ಭಗವಂತ್ ಮಾನ್ 
ದೇಶ

ಜನರಿಂದ ಚುನಾಯಿತರಾದವರು ನಿರ್ಧಾರಗಳನ್ನು ತೆಗೆದುಕೊಳ್ಳಬೇಕು, ಆಯ್ಕೆ ಆದವರಲ್ಲ: ಸಿಎಂ ಭಗವಂತ ಮಾನ್

ಪಂಜಾಬ್ ಗವರ್ನರ್ ಬನ್ವಾರಿಲಾಲ್ ಪುರೋಹಿತ್ ಅವರು ಮುಖ್ಯಮಂತ್ರಿ ಭಗವಂತ್ ಮಾನ್ ವಿರುದ್ಧ ವಾಗ್ದಾಳಿ ನಡೆಸಿದ ಒಂದು ದಿನದ ನಂತರ, 'ಜನರಿಂದ ಚುನಾಯಿತರಾದವರು ನಿರ್ಧಾರಗಳನ್ನು ತೆಗೆದುಕೊಳ್ಳಬೇಕು ಮತ್ತು ಆಯ್ಕೆಯಾದವರಲ್ಲ' ಎಂದು ಮಾನ್ ತಿರುಗೇಟು ನೀಡಿದ್ದಾರೆ.

ಚಂಡೀಗಢ: ಪಂಜಾಬ್ ಗವರ್ನರ್ ಬನ್ವಾರಿಲಾಲ್ ಪುರೋಹಿತ್ ಅವರು ಮುಖ್ಯಮಂತ್ರಿ ಭಗವಂತ್ ಮಾನ್ ಅವರನ್ನು 'ತಮ್ಮ ಇಚ್ಛೆ ಮತ್ತು ಅಭಿಲಾಷೆಗಳ ಪ್ರಕಾರ ಆಡಳಿತ ನಡೆಸುತ್ತಿದ್ದಾರೆಯೇ ಹೊರತು ಸಂವಿಧಾನದ ಪ್ರಕಾರವಲ್ಲ' ಎಂದು ವಾಗ್ದಾಳಿ ನಡೆಸಿದ ಒಂದು ದಿನದ ನಂತರ, 'ಜನರಿಂದ ಚುನಾಯಿತರಾದವರು ನಿರ್ಧಾರಗಳನ್ನು ತೆಗೆದುಕೊಳ್ಳಬೇಕು ಮತ್ತು ಆಯ್ಕೆಯಾದವರಲ್ಲ' ಮಾನ್ ತಿರುಗೇಟು ನೀಡಿದ್ದಾರೆ.

ತರಬೇತಿಗಾಗಿ ಶಿಕ್ಷಕರನ್ನು ಸಿಂಗಾಪುರಕ್ಕೆ ಕಳುಹಿಸುವ ವಿಧಾನ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಪುರೋಹಿತ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅವರು ಎತ್ತಿರುವ ಪ್ರಶ್ನೆಗಳಿಗೆ ಮಾನ್ ಎಂದಿಗೂ ಉತ್ತರಿಸಿಲ್ಲ ಎಂದು ಆರೋಪಿಸಿ ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ. 15 ದಿನಗಳಲ್ಲಿ ಮಾನ್ ಅವರಿಗೆ ಉತ್ತರಿಸದಿದ್ದರೆ, ಮುಂದಿನ ಕ್ರಮಕ್ಕಾಗಿ ಕಾನೂನು ಸಲಹೆಯನ್ನು ತೆಗೆದುಕೊಳ್ಳಲಾಗುವುದು ಪುರೋಹಿತ್ ಹೇಳಿದ್ದಾರೆ.

ರಾಜ್ಯಪಾಲರಿಗೆ ಪತ್ರ ಬರೆದಿರುವ ಮಾನ್, 'ರಾಜ್ಯದ ನಿವಾಸಿಗಳಿಗೆ ರಾಜ್ಯಪಾಲರ ನೇಮಕದ ಮಾನದಂಡಗಳ ಬಗ್ಗೆ ಸ್ಪಷ್ಟತೆ ಇಲ್ಲದಿರುವಾಗ, ಕೇಂದ್ರ ಸರ್ಕಾರವು ಅಂತಹ ನೇಮಕಾತಿಗಳನ್ನು ಹೇಗೆ ಮಾಡುತ್ತದೆ ಎಂದು ಕೇಳಲು ಬಯಸುತ್ತಾರೆ'. ಸಿಂಗಾಪುರಕ್ಕೆ ಪ್ರಾಂಶುಪಾಲರನ್ನು ಕಳುಹಿಸುವ ಕುರಿತು ರಾಜ್ಯ ಸರ್ಕಾರವನ್ನು ಪ್ರಶ್ನಿಸುವ ಮೊದಲು, ರಾಜ್ಯಪಾಲರು ಈ ಹುದ್ದೆಗೆ ವ್ಯಕ್ತಿಯನ್ನು ನೇಮಿಸಲು ಕೇಂದ್ರವು ಅಳವಡಿಸಿಕೊಂಡಿರುವ ಮಾನದಂಡಗಳ ಕುರಿತು ವಿವರಿಸಬೇಕು ಎಂದು ಹೇಳಿದ್ದಾರೆ.

ಪಂಜಾಬ್ ಮಾಹಿತಿ ಮತ್ತು ಸಂವಹನ ಮತ್ತು ತಂತ್ರಜ್ಞಾನ ಕಾರ್ಪೊರೇಷನ್ ಲಿಮಿಟೆಡ್‌ನ ಅಧ್ಯಕ್ಷರಾಗಿ ಗುರಿಂದರ್‌ಜಿತ್ ಸಿಂಗ್ ಜವಾಂಡಾ ಅವರ ನೇಮಕದ ಕುರಿತು ರಾಜ್ಯಪಾಲರು ಮತ್ತೊಂದು ದೂರನ್ನು ಉಲ್ಲೇಖಿಸಿದ್ದಾರೆ. ಜವಾಂಡ ಅವರು ಅಪಹರಣ ಮತ್ತು ಆಸ್ತಿ-ದೋಚುವಿಕೆ ಪ್ರಕರಣದಲ್ಲಿ ಕಾಣಿಸಿಕೊಂಡಿದ್ದಾರೆ. 'ದಯವಿಟ್ಟು ಪ್ರಕರಣದ ಸಂಪೂರ್ಣ ವಿವರವನ್ನು ನನಗೆ ಕಳುಹಿಸಿ' ಎಂದು ಪುರೋಹಿತ್ ಪತ್ರದಲ್ಲಿ ತಿಳಿಸಿದ್ದಾರೆ.

ರಾಜ್ಯಪಾಲರು ತಮ್ಮ ಪತ್ರದಲ್ಲಿ ಪ್ರಸ್ತಾಪಿಸಿದ ಎಲ್ಲಾ ವಿಷಯಗಳು ನ್ಯಾಯವ್ಯಾಪ್ತಿಯ ಅಂಶಗಳಿಗೆ ಸಂಬಂಧಿಸಿವೆ ಎಂದು ಮಾನ್ ಮಂಗಳವಾರ ಹೇಳಿದ್ದಾರೆ. ನಾನು 3 ಕೋಟಿ ಪಂಜಾಬಿಗಳಿಗೆ ಜವಾಬ್ದಾರನಾಗಿದ್ದೇನೆ. ರಾಜ್ಯ ವಿಧಾನಸಭೆಯಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಪಕ್ಷದ ಶಾಸಕರಿಗೆ ಮನ್ ಅವರು, ಪ್ರಜಾಪ್ರಭುತ್ವದಲ್ಲಿ ಜನರು ಸರ್ವೋಚ್ಚ ಮತ್ತು ಅವರು ಆಯ್ಕೆ ಮಾಡಿದ ಜನರಿಂದ ಸರ್ಕಾರ ನಡೆಯುತ್ತದೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಶಂಕಿತ ದಾಳಿಕೋರ 'ನರಕ ದೇಶ' ಆಫ್ಘಾನಿಸ್ತಾನದಿಂದ ಬಂದವನು, ಇದು ಭಯೋತ್ಪಾದಕ ಕೃತ್ಯ: ನ್ಯಾಷನಲ್ ಗಾರ್ಡ್ ಮೇಲೆ ದಾಳಿಗೆ Donald Trump ತೀವ್ರ ಖಂಡನೆ

ಇದು ಜೈಲಲ್ಲ, ಮದ್ಯದ ಫ್ಯಾಕ್ಟರಿ: ಕೈದಿಗಳಿಂದ ಮದ್ಯ ತಯಾರಿಕೆ? ಏನಾಗುತ್ತಿದೆ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ?

CM ಕುರ್ಚಿ ಕಸರತ್ತು: ಸಮಸ್ಯೆಗೆ ಪರಿಹಾರ ಇದ್ದೇ ಇರುತ್ತದೆ, ರಾಹುಲ್-ಸೋನಿಯಾ ಜೊತೆ ಚರ್ಚಿಸಿ ಗೊಂದಲ ಬಗೆಹರಿಸುವೆ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ರಾಜ್ಯದಲ್ಲಿ ನಾಯಕತ್ವ ಬದಲಾವಣೆ: ಸಿಎಂ ಆಪ್ತ ಗುಂಪಿನಿಂದ ಸ್ಪೋಟಕ ಸಂದೇಶ, ಡಾ. ಜಿ. ಪರಮೇಶ್ವರ್ ಹೇಳಿದ್ದೇನು?

ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ: ಸಿದ್ದುಗೆ ಪರೋಕ್ಷ ಟಾಂಗ್ ಕೊಟ್ಟರೇ ಡಿಕೆಶಿ..?

SCROLL FOR NEXT