ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣ 
ದೇಶ

ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣ: 8 ಮಂದಿಗೆ ಮಧ್ಯಂತರ ಜಾಮೀನು

ಲಖಿಂಪುರ ಖೇರಿ ಹಿಂಸಾಚಾರದ ಎಂಟು ಆರೋಪಿಗಳಿಗೆ ಅಲಹಾಬಾದ್ ಹೈಕೋರ್ಟ್‌ನ ಲಖನೌ ಪೀಠವು ಮಧ್ಯಂತರ ಜಾಮೀನು ನೀಡಿದೆ.

ಲಖನೌ: ಲಖಿಂಪುರ ಖೇರಿ ಹಿಂಸಾಚಾರದ ಎಂಟು ಆರೋಪಿಗಳಿಗೆ ಅಲಹಾಬಾದ್ ಹೈಕೋರ್ಟ್‌ನ ಲಖನೌ ಪೀಠವು ಮಧ್ಯಂತರ ಜಾಮೀನು ನೀಡಿದೆ. 

ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಅವರಿಗೆ ಸೇರಿದ ಎಸ್‌ಯುವಿ ಕಾರು ಹತ್ತಿಸಿ ನಾಲ್ವರು ರೈತರನ್ನು ಕೊಂದಿದ್ದಕ್ಕಾಗಿ ಎಲ್ಲಾ ಎಂಟು ಮಂದಿಯ ವಿರುದ್ಧ ಪ್ರಕರಣ ದಾಖಲಾಗಿತ್ತು.

2023ರ ಜನವರಿ 25ರಂದು ಆಶಿಶ್ ಮಿಶ್ರಾಗೆ ಸುಪ್ರೀಂ ಕೋರ್ಟ್ ಎಂಟು ವಾರಗಳ ಷರತ್ತುಬದ್ಧ ಮಧ್ಯಂತರ ಜಾಮೀನು ನೀಡಿದ್ದು ಅವರು ಹೊರಗಿದ್ದಾರೆ.

ಎಂಟು ವಾರಗಳ ಮಧ್ಯಂತರ ಜಾಮೀನಿನ ಅವಧಿಯಲ್ಲಿ ಮಿಶ್ರಾ ಅವರು ಉತ್ತರ ಪ್ರದೇಶ ಅಥವಾ ರಾಷ್ಟ್ರೀಯ ರಾಜಧಾನಿ ದೆಹಲಿಯಲ್ಲಿ ಇರಬಾರದು ಎಂದು ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.

ಇನ್ನು ಘಟನೆ ವೇಳೆ ಬಿಜೆಪಿ ಕಾರ್ಯಕರ್ತ ಮತ್ತು ಚಾಲಕನನ್ನು ಹತ್ಯೆ ಮಾಡಿದ್ದ ನಾಲ್ವರು ರೈತರಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಅಲಹಾಬಾದ್ ಹೈಕೋರ್ಟ್ ಮಂಗಳವಾರ ಮಧ್ಯಂತರ ಜಾಮೀನು ಪಡೆದ ಎಂಟು ಆರೋಪಿಗಳಲ್ಲಿ ನಂದನ್ ಸಿಂಗ್ ಬಿಶ್ತ್, ಅಂಕಿತ್ ದಾಸ್, ಲತೀಫ್ ಅಲಿಯಾಸ್ ಕಾಳೆ, ಸತ್ಯಂ ತ್ರಿಪಾಠಿ ಅಲಿಯಾಸ್ ಸತ್ಯ ಪ್ರಕಾಶ್ ತ್ರಿಪಾಠಿ, ಶೇಖರ್ ಭಾರತಿ, ಆಶಿಶ್ ಪಾಂಡೆ, ರಿಂಕೂ ರಾಣಾ ಮತ್ತು ಸುಮಿತ್ ಜೈಸ್ವಾಲ್ ಸೇರಿದ್ದಾರೆ. ಅಂಕಿತ್ ದಾಸ್ ಮಾಜಿ ಕೇಂದ್ರ ಸಚಿವ ಅಖಿಲೇಶ್ ದಾಸ್ ಅವರ ಸೋದರಳಿಯ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಕುರ್ಚಿ ಕಸರತ್ತು: ಸಮಸ್ಯೆಗೆ ಪರಿಹಾರ ಇದ್ದೇ ಇರುತ್ತದೆ, ರಾಹುಲ್-ಸೋನಿಯಾ ಜೊತೆ ಚರ್ಚಿಸಿ ಗೊಂದಲ ಬಗೆಹರಿಸುವೆ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ: ಸಿದ್ದುಗೆ ಪರೋಕ್ಷ ಟಾಂಗ್ ಕೊಟ್ಟರೇ ಡಿಕೆಶಿ..?

ಮೊದಲು ಪರಮೇಶ್ವರ್ ಕೂಲಿ ಚುಕ್ತಾ ಮಾಡಲಿ: ನಂತರ ವಿಧಾನಸಭೆ ವಿಸರ್ಜಿಸಿ ಡಿಕೆಶಿ ನೇತೃತ್ವದಲ್ಲೇ ಚುನಾವಣೆಗೆ ಹೋಗೋಣ!

ನಾವು ಬಿಟ್ಟರು ಧರ್ಮ, ಜಾತಿ ನಮ್ಮನ್ನು ಬಿಡುವುದಿಲ್ಲ: ಒಕ್ಕಲಿಗನಾಗಿ ಹುಟ್ಟಿದ್ದೇನೆ; ಅಶೋಕಣ್ಣನಿಗೆ ಬ್ಯಾಡ್ಜ್ ಕಳಿಸುತ್ತೇನೆ ಹಾಕಿಕೊಳ್ಳಲಿ; DKS

ಅಮೆರಿಕ ಶಕ್ತಿ ಕೇಂದ್ರ ಶ್ವೇತಭವನ ಬಳಿ ಇಬ್ಬರು ಯುಎಸ್ ರಾಷ್ಟ್ರೀಯ ಗಾರ್ಡ್ ಗಳ ಮೇಲೆ ಗುಂಡಿನ ದಾಳಿ: ಶಂಕಿತನ ಗುರುತು ಪತ್ತೆ

SCROLL FOR NEXT