ಬಿಜೆಪಿ-ಕಾಂಗ್ರೆಸ್ 
ದೇಶ

ರಾಜಕೀಯ ಪಕ್ಷಗಳ ದೇಣಿಗೆ ಭರ್ಜರಿ ಹೆಚ್ಚಳ: ಕಳೆದ ವರ್ಷ 614 ಕೋಟಿ ಸಂಗ್ರಹಿಸಿದ ಬಿಜೆಪಿ, ಕಾಂಗ್ರೆಸ್ ಗೆ ಕೇವಲ 95 ಕೋಟಿ

ರಾಷ್ಟ್ರೀಯ ರಾಜಕೀಯ ಪಕ್ಷಗಳಿಗೆ ನೀಡುವ ದೇಣಿಗೆಯಲ್ಲಿ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಕಳೆದ ವರ್ಷ ಆಡಳಿತರೂಢ ಬಿಜೆಪಿ ಬರೋಬ್ಬರಿ 614 ಕೋಟಿ ರೂಪಾಯಿ ಸಂಗ್ರಹಿಸುವ ಮೂಲಕ ಮೊದಲ ಸ್ಥಾನದಲ್ಲಿ.

ನವದೆಹಲಿ: ರಾಷ್ಟ್ರೀಯ ರಾಜಕೀಯ ಪಕ್ಷಗಳಿಗೆ ನೀಡುವ ದೇಣಿಗೆಯಲ್ಲಿ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಕಳೆದ ವರ್ಷ ಆಡಳಿತರೂಢ ಬಿಜೆಪಿ ಬರೋಬ್ಬರಿ 614 ಕೋಟಿ ರೂಪಾಯಿ ಸಂಗ್ರಹಿಸುವ ಮೂಲಕ ಮೊದಲ ಸ್ಥಾನದಲ್ಲಿ. ಇನ್ನೂ ದೇಶದ ಅತ್ಯಂತ ಹಳೆಯ ಪಕ್ಷ ಕಾಂಗ್ರೆಸ್ ಕೇವಲ ಕೇವಲ 95 ಕೋಟಿ ರೂ. ದೇಣಿಗೆ ಸಂಗ್ರಹ ಮಾಡಲಷ್ಟೇ ಶಕ್ತವಾಗಿದೆ ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್‌(ಎಡಿಆರ್) ಹೇಳಿದೆ.

ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್‌ ವರದಿಯ ಪ್ರಕಾರ, 2021-22ರ ಆರ್ಥಿಕ ವರ್ಷದಲ್ಲಿ ರಾಷ್ಟ್ರೀಯ ಪಕ್ಷಗಳಿಗೆ ಒಟ್ಟು 187.03 ಕೋಟಿ ರೂಪಾಯಿ ದೇಣಿಗೆ ಪಡೆದಿದ್ದು, ಇದು ಹಿಂದಿನ ಹಣಕಾಸು ವರ್ಷಕ್ಕಿಂತ ಶೇ 31.50 ರಷ್ಟು ಹೆಚ್ಚಳವಾಗಿದೆ.

ಬಿಜೆಪಿಯು ಒಟ್ಟು 4,957 ದೇಣಿಗೆಗಳ ಮೂಲಕ ಒಟ್ಟು 614.63 ಕೋಟಿ ರೂ. ಸಂಗ್ರಹ ಮಾಡಿರೋದಾಗಿ ಘೋಷಿಸಿದೆ. ಇನ್ನು ಕಾಂಗ್ರೆಸ್ ಪಕ್ಷವು 1,255 ದೇಣಿಗೆಗಳ ಮೂಲಕ ಒಟ್ಟು 95.46 ಕೋಟಿ ರೂ. ಸಂಗ್ರಹ ಮಾಡಿರೋದಾಗಿ ಘೋಷಿಸಿದೆ.

ಬಿಜೆಪಿಯು ಘೋಷಣೆ ಮಾಡಿರುವ ಒಟ್ಟು ದೇಣಿಗೆಯ ಪ್ರಮಾಣ ಕಾಂಗ್ರೆಸ್ ಪಕ್ಷಕ್ಕಿಂತಾ 3 ಪಟ್ಟು ಅಧಿಕ ಇರೋದು ಕಂಡು ಬರುತ್ತೆ. ಇದಲ್ಲದೆ, ಎನ್‌ಸಿಪಿ, ಸಿಪಿಐ, ಸಿಪಿಎಂ, ಎನ್‌ಪಿಇಪಿ ಹಾಗೂ ಎಐಟಿಸಿ ಪಕ್ಷಗಳೂ ಕೂಡಾ ಅಲ್ಪ ಪ್ರಮಾಣದ ದೇಣಿಗೆ ಗಿಟ್ಟಿಸಿವೆ.

ಬಹುಜನ ಸಮಾಜ ಪಕ್ಷ(ಬಿಎಸ್ ಪಿ) ಕಳೆದ 16 ವರ್ಷಗಳಿಂದ ಘೋಷಿಸುತ್ತಿರುವಂತೆ 2021-22ರ ಅವಧಿಯಲ್ಲೂ ತನಗೆ 20,000 ರೂ.ಗಿಂತ ಮೇಲ್ಪಟ್ಟು ಯಾವೊಂದು ದೇಣಿಗೆಯೂ ಬಂದಿಲ್ಲ ಎಂದು ಘೋಷಿಸಿರುವುದಾಗಿ ಎಂದು ಎಡಿಆರ್ ವರದಿ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

'Toxic': ಸಿನಿಮಾ ಮಾಡುವುದು ಸುಲಭವಲ್ಲ, ಇಡೀ ಪ್ರಪಂಚದ ವಿರುದ್ಧ ಯುದ್ಧಕ್ಕೆ ಹೋದಂತೆ': ವದಂತಿಗಳ ನಡುವೆ ಆ ವ್ಯಕ್ತಿ ಬಂಡೆಯಂತೆ ನಿಂತರು- ಯಶ್!

Toxic: ಯಶ್ ಜೊತೆಗೆ ಕಿಯಾರಾ ಬೋಲ್ಡ್ ಅವತಾರ, ಟ್ರೋಲರ್ ಗಳ ಬಾಯಿ ಮುಚ್ಚಿಸಿದ ಪತಿ ಸಿದ್ಧಾರ್ಥ್ ಮಲ್ಹೋತ್ರಾ!

'ಕಳ್ಳಿ, ಕಳ್ಳಿ' ಅಂತಾ ಘೋಷಣೆ ಕೂಗಿ ಮಮತಾ ಬ್ಯಾನರ್ಜಿ ಕಾರಿನ ಮೇಲೆ ಕಲ್ಲು ತೂರಾಟ, ಕೆಸರು ಎರಚಿ ಆಕ್ರೋಶ! ಭಯಾನಕ Video