ಸಾಂದರ್ಭಿಕ ಚಿತ್ರ 
ದೇಶ

ವ್ಯಾಲೆಂಟೇನ್ಸ್‌ ಡೇ: ಪಾರ್ಕ್ ನಲ್ಲಿ ಕುಳಿತಿದ್ದ ದಂಪತಿ ಮೇಲೆ ಭಜರಂಗ ದಳ ಕಾರ್ಯಕರ್ತರ ದಾಳಿ

ಪ್ರೇಮಿಗಳ ದಿನಾಚರಣೆ ವಿರುದ್ಧವಾಗಿ ಪ್ರತಿಭಟನೆ ನಡೆಸಲು ಸೆಂಟ್ರಲ್ ವಿಸ್ಟಾ ಗಾರ್ಡನ್ ಒಳಗಡೆ ಆಗಮಿಸಿದ ಭಜರಂಗ ದಳ ಕಾರ್ಯಕರ್ತರು, ದಂಪತಿ ಮೇಲೆ ದಾಳಿ ನಡೆಸಿದ್ದು, ಅಲ್ಲಿಂದ ಅವರನ್ನು ಓಡಿಸಿದ್ದಾರೆ.

ಗಾಂಧಿನಗರ: ಪ್ರೇಮಿಗಳ ದಿನವಾದ ಇಂದು  ಪಾರ್ಕ್ ನಲ್ಲಿ ಕುಳಿತಿದ್ದ ದಂಪತಿ ಮೇಲೆ ಬಲಪಂಥೀಯ ಭಜರಂಗ ದಳ ಕಾರ್ಯಕರ್ತರು ದಾಳಿ ನಡೆಸಿರುವ ಘಟನೆ ಗುಜರಾತ್ ರಾಜಧಾನಿ ಗಾಂಧಿನಗರದಲ್ಲಿ ನಡೆದಿದೆ. ಪ್ರೇಮಿಗಳ ದಿನಾಚರಣೆ ವಿರುದ್ಧವಾಗಿ ಪ್ರತಿಭಟನೆ ನಡೆಸಲು ಸೆಂಟ್ರಲ್ ವಿಸ್ಟಾ ಗಾರ್ಡನ್ ಒಳಗಡೆ ಆಗಮಿಸಿದ ಭಜರಂಗ ದಳ ಕಾರ್ಯಕರ್ತರು, ದಂಪತಿ ಮೇಲೆ ದಾಳಿ ನಡೆಸಿದ್ದು, ಅಲ್ಲಿಂದ ಅವರನ್ನು ಓಡಿಸಿದ್ದಾರೆ.

ಪ್ರತಿಪಕ್ಷ ಕಾಂಗ್ರೆಸ್ ಈ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತಿದ್ದಂತೆಯೇ ಕಾರ್ಯಪ್ರವೃತ್ತರಾದ ಪೊಲೀಸರು, ಪ್ರೇಮಿಗಳ ದಿನದ ವಿರುದ್ಧ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಭಜರಂಗದಳ ಕಾರ್ಯಕರ್ತರಿಗೆ ಸಮನ್ಸ್ ನೀಡಿದ್ದಾರೆ.  ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಘಟನೆಯ ವೀಡಿಯೊದಲ್ಲಿ, ಸುಮಾರು 10 ಭಜರಂಗದಳ ಕಾರ್ಯಕರ್ತರು ದೊಣ್ಣೆಗಳೊಂದಿಗೆ ಘೋಷಣೆ ಕೂಗುತ್ತಾ ಪಾರ್ಕ್ ನಲ್ಲಿ ಕುಳಿತಿದ್ದ ದಂಪತಿಯನ್ನು ಓಡಿಸಿರುವ ದೃಶ್ಯವಿದೆ. 

ಪ್ರೇಮಿಗಳ ದಿನಾಚರಣೆ ಪಾಶ್ಚಿಮಾತ್ಯ ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತದೆ ಆದ್ದರಿಂದ ಇದಕ್ಕೆ ವಿರೋಧ ವ್ಯಕ್ತಪಡಿಸಲು ಪಾರ್ಕ್ ಒಳಗಡೆ ಹೋಗಿರುವುದಾಗಿ ಭಜರಂಗದಳ ಗಾಂಧಿನಗರ ಘಟಕದ ಸಂಚಾಲಕ ಶಕ್ತಿಸಿನ್ಹಾ ಝಲಾ ಹೇಳಿದ್ದಾರೆ. 
ಬಲಪಂಥೀಯ ಸಂಘಟನೆಯು ಪ್ರೀತಿಯ ಹೆಸರಿನಲ್ಲಿ ಅಶ್ಲೀಲತೆ" ಪ್ರದರ್ಶನಕ್ಕೆ ವಿರುದ್ಧವಾಗಿದೆ ಎಂದು ಅವರು ಸಮರ್ಥಿಸಿಕೊಂಡಿದ್ದಾರೆ.

"ನಾವು ಯಾರಿಗೂ ಕಿರುಕುಳ ನೀಡಿಲ್ಲ,ಜನರು ಇಂದು ಪ್ರೀತಿಯ ಹೆಸರಿನಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದಾರೆ. ಹಿಂದೂ ಜನತೆಗೆ ಸರಿಯಾದ ಮಾರ್ಗ ತೋರಿಸುವುದು ನಮ್ಮ ಕರ್ತವ್ಯ ಹಾಗಾಗೀ ಪಾರ್ಕ್ ಒಳಗಡೆ ಹೋಗಿರುವುದಾಗಿ ಅವರು ತಿಳಿಸಿದ್ದಾರೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT