿ 
ದೇಶ

ಅದಾನಿ ಸಮೂಹ ಸಂಸ್ಥೆಗಳ ವಿರುದ್ಧ ತನಿಖೆಗಾಗಿ 'ಸುಪ್ರೀಂ' ಮೆಟ್ಟಿಲೇರಿದ ಕಾಂಗ್ರೆಸ್ ನಾಯಕಿ

ಹಿಂಡೆನ್‌ಬರ್ಗ್ ಸಂಶೋಧನಾ ವರದಿ ಬಹಿರಂಗಪಡಿಸಿದ ಹಿನ್ನೆಲೆಯಲ್ಲಿ ಅದಾನಿ ಸಮೂಹ ಮತ್ತು ಅದರ ಸಹಚರರ ವಿರುದ್ಧ ತನಿಖೆ ನಡೆಸುವಂತೆ ಕಾಂಗ್ರೆಸ್ ನಾಯಕಿ ಜಯಾ ಠಾಕೂರ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. 

ನವದೆಹಲಿ: ಹಿಂಡೆನ್‌ಬರ್ಗ್ ಸಂಶೋಧನಾ ವರದಿ ಬಹಿರಂಗಪಡಿಸಿದ ಹಿನ್ನೆಲೆಯಲ್ಲಿ ಅದಾನಿ ಸಮೂಹ ಮತ್ತು ಅದರ ಸಹಚರರ ವಿರುದ್ಧ ತನಿಖೆ ನಡೆಸುವಂತೆ ಕಾಂಗ್ರೆಸ್ ನಾಯಕಿ ಜಯಾ ಠಾಕೂರ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. 

ಮಧ್ಯಪ್ರದೇಶ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜಯಾ ಠಾಕೂರ್ ವಕೀಲ ವರೀಂದರ್ ಕುಮಾರ್ ಶರ್ಮಾ ಮೂಲಕ ತಮ್ಮ ಮನವಿ ಸಲ್ಲಿಸಿದ್ದಾರೆ. ಸಾರ್ವಜನಿಕರು ಮತ್ತು ಸರ್ಕಾರದ ಬೊಕ್ಕಸಕ್ಕೆ ಕೋಟಿಗಟ್ಟಲೆ ಹಣವನ್ನು ಲಪಟಾಯಿಸಿರುವ ಅದಾನಿ ಸಮೂಹ ಸಂಸ್ಥೆಗಳು ಮತ್ತು ಅದರ ಸಹಚರರ ವಿರುದ್ಧ ತನಿಖೆ ನಡೆಸಬೇಕೆಂದು ಅರ್ಜಿದಾರರು  ಒತ್ತಾಯಿಸಿದ್ದಾರೆ.

ಸುಪ್ರೀಂ ಕೋರ್ಟ್ ನ ಹಾಲಿ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ಸಿಬಿಐ, ಇಡಿ, ಕಂದಾಯ ಗುಪ್ತಚರ ನಿರ್ದೇಶನಾಲಯ, ನೇರ ತೆರಿಗೆಗಳ ಕೇಂದ್ರೀಯ ಮಂಡಳಿ, ಇಐಬಿ, ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ, ಸೆಬಿ ಮತ್ತಿತರ ಕೇಂದ್ರೀಯ ತನಿಖಾ ಸಂಸ್ಥೆಗಳಿಂದ  ತನಿಖೆಗೆ ಕೋರಿದ್ದಾರೆ. 

ಅದಾನಿ ಎಂಟರ್‌ಪ್ರೈಸಸ್‌ ಭಾರಿ ಮೊತ್ತದ ಸಾರ್ವಜನಿಕ ಹಣವನ್ನು ಹೂಡಿಕೆ ಮಾಡುವಲ್ಲಿ ಭಾರತೀಯ ಜೀವ ವಿಮಾ ನಿಗಮ ಮತ್ತು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಪಾತ್ರ ಕುರಿತು ತನಿಖೆ ಮಾಡಲು ತನಿಖಾ ಸಂಸ್ಥೆಗಳಿಗೆ ನಿರ್ದೇಶಿಸುವಂತೆ ಅವರು ಉನ್ನತ ನ್ಯಾಯಾಲಯದಲ್ಲಿ ಮನವಿ ಮಾಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

SCROLL FOR NEXT