ನವದೆಹಲಿ: ರಾಷ್ಟ್ರೀಯ ತನಿಖಾ ದಳ (ಎನ್ಐಎ) ಫೆ.15 ರಂದು ಬೆಳಿಗ್ಗೆ ಕರ್ನಾಟಕ, ಕೇರಳ, ತಮಿಳುನಾಡು ಸೇರಿ 60 ಸ್ಥಳಗಳಲ್ಲಿ ಶಂಕಿತ ಐಎಸ್ಐಎಸ್ ಬೆಂಬಲಿಗರಿಗಾಗಿ ಶೋಧಕಾರ್ಯಾಚರಣೆ ನಡೆಸಿದೆ.
ವಿಡಿಯೋಗಳ ಮೂಲಕ ಭಯೋತ್ಪಾದನೆಯತ್ತ ಒಲವು ಬೆಳೆಸಿಕೊಂಡಿದ್ದವರಿಗಾಗಿ ಎನ್ಐಎ ಹುಡುಕಾಟ ಪ್ರಾರಂಭಿಸಿದೆ.
ತಮಿಳುನಾಡಿನಲ್ಲಿ ಕೊಯಂಬತ್ತೂರಿನ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶೋಧಕಾರ್ಯಾಚರಣೆ ನಡೆಯುತ್ತಿದೆ.
ಕರ್ನಾಟಕದಲ್ಲೂ ಎನ್ಐಎ 45 ಕ್ಕೂ ಹೆಚ್ಚಿನ ಸ್ಥಳಗಳಲ್ಲಿ ಶೋಧಕಾರ್ಯಾಚರಣೆ ಕೈಗೊಂಡಿದೆ ಎಂದು ರಾಷ್ಟ್ರೀಯ ಸುದ್ದಿ ಮಾಧ್ಯಮವೊಂದು ವರದಿ ಮಾಡಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.